ಮತ್ತೆ ಕಳ್ಳಾಟ; ಭಾರತೀಯ ಯೋಧರ ದಾಳಿಗೆ 7 ಪಾಕ್ ಸೈನಿಕರು ಬಲಿ
Team Udayavani, Jan 15, 2018, 3:26 PM IST
ಜಮ್ಮು: ಜಮ್ಮು ಕಾಶ್ಮೀರದ ಗಡಿಭಾಗದ ಉರಿ ಸೆಕ್ಟರ್ ಸಮೀಪ ನಾಲ್ಕು ಮಂದಿ ಜೆಇಎಂ ಉಗ್ರರನ್ನು ಹೊಡೆದುರುಳಿಸಿದ ಬೆನ್ನಲ್ಲೇ ಸೋಮವಾರ ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ನಡೆಸಿದ ಪ್ರತಿದಾಳಿಗೆ ಏಳು ಮಂದಿ ಪಾಕ್ ಸೈನಿಕರು ಬಲಿಯಾಗಿರುವ ಘಟನೆ ನಡೆದಿದೆ.
ಏತನ್ಮಧ್ಯೆ ಭಾರತೀಯ ಸೇನಾಪಡೆ ದಾಳಿಗೆ ಕೇವಲ ನಾಲ್ವರು ಸೈನಿಕರು ಮಾತ್ರ ಸಾವನ್ನಪ್ಪಿದ್ದಾರೆ, ಏಳು ಮಂದಿ ಅಲ್ಲ ಎಂದು ಪಾಕ್ ಸರ್ಕಾರ ಸ್ಪಷ್ಟನೆ ನೀಡಿದೆ.
ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ದೌಲಾಂಜಾ ಗ್ರಾಮದ ಉರಿಯಲ್ಲಿ ಗಡಿ ನುಸುಳಿ ಆತ್ಮಾಹುತಿ ದಾಳಿಗೆ ಯತ್ನಿಸಿದ್ದ ನಾಲ್ವರು ಜೈಷ್ ಎ ಮುಹಮ್ಮದ್ ಉಗ್ರಗಾಮಿ ಸಂಘಟನೆಯ ನಾಲ್ವರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದರು.
ಭಾರತೀಯ ಸೇನೆಯ 70ನೇ ದಿನಾಚರಣೆ ಅಂಗವಾಗಿ ಮಾತನಾಡಿದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಪಾಕಿಸ್ತಾನ ಮತ್ತೆ, ಮತ್ತೆ ಭಾರತದೊಳಕ್ಕೆ ಉಗ್ರರನ್ನು ನುಸುಳಿಸುವ ಕೆಲಸ ಮುಂದುವರಿಸಿದೆ. ಆದರೆ ಅದನ್ನು ನಮ್ಮ(ಭಾರತ) ಸೇನೆ ತಕ್ಕ ಕಾರ್ಯಾಚರಣೆ ಮೂಲಕ ವಿಫಲಗೊಳಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?