500 ಮಂದಿಯ ರಕ್ಷಿಸಿದ ಸೇನೆ; ಸಿಕ್ಕಿಂನ ಉತ್ತರ ಭಾಗದಲ್ಲಿ ಭೂಕುಸಿತ
Team Udayavani, May 21, 2023, 7:20 AM IST
ಗ್ಯಾಂಗ್ಟಕ್: ಸಿಕ್ಕಿಂನ ಉತ್ತರ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಸಿಕ್ಕಿಹಾಕಿಕೊಂಡಿದ್ದ 54 ಮಕ್ಕಳೂ ಸೇರಿದಂತೆ 500 ಮಂದಿ ಪ್ರವಾಸಿಗರನ್ನು ಭೂಸೇನೆ ಯಶಸ್ವಿಯಾಗಿ ಪಾರು ಮಾಡಿದೆ.
ಪ್ರವಾಹ, ಭೂಕುಸಿತದಿಂದಾಗಿ ಲಾಚೆನ್, ಲಾಚುಂಗ್ ಚುಂಗ್ತಾನ್ ಎಂಬಲ್ಲಿ ಸಮಸ್ಯೆ ಉಂಟಾಗಿತ್ತು. ಸಿಕ್ಕಿಹಾಕಿಕೊಂಡಿದ್ದ ಪ್ರವಾಸಿಗರು ಲಾಚುಂಗ್ ಮತ್ತು ಲಾಚೆನ್ ಕಣಿವೆ ಪ್ರದೇಶಗಳಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿಯೇ ಮಳೆಯಾದ್ದರಿಂದ ಅವರೆಲ್ಲ ಚುಂಗ್ತಾನ್ನಲ್ಲಿ ಸಿಕ್ಕಿ ಹಾಕಿಕೊಂಡಿದ್ದರು. ಅವರನ್ನು ಪಾರು ಮಾಡಲು ಜಿಲ್ಲಾಡಳಿತ ಸೇನೆಗೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ತ್ರಿಶಕ್ತಿ ಕಾಪ್ಸ್ìನ ಯೋಧರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ, 500 ಮಂದಿಯನ್ನು ಪಾರು ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿದ ರಕ್ಷಣಾ ಇಲಾಖೆ ವಕ್ತಾರರು, 216 ಮಂದಿ ಪುರುಷರು, 113 ಮಂದಿ ಮಹಿಳೆಯರು, 54 ಮಂದಿ ಮಕ್ಕಳನ್ನು ಪಾರು ಮಾಡಲಾಗಿದೆ. ಅವರನ್ನೆಲ್ಲ ಸೇನೆಯ ಮೂರು ಶಿಬಿರಗಳಿಗೆ ಕರೆದೊಯ್ದು ಬಿಸಿಯಾದ ಆಹಾರ, ಬೆಚ್ಚಗೆ ಇರಲು ವಸ್ತ್ರಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.
ಉತ್ತರ ಸಿಕ್ಕಿಂನ ಜಿಲ್ಲಾಧಿಕಾರಿ ಹೇಮ್ ಚೆಟ್ರಿ ಮಾತನಾಡಿ ಹೆಚ್ಚಿನ ಎಲ್ಲಾ ಪ್ರವಾಸಿಗರು ಪಶ್ಚಿಮ ಬಂಗಾಳಕ್ಕೆ ಸೇರಿದವರು. ಸದ್ಯ ಸ್ಥಳದಲ್ಲಿ ಉಂಟಾಗಿದ್ದ ಭೂಕುಸಿತವನ್ನೂ ತೆರವು ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ