ಹಿಮಪಾತಕ್ಕೆ ಸಿಲುಕಿದ್ದ 1500 ಪ್ರವಾಸಿಗರನ್ನು ರಕ್ಷಿಸಿದ ಭಾರತೀಯ ಸೇನೆ
Team Udayavani, Dec 28, 2019, 1:05 PM IST
ಪೂರ್ವ ಸಿಕ್ಕಿಂ: ಉತ್ತರ ಭಾರತ ಸೇರಿದಂತೆ ಈಶಾನ್ಯ ರಾಜ್ಯಗಳು ತೀವ್ರ ಚಳಿಯಿಂದ ತತ್ತರಿಸಿದ್ದು, ಪೂರ್ವ ಸಿಕ್ಕಿಂ ನಲ್ಲಿ ಹಿಮಪಾತಕ್ಕೆ ಸಿಲುಕಿದ್ದ ಸುಮಾರು 1500ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಲಾಗಿದೆ.
ಇಲ್ಲಿನ ಜವಹರಲಾಲ್ ನೆಹರು ರಸ್ತೆಯಲ್ಲಿ ಹಿಮಪಾತದಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಣೆ ಮಾಡಿದೆ.
ರಕ್ಷಿಸಿದ ಪ್ರವಾಸಿಗರಿಗೆ ಅಗತ್ಯ ವಸ್ತುಗಳಾದ ಆಹಾರ, ಬೆಚ್ಚಗಿನ ದಿರಿಸು, ಔಷಧಿ ನೀಡಲಾಗಿದ್ದು, ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಪ್ರವಾಸಿಗರ ಸುರಕ್ಷಿತೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನಾಥುಲಾ ಪಾಸ್ ನಿಂದ ಸುಮಾರು 300 ಟ್ಯಾಕ್ಸಿಗಳಲ್ಲಿ ಸೊಮಂಗ್ ಕೆರೆ ಪ್ರದೇಶಕ್ಕೆ ಸಂಚರಿಸುತ್ತಿದ್ದ ವೇಳೆ ಜವಹರಲಾಲ್ ನೆಹರು ರಸ್ತೆಯಲ್ಲಿ ಹಿಮಪಾತವಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಪ್ರವಾಸಿಗರಿಗೆ 17ನೇ ಮೈಲಿಯ ಸೇನಾ ಶಿಬಿರದಲ್ಲಿ ಆಶ್ರಯ ನೀಡಲಾಗಿದೆ.
ಸೇನೆಯ ಜಿಸಿಬಿ ಮತ್ತು ಇತರ ಯಂತ್ರಗಳ ಮೂಲಕ ರಸ್ತೆಯ ಮೇಲಿನ ಹಿಮವನ್ನು ತೆರವುಗೊಳಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ