ಕಂದಹಾರ್ ನಲ್ಲಿ ತಾಲಿಬಾನ್ ಹಿಡಿತ: ರಾಯಭಾರ ಕಚೇರಿಯ ಸಿಬ್ಬಂದಿಗಳ ವಾಪಾಸ್ ಗೆ ಭಾರತ ಕ್ರಮ
Team Udayavani, Jul 11, 2021, 1:43 PM IST
ಹೊಸದಿಲ್ಲಿ: ಅಫ್ಘಾನಿಸ್ತಾನದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ದಕ್ಷಿಣ ಅಫ್ಘಾನ್ ನಗರದ ಸುತ್ತಮುತ್ತಲಿನ ಹೊಸ ಪ್ರದೇಶಗಳ ಮೇಲೆ ತಾಲಿಬಾನ್ ಹಿಡಿತ ಸಾಧಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಭಾರತವು ಸುಮಾರು 50 ಭಾರತೀಯ ರಾಜತಾಂತ್ರಿಕರು ಮತ್ತು ಭದ್ರತಾ ಅಧಿಕಾರಿಗಳನ್ನು ಕಂದಹಾರ್ನ ತನ್ನ ದೂತಾವಾಸದಿಂದ ಕರೆಸಿಕೊಂಡಿದೆ.
ಶನಿವಾರ ಭಾರತೀಯ ವಾಯುಪಡೆಯ ವಿಮಾನದಲ್ಲಿ 50 ಭಾರತೀಯರನ್ನು ನವದೆಹಲಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.
“ಸ್ಥಳೀಯ ಸಿಬ್ಬಂದಿ ಇನ್ನೂ ಕಾರ್ಯಾಚರಣೆಯಲ್ಲಿದ್ದಾರೆ. ಆದರೆ, ಪ್ರಾಯೋಗಿಕ ಉದ್ದೇಶಗಳಿಗಾಗಿ, ದೂತಾವಾಸವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ” ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಪದ್ಮ ಪ್ರಶಸ್ತಿಗಾಗಿ ಸಾಧಕರನ್ನು ನಾಮನಿರ್ದೇಶನ ಮಾಡಿ: ನಾಗರಿಕರಿಗೆ ಪ್ರಧಾನಿ ಮೋದಿ ವಿನಂತಿ
ಸದ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿರುವುದರಿಂದ ಭಾರತ ಕಂದಹಾರ್ ನಲ್ಲಿರುವ ಧೂತವಾಸ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ. ಆದರೆ ಧೀರ್ಘಕಾಲಿಕವಾಗಿ ಧೂತವಾಸ ವ್ಯವಹಾರಗಳನ್ನು ಕಡಿತ ಮಾಡುವ ಕುರಿತು ಯಾವ ನಿರ್ಧಾರಗಳನ್ನು ಮಾಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಫ್ಘಾನಿಸ್ಥಾನದಲ್ಲಿ ಕಳೆದ ಎರಡು ದಶಕಗಳಿಂದ ತಾಲಿಬಾನಿಗಳ ವಿರುದ್ಧ ಹೋರಾಟ ನಡೆಸಿದ್ದ ಅಮೆರಿಕಾ ಇತ್ತಿಚೆಗೆ ತನ್ನ ಭದ್ರತಾ ಪಡೆಗಳನ್ನು ಹಿಂಪಡೆಯುವ ಪ್ರಕ್ರಿಯೆಗಳನ್ನು ಆರಂಭಿಸಿದೆ.
ದಕ್ಷಿಣ ಅಫ್ಘಾನಿಸ್ತಾನದಲ್ಲಿ ತೀವ್ರ ಘರ್ಷಣೆಗಳಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ ದ ಸಾವಿರಾರು ಸಹಚರರು ತಾಲಿಬಾನ್ ಹೋರಾಟಗಾರರೊಂದಿಗೆ ಸೇರ್ಪಡೆಗೊಂಡಿದ್ದಾರೆ ಎಂಬ ವರದಿಗಳು ಹೊರಬಿದ್ದ ಕಾರಣ, ಭಾರತೀಯ ಭದ್ರತಾ ಸಂಸ್ಥೆಯು ಭಾರತೀಯ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಈ ನಿರ್ಧಾರ ಕೈಗೊಂಡಿದೆ.
ಇದನ್ನೂ ಓದಿ: ಯಾರೇ ರಾಜಕಾರಣಿ ಆದ್ರೂ ಎಲ್ಲೇ ಮೀರಿ ವರ್ತಿಸಬಾರದು,ಡಿಕೆಶಿ ವರ್ತನೆ ವಿರುದ್ಧ ಕಟೀಲ್ ವಾಗ್ದಾಳಿ
ಆಫ್ಘಾನಿಸ್ಥಾನದಲ್ಲಿ ಕಳೆದ ಎರಡು ದಶಕಗಳಿಂದ ತಾಲಿಬಾನಿಗಳ ವಿರುದ್ಧ ಹೋರಾಟ ನಡೆಸಿದ್ದ ಅಮೆರಿಕಾ ಇತ್ತಿಚೆಗೆ ತನ್ನ ಭದ್ರತಾ ಪಡೆಗಳನ್ನು ಹಿಂಪಡೆಯುವ ಪ್ರಕ್ರಿಯೆಗಳನ್ನು ಆರಂಭಿಸಿದೆ. ಅದು ಬಹುತೇಕ ಆಗಸ್ಟ್ ವೇಳೆಗೆ ಅಂತ್ಯವಾಗಲಿದೆ. ಅದರ ಬೆನ್ನಲ್ಲೆ ಆಫ್ಘನ್ನ ಪಶ್ಚಿಮವಲಯದ ಪ್ರಮುಖ ಪ್ರದೇಶಗಳನ್ನು ತಾಲಿಬಾನಿಗಳು ತಮ್ಮ ವಶಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಈ ಬೆಳವಣಿಗೆಗಳ ಮೇಲೆ ನಿಗಾ ಇಟ್ಟಿದ್ದ ಭಾರತ ತಮ್ಮ ದೇಶದ ಪ್ರಜೆಗಳ ಸುರಕ್ಷತೆ ಬಗ್ಗೆ ತುರ್ತು ಸ್ಪಂದನೆ ಮಾಡಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ