2047ರ ವೇಳೆಗೆ ಭಾರತೀಯ ನೌಕಾಪಡೆ ಸಂಪೂರ್ಣ ಸ್ವಾವಲಂಬಿ: ನೌಕಾಪಡೆ ಮುಖ್ಯಸ್ಥ
Team Udayavani, Dec 3, 2022, 5:43 PM IST
ನವದೆಹಲಿ: ಭಾರತೀಯ ನೌಕಾಪಡೆಯು 2047 ರ ವೇಳೆಗೆ ‘ಆತ್ಮನಿರ್ಭರ್’ (ಸ್ವಾವಲಂಬಿ) ಆಗಲಿದೆ ಎಂದು ಸರ್ಕಾರಕ್ಕೆ ಭರವಸೆ ನೀಡುವುದಾಗಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಶನಿವಾರ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನದ ವಿವಿಧ ಮಿಲಿಟರಿ ಮತ್ತು ಸಂಶೋಧನಾ ಹಡಗುಗಳ ಚಲನವಲನಗಳ ಮೇಲೆ ನೌಕಾಪಡೆಯು ತೀವ್ರ ನಿಗಾ ಇರಿಸುತ್ತದೆ ಎಂದು ಹೇಳಿದರು.
ಕಳೆದ ಒಂದು ವರ್ಷದಲ್ಲಿ ಭಾರತೀಯ ನೌಕಾಪಡೆಯು ಅತ್ಯಂತ ಹೆಚ್ಚಿನ ಕಾರ್ಯಾಚರಣೆಯ ವೇಗವನ್ನು ಸಾಧಿಸಿದ್ದು, ಇದರ ಜೊತೆಗೆ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ:ಕಬ್ಬಿನಾಲೆಯ ಪ್ರಕೃತಿ ಸೌಂದರ್ಯಯಕ್ಕೆ ಮತ್ತೊಂದು ಹೆಸರೇ ‘ಮತ್ತಾವು ಜಲಪಾತ’…
ಆತ್ಮನಿರ್ಭರ್ ಭಾರತ್ ಕುರಿತು ಸರ್ಕಾರವು ನಮಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. 2047 ರ ವೇಳೆಗೆ ಭಾರತೀಯ ನೌಕಾಪಡೆಯು ಆತ್ಮನಿರ್ಭರ್ ಆಗಲಿದೆ ಎಂದು ನಾವು ಭರವಸೆ ನೀಡಿದ್ದೇವೆ ಎಂದು ನೌಕಾಪಡೆಯ ಮುಖ್ಯಸ್ಥರು ಹೇಳಿದರು.
ಅಗ್ನಿವೀರ್ ಯೋಜನೆಯಡಿಯಲ್ಲಿ ಭಾರತೀಯ ನೌಕಾಪಡೆಗೆ ಸುಮಾರು 3,000 ಅಗ್ನಿವೀರ್ಗಳು ಆಗಮಿಸಿದ್ದು, ಅವರಲ್ಲಿ 341 ಮಹಿಳೆಯರನ್ನು ಮೊದಲ ಬಾರಿಗೆ ನಾವು ಮಹಿಳಾ ನಾವಿಕರನ್ನು ಸೇರ್ಪಡೆಗೊಳಿಸುತ್ತಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್ಪಾಲ್ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?
ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ
ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ
ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು
ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್ಪಾಲ್ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?
ಸಬ್ರಿಜಿಸ್ಟ್ರಾರ್ ಕಚೇರಿಗಳು ಇನ್ನು ಸ್ಮಾರ್ಟ್
ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ
ಶ್ರೀರಾಮನ ವನವಾಸದ ಚಿತ್ರಕೂಟ ಭಾರತೀಯರೆಲ್ಲ ವೀಕ್ಷಿಸಬೇಕಾದ ಸ್ಥಳ;ವಿದ್ಯಾಧೀಶ ತೀರ್ಥ ಸ್ವಾಮೀಜಿ