ಲಡಾಖ್ನಲ್ಲಿ ಭಾರತೀಯ ಸೇನೆಯಿಂದ ಸೇತುವೆ ನಿರ್ಮಾಣ
Team Udayavani, Sep 13, 2022, 7:25 AM IST
ನವದೆಹಲಿ: ಪೂರ್ವ ಲಡಾಖ್ನಲ್ಲಿ ಸಿಂಧೂ ನದಿಗೆ ಅಡ್ಡವಾಗಿ ಭಾರತೀಯ ಸೇನೆ ಸೇತುವೆಯನ್ನು ನಿರ್ಮಿಸಿದೆ.
ಭಾರತೀಯ ಸೇನೆಯ ಎಂಜಿನಿಯರಿಂಗ್ ಕೌಶಲ್ಯಕ್ಕೆ ಇದು ಮತ್ತೊಂದು ಉದಾಹರಣೆಯಾಗಿ ನಿಂತಿದೆ.
“ಸೇತುವೆ ನಿರ್ಮಾಣದ ಸವಾಲು-ಯಾವುದೇ ಭೂಪ್ರದೇಶ ಅಥವಾ ಎತ್ತರದ ಪ್ರದೇಶ ಅಡಚಣೆಯಲ್ಲ’ ಎಂಬ ಟೈಟಲ್ನೊಂದಿಗೆ ಭಾರತೀಯ ಸೇನೆಯ ಸೌತ್ ವೆಸ್ಟರ್ನ್ ಕಮಾಂಡ್ ಸೇತುವೆ ನಿರ್ಮಾಣದ ವಿಡಿಯೋ ಅನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದೆ.
ಪೂರ್ವ ಲಡಾಖ್ನಲ್ಲಿ ಸಪ್ತ ಶಕ್ತಿ ಎಂಜಿನಿಯರ್ ವತಿಯಿಂದ ಈ ಸೇತುವೆ ನಿರ್ಮಿಸಲಾಗಿದೆ. ಸೇತುವೆ ನಿರ್ಮಾಣ ಕಾರ್ಯವು ಚಲನಶೀಲ ಚಟುವಟಿಕೆ ಮತ್ತು ತರಬೇತಿ ಒಳಗೊಂಡಿತ್ತು. ಇದರಿಂದ ಯುದ್ಧ ಸಾಮಾಗ್ರಿ ಮತ್ತು ಇತರೆ ಲಾಜಿಸ್ಟಿಕ್ ಸಾಗಾಟಕ್ಕೆ ಸಹಕಾರಿಯಾಗಿದೆ.
‘Bridging Challenges – No Terrain nor Altitude Insurmoutable’#SaptaShaktiEngineers in #EasternLadakh carrying out mobility tasks and training. Bridging the mighty #Indus River, enabling movement of both combat and logistic echelons.#SarvadaAgraniBde#IndianArmy@adgpi pic.twitter.com/7JxiNmhVlm
— SouthWesternCommand_IA (@SWComd_IA) September 11, 2022
ಭಾರಿ ಲೋಹದ ವಸ್ತುಗಳನ್ನು ನದಿಗೆ ಹಾಕುತ್ತಿರುವುದು, ಸೇತುವೆ ನಿರ್ಮಾಣ ಕಾರ್ಯ, ಸೇನಾ ಸಿಬ್ಬಂದಿಯಿಂದ ಸಂಘಟಿತ ಚಟುವಟಿಕೆಗಳು ಮತ್ತು ಅಂತಿಮವಾಗಿ ಸೇತುವೆ ನಿರ್ಮಾಣಗೊಂಡ ನಂತರ ಅದರ ಮೇಲೆ ಭಾರಿ ಗಾತ್ರದ ಟ್ರಕ್ಗಳ ಸಾಗಾಟವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಇನ್ನೊಂದೆಡೆ, ಲಡಾಖ್ ಸೆಕ್ಟರ್ಗೆ ಎರಡು ದಿನಗಳ ಭೇಟಿಯಲ್ಲಿರುವ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಭಾನುವಾರ ಭಾರತೀಯ ವಾಯುಪಡೆಗೆ ಸೇರಿದ ಅಪಾಚೆ ಯುದ್ಧ ಹೆಲಿಕಾಪ್ಟರ್ನಲ್ಲಿ ಹಾರಾಟ ನಡೆಸಿದರು.
ಪೂರ್ವ ಲಡಾಖ್ನಲ್ಲಿನ ನಿಯಂತ್ರಣ ರೇಖೆಯ ಉದ್ದಕ್ಕೂ ಚೀನದೊಂದಿಗೆ ಮಿಲಿಟರಿ ಬಿಕ್ಕಟ್ಟಿನ ಆರಂಭದಿಂದಲೂ ಅಪಾಚೆ ಹೆಲಿಕಾಪ್ಟರ್ಗಳನ್ನು ಲಡಾಖ್ ಸೆಕ್ಟರ್ನಲ್ಲಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ