ವಿಶಾಖಪಟ್ಟಣ: ಒತ್ತೆಯಾಳುಗಳ ರಕ್ಷಣೆಗೆ ಧಾವಿಸಿದ ‘ಮಾರ್ಕೋಸ್’

ವಿಶಾಖಪಟ್ಟಣದ ಹೊಟೇಲಿನಲ್ಲಿ ನೌಕಾದಳದಿಂದ ನಡೆಯಿತು ರೋಚಕ ರಕ್ಷಣಾ ಕಾರ್ಯಾಚರಣೆ!

Team Udayavani, May 15, 2019, 10:54 AM IST

Marcos-726

ವಿಶಾಖಪಟ್ಟಣ: ಆ ಐಷಾರಾಮಿ ಹೊಟೇಲೊಂದರಲ್ಲಿ ತಂಗಿದ್ದ ಪ್ರವಾಸಿಗರು ಕಂಗಾಲಾಗಿದ್ದರು. ಕಾರಣ ಕೆಲವು ಆಗಂತುಕರು ಆ ಹೊಟೇಲಿನಲ್ಲಿದ್ದ ಪ್ರವಾಸಿಗರನ್ನು ಒತ್ತೆಯಾಳಾಗಿರಿಸಿದ್ದರು. ಈ ವಿಚಾರ ತಿಳಿದು ಒತ್ತೆ ನಿಗ್ರಹ ಕಾರ್ಯಾಚರಣೆಗೆ ದೌಡಾಯಿಸಿದ್ದು ನಮ್ಮ ಹೆಮ್ಮೆಯ ನೌಕಾದಳದ ವಿಶೇಷ ಕಾರ್ಯಾಚರಣೆ ಪಡೆ ‘ಮಾರ್ಕೋಸ್’. ಮತ್ತು ಈ ಹೊಟೇಲನ್ನು ಪ್ರವೇಶಿಸಲು ಈ ಪಡೆಗಳು ಬಳಸಿದ್ದು ಸೀಕಿಂಗ್ 42ಸಿ ಹೆಲಿಕಾಫ್ಟರ್ ಗಳನ್ನು.

ಸೀಕಿಂಗ್ ಹೆಲಿಕಾಫ್ಟರ್ ಗಳನ್ನು ಬಳಸಿಕೊಂಡು ಆ ಬಹುಮಹಡಿ ಹೊಟೇಲ್ ಕಟ್ಟಡದ ಮೇಲ್ಛಾವಣಿಯಲ್ಲಿ ಇಳಿದು ಹೊಟೇಲನ್ನು ಪ್ರವೆಶಿಸುವ ನಮ್ಮ ಹೆಮ್ಮೆಯ ಮಾರ್ಕೋಸ್ ಕಮಾಂಡೋಗಳು ಅಲ್ಲಿ ಪ್ರವಾಸಿಗರನ್ನು ಒತ್ತೆಯಿರಿಸಿಕೊಂಡಿದ್ದ ಜಾಗಕ್ಕೆ ತೆರಳುತ್ತಾರೆ.

ಬಳಿಕ ಕಾರ್ಯಾಚರಣೆ ನಡೆಸಿ ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸುತ್ತಾರೆ. ಕಾರ್ಯಾಚರಣೆಯಲ್ಲಿ ಹತರಾದ ಅಥವಾ ಸೆರೆ ಸಿಕ್ಕಿದ ಉಗ್ರರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಹೆಚ್ಚಿನ ವಿವರಗಳು ಲಭ್ಯವಿಲ್ಲ!

ಗಾಬರಿಯಾಗಬೇಡಿ, ಇದು ಭಾರತೀಯ ನೌಕಾದಳವು ಇತ್ತೀಚೆಗೆ ನಡೆಸಿದ ಅಣಕು ರಕ್ಷಣಾ ಕಾರ್ಯಾಚರಣೆಯ ಒಂದು ಝಲಕ್. ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯಲ್ಲಿರುವ ಹೊಟೇಲೊಂದರಲ್ಲಿ ಮಾರ್ಕೋಸ್ ಪಡೆಗಳು ಸೀಕಿಂಗ್ ಹೆಲಿಕಾಫ್ಟರ್ ಗಳ ನೆರವಿನಿಂದ ಈ ಅಣಕು ಕಾರ್ಯಾಚರಣೆಯನ್ನು ನಡೆಸಿತು.

ಈ ಅಣಕು ಕಾರ್ಯಾಚರಣೆಯ ವಿಡಿಯೋ ತುಣುಕೊಂದನ್ನು ನೌಕಾದಳದ ಆಧಿಕೃತ ವಕ್ತಾರರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿವಿಧ ರಕ್ಷಣಾ ಸಾಮಾಗ್ರಿ ತಯಾರಕ ಕಂಪೆನಿ ಪ್ರತಿನಿಧಿಗಳು ಈ ಅಣಕು ಕಾರ್ಯಾಚರಣೆಗೆ ಸಾಕ್ಷಿಯಾಗಿದ್ದರು. ಈ ಹಿಂದೆ ಸಾಗರ ಕಮಾಂಡೋ ಪಡೆ ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದ ‘ಮಾರ್ಕೋಸ್’ ಪಡೆಯನ್ನು ವಿಶೇಷ ಕಾರ್ಯಾಚರಣೆಯ ಉದ್ದೇಶಕ್ಕಾಗಿ ಭಾರತೀಯ ನೌಕಾದಳವು ಬಳಸಿಕೊಳ್ಳುತ್ತಿದೆ.

ಯಾವುದೇ ವ್ಯತಿರಿಕ್ತ ಸನ್ನಿವೇಶದಲ್ಲೂ ಕಾರ್ಯಾಚರಣೆ ಮಾಡಬಲ್ಲ ಸಾಮರ್ಥ್ಯವನ್ನು ಈ ಕಮಾಂಡೋ ಪಡೆ ಹೊಂದಿದ್ದು ದಿನದ 24 ಗಂಟೆಗಳ ಕಾಲವೂ ಸನ್ನದ್ಧ ಸ್ಥಿತಿಯಲ್ಲಿರುವ ಈ ಪಡೆ ಕಾಶ್ಮೀರದಲ್ಲೂ, ಗೋವಾದಲ್ಲೂ ಅಥವಾ ಸೊಮಾಲಿಯಾದ ಕಡಲ ಮಧ್ಯದಲ್ಲೂ ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಹೊಂದಿದೆ.

ಆಳ ಸಮುದ್ರದಲ್ಲಿ ವೈರಿ ಹಡಗುಗಳ ಮೆಲೆ ಗುಪ್ತ ಕಾರ್ಯಾಚರಣೆಯನ್ನು ನಡೆಸುವುದು, ತೀರ ಕಾರ್ಯಾಚರಣೆ, ಉಗ್ರ ನಿಗ್ರಹ ಕಾರ್ಯಾಚರಣೆ ಸೇರಿದಂತೆ ಸಾಗರದಲ್ಲಿರಲಿ ಅಥವಾ ಸಾಗರ ತೀರದಲ್ಲಿರಲಿ ಯಾವುದೇ ಪ್ರತಿಕೂಲ ಸನ್ನಿವೇಶಗಳನ್ನು ಎದುರಿಸಲು ಮಾರ್ಕೋಸ್ ಕಮಾಂಡೋಗಳು ಸದಾ ಸಿದ್ಧರಾಗಿರುತ್ತಾರೆ.

ಮಾರ್ಕೋಸ್ ಕಮಾಂಡೋಗಳ ಚಾಕಚಕ್ಯತೆಗೆ ಬಲ ತುಂಬುವುದೇ ಈ ರೀತಿಯ ಅಣಕು ಕಾರ್ಯಾಚರಣೆಗಳು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.