ಪಾಕಿಸ್ಥಾನದಲ್ಲಿ ಭಾರತೀಯ ರಾಜತಾಂತ್ರಿಕರಿಗೆ ಕೀಟಲೆ, ಕಿರುಕುಳ


Team Udayavani, Dec 22, 2018, 11:39 AM IST

wagha-border-retrat-700.jpg

ಹೊಸದಿಲ್ಲಿ : ಪಾಕಿಸ್ಥಾನದಲ್ಲಿ  ಕರ್ತವ್ಯದ ಮೇಲೆ ವಾಸವಾಗಿರುವ ಅನೇಕ ಭಾರತೀಯ ರಾಜತಾಂತ್ರಿಕರಿಗೆ ನೆರೆಯ ದೇಶದಲ್ಲಿ ಕಿರುಕುಳ ನೀಡಲಾಗುತ್ತಿರುವ ಬಗ್ಗೆ  ಅನೇಕ ದೂರುಗಳು ಬರುತ್ತಿವೆ. 

ಭಾರತೀಯ ರಾಜತಾಂತ್ರಿಕರ ನಿವಾಸಗಳಿಗೆ ಹೊಸ ಗ್ಯಾಸ್‌ ಕನೆಕ್ಷನ್‌ ನಿರಾಕರಿಸುವುದು; ಅವರನ್ನು ಭೇಟಿಯಾಗಲು ಬರುವ ಅತಿಥಿಗಳಿಗೆ ಕಿರುಕುಳ ನೀಡುವುದು; ಕೆಲವು ಹಿರಿಯ ಅಧಿಕಾರಿಗಳ ಇಂಟರ್‌ನೆಟ್‌ ಸಂಪರ್ಕವನ್ನು ತಡೆಯುವುದು – ಇವೇ ಮೊದಲಾದ ರೀತಿಯಲ್ಲಿ ಭಾರತೀಯ ರಾಜತಾಂತ್ರಿಕರಿಗೆ ಪಾಕ್‌ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಕಳೆದ ಡಿ.10ರಂದು ಭಾರತೀಯ ರಾಜತಾಂತ್ರಿಕರೋರ್ವರ ಅಧಿಕೃತ ನಿವಾಸಕ್ಕೆ ಆಗಂತುಕನೋರ್ವ ಯಾವುದೇ ಬಗೆಯ ಭದ್ರತೆಯ ಅಡೆತಡೆಗಳಿಲ್ಲದೆ ನೇರವಾಗಿ ನುಗ್ಗಿ ಬಂದಿದ್ದ. 

ಈ ಎಲ್ಲ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿರುವ  ವಿದೇಶ ವ್ಯವಹಾರಗಳ ಸಚಿವಾಲಯ ಈ ವಿಷಯವನ್ನು ಪಾಕ್‌ ಉನ್ನತರಲ್ಲಿ ಎತ್ತಿದೆ. ಈ ರೀತಿಯ ತೊಂದರೆಗಳನ್ನು ನೀಡಕೂಡದೆಂದು ಅದು ಸ್ಪಷ್ಟವಾಗಿ ತಿಳಿಸಿದೆ.

ಹಾಗೆ ನೋಡಿದರೆ ಪಾಕಿಸ್ಥಾನದಲ್ಲಿನ ಭಾರತೀಯ ರಾಜತಾಂತ್ರಿಕರಿಗೆ ಪಾಕ್‌ ಅಧಿಕಾರಿಗಳು ಕಿರುಕುಳ ನೀಡುವುದು ಇದೇ ಮೊದಲಲ್ಲ. ಈ ವರ್ಷ ಮಾರ್ಚ್‌ನಲ್ಲೂ ಪಾಕ್‌ ಅಧಿಕಾರಿಗಳು ಭಾರತೀಯ ರಾಜತಾಂತ್ರಿಕರಿಗೆ ಕಿರುಕುಳ ನೀಡಿದ್ದರು. 

ವಿಚಿತ್ರವೆಂದರೆ ದಿಲ್ಲಿಯಲ್ಲಿನ ಪಾಕ್‌ ದೂತಾವಾಸದ ಅಧಿಕಾರಿಗಳು ಕೂಡ ತಮಗೆ ಕೂಡ ಭಾರತೀಯ ಅಧಿಕಾರಿಗಳು ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ 30ರಂದು ಉಭಯ ದೇಶಗಳು ಉನ್ನತ ಮಟ್ಟದ ಚರ್ಚೆ ನಡೆಸಿ ರಾಜತಾಂತ್ರಿಕರಿಗೆ ಸಂಬಂಧಿಸಿದ 1992ರ ನೀತಿ ಸಂಹಿತೆಗೆ ಅನುಗುಣವಾಗಿ ಈ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸಲು ಒಪ್ಪಿಕೊಂಡಿದ್ದವು. ಆದರೆ  ಪಾಕ್‌ ಚಾಳಿ ಮಾತ್ರ ಅಂತೆಯೇ ಮುಂದುವರಿರಿದೆ ಎಂದು ಭಾರತೀಯ ದೂತಾವಾಸದ ಮೂಲಗಳು ಹೇಳಿವೆ.  

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.