ಗಡಿಯತ್ತ ಟ್ಯಾಂಕರ್‌ಗಟ್ಟಲೆ ತೈಲ ರವಾನೆ ; ಸೇನೆ ಸರ್ವ ಸನ್ನದ್ಧ ಸ್ಥಿತಿಯಲ್ಲಿ ಇರಿಸಲು ಈ ಕ್ರಮ

ಚೀನ ವಸ್ತು ಆಮದು ತಡೆಗೆ ಸಲಹೆ ಕೋರಿದ ಪಿಎಂಒ

Team Udayavani, Jun 22, 2020, 7:49 AM IST

ಗಡಿಯತ್ತ ಟ್ಯಾಂಕರ್‌ಗಟ್ಟಲೆ ತೈಲ ರವಾನೆ ; ಸೇನೆ ಸರ್ವ ಸನ್ನದ್ಧ ಸ್ಥಿತಿಯಲ್ಲಿ ಇರಿಸಲು ಈ ಕ್ರಮ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಭಾರತ – ಚೀನ ಗಡಿಯಲ್ಲಿ ಏರ್ಪಟ್ಟಿರುವ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ, ಭಾರತ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾರಂಭಿಸಿದೆ.

ಗಡಿಯಲ್ಲಿ ಚೀನ ಕಡೆಯಿಂದ ಆಗಿರುವ ಹೆಚ್ಚುವರಿ ಸೇನೆ ನಿಯೋಜನೆಗೆ ಪ್ರತಿಯಾಗಿ ಭಾರತವೂ ಹೆಚ್ಚುವರಿ ಸೇನೆ ನಿಯೋಜನೆಗೆ ಮುಂದಾಗಿದೆ.

ಮತ್ತೊಂದೆಡೆ, ವಾಯು­ಪಡೆಯು ಲಡಾಖ್‌ ಹಾಗೂ ಲೇಹ್‌ನಲ್ಲಿ­ರುವ ವಾಯು ನೆಲೆಗಳಿಗೆ ಸುಖೋಯ್‌ ಮುಂತಾದ ಯುದ್ಧ ವಿಮಾನಗಳನ್ನು ರವಾನಿಸಿದೆ. ಇದೆಲ್ಲದರ ಜೊತೆಯಲ್ಲೇ, ದೇಶೀಯ ತೈಲ ಕಂಪನಿಗಳು ಲಡಾಖ್‌ನಲ್ಲಿರುವ ಸೇನಾ ತೈಲ ಭಂಡಾರಕ್ಕೆ ಅಪಾರ ಪ್ರಮಾಣದ ತೈಲವನ್ನು ಸರಬರಾಜು ಮಾಡಲಾರಂಭಿಸಿವೆ.

ಭಾರತೀಯ ವಾಯುಪಡೆ, ಲೇಹ್‌ ಹಾಗೂ ಶ್ರೀನಗರದಲ್ಲಿ­ರುವ ತನ್ನ ವಾಯುನೆಲೆಗಳಿಗೆ ಸುಖೋಯ್‌ 30 ಎಂಕೆಐ, ಜಾಗ್ವಾರ್‌, ಮಿರಾಜ್‌ 2000 ಯುದ್ಧ ವಿಮಾನಗಳನ್ನು ರವಾನಿಸಿದೆ. ಆ ವಿಮಾನಗಳಿಗಾಗಿ ಲಡಾಖ್‌ನಲ್ಲಿರುವ ತೈಲ ಭಂಡಾರಕ್ಕೆ ಅಗತ್ಯ­ವಿ­ರುವ ತೈಲವನ್ನು ರವಾನಿಸಲು ತೈಲ ಕಂಪನಿಗಳು ನಿರತವಾಗಿವೆ. ಜೊತೆಯಲ್ಲೇ, ಜೆಟ್‌ ಯುದ್ಧ ವಿಮಾನಗಳಿಗೆ ಬೇಕಾಗುವ ಇಂಧನ­ವನ್ನು ಅಗಾಧ ಪ್ರಮಾಣದಲ್ಲಿ ಲಡಾಖ್‌ಗೆ ಕಳುಹಿಸಲಾಗುತ್ತಿದೆ.

ದಿನವೊಂದಕ್ಕೆ 100 ಟ್ಯಾಂಕರ್‌ ತೈಲ: ಜಮ್ಮು, ಜಲಂಧರ್‌, ಸಂಗ್ರೂರ್‌ನಲ್ಲಿರುವ ಇಂಡಿಯನ್‌ ಆಯಿಲ್‌ ತೈಲಾಗಾರಗಳಿಂದ ದಿನಕ್ಕೆ ಏನಿಲ್ಲವೆಂದರೂ, 100 ಟ್ಯಾಂಕರ್‌ಗಳಷ್ಟು ತೈಲ ರವಾನೆಯಾ­ಗುತ್ತಿದೆ. ಡೀಸೆಲ್‌, ಜೆಟ್‌ ಇಂಧನ, ಸೀಮೆ ಎಣ್ಣೆ, ಪೆಟ್ರೋಲನ್ನು ಕಾರ್ಗಿಲ್‌, ಲೇಹ್‌ ಹಾಗೂ ಗಡಿ ರೇಖೆಯ ಸನಿಹಕ್ಕೆ ಕೊಂಡೊಯ್ಯಲಾಗುತ್ತಿದೆ. ಪಂಜಾಬ್‌ನ ಭಟಿಂಡಾದಲ್ಲಿರುವ ಹಿಂದೂಸ್ತಾನ್‌ ಪೆಟ್ರೋಲಿಯಂ ತೈಲಾಗಾರದಿಂದಲೂ ತೈಲ ರವಾನೆಯಾಗುತ್ತಿದೆ.

ಆಮದು ತಡೆಗೆ ಕ್ರಮ: ಹೆಚ್ಚುತ್ತಿರುವ ಚೀನ ಸಾಮಗ್ರಿ ಬಹಿಷ್ಕಾರದ ಕೂಗಿಗೆ ಸ್ಪಂದಿಸಿರುವ ಕೇಂದ್ರ ಸರಕಾರ, ಈ ನಿಟ್ಟಿನಲ್ಲಿ ಮತ್ತೂಂದು ಹೆಜ್ಜೆಯನ್ನಿಟ್ಟಿದೆ. ದೇಶೀಯ ಮಾರುಕಟ್ಟೆಯ ವರ್ತಕರ ಸಮೂಹಕ್ಕೆ ಸೂಚನೆ ರವಾನಿಸಿರುವ ಪ್ರಧಾನಿ ಕಚೇರಿ (ಪಿಎಂಒ), ಚೀನದಿಂದ ಭಾರತಕ್ಕೆ ಅಗ್ಗದ ರೂಪದಲ್ಲಿ ಯಾವ ಸಾಮಗ್ರಿಗಳು ಆಮದಾಗುತ್ತಿವೆ, ಅದೇ ಮಾದರಿಯ ಭಾರತೀಯ ಸಾಮಗ್ರಿಗಳಿಗೂ, ಚೀನ ಸಾಮಗ್ರಿಗಳಿಗೆ ಬೆಲೆ ವ್ಯತ್ಯಾಸವೇನಿದೆ, ಭಾರತೀಯ ಸಾಮಗ್ರಿಗಳ ಮೇಲೆ ತೆರಿಗೆಯಿಂದ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಿದರೆ ಅದೇ ಸಾಮಗ್ರಿಗಳನ್ನು ಇಲ್ಲಿಂದಲೇ ಪಡೆಯಬಹುದೇ ಎಂಬ ಬಗ್ಗೆ ವರದಿಯನ್ನು ನೀಡುವಂತೆ ಸೂಚಿಸಿದೆ.

ಇದಲ್ಲದೆ, ಆತ್ಮನಿರ್ಭರ ಭಾರತವನ್ನು ನಿರ್ಮಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿರುವ ಜೊತೆಯಲ್ಲೇ, ಕಚ್ಚಾ ವಸ್ತುಗಳ ಮೇಲೆ ನಾವು ಚೀನ ಉತ್ಪಾದನಾ ರಂಗವನ್ನು ಅವಲಂಬಿಸುವುದನ್ನೂ ತಪ್ಪಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲು ಇದು ನೆರವಾಗುತ್ತದೆ ಎಂದು ಪ್ರಧಾನಿಯವರ ಕಚೇರಿ ಮೂಲಗಳು ತಿಳಿಸಿವೆ.

ಹೃದಯ ವೈಶಾಲ್ಯ: ಗಾಲ್ವನ್‌ ಘರ್ಷಣೆ ನಡೆದ ಮರುದಿನ ಅಂದರೆ ಜೂ. 16ರಂದು ಹಿಂಸಾಚಾರ ನಡೆದಿದ್ದ ಜಾಗದಲ್ಲಿ ಭಾರತೀಯ ಯೋಧರು ಶತ್ರುಗಳ ಬಗ್ಗೆಯೂ ಹೃದಯ ವೈಶಾಲ್ಯತೆ ಮೆರೆದಿದ್ದರೆಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಜೂ. 15ರ ತಡರಾತ್ರಿ ನಡೆದ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. 40ಕ್ಕೂ ಹೆಚ್ಚು ಚೀನ ಸೈನಿಕರು ಸಾವನ್ನಪ್ಪಿದ್ದರು.

ಮರುದಿನ ಬೆಳಗ್ಗೆ ಗಮನಿಸಿದಾಗ ಘರ್ಷಣೆ ನಡೆದ ಜಾಗದಲ್ಲಿ ಎಲ್ಲೆಂದರಲ್ಲಿ ಚೀನ ಸೈನಿಕರ ಶವಗಳು ಬಿದ್ದಿದ್ದವು.
ಚೀನ ಸೈನಿಕರ ವರ್ತನೆ ಬಗ್ಗೆ ರಕ್ತ ಕುದಿಯುತ್ತಿದ್ದರೂ, ಆ ಸಂದರ್ಭದಲ್ಲಿ ಮಾನವೀಯ ದೃಷ್ಟಿ ಹರಿಸಿದ ಭಾರತೀಯ ಸೈನಿಕರು, ಆ ಶವಗಳನ್ನು ಚೀನ ಸೇನೆಗೆ ಒಪ್ಪಿಸಿದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.