ವಿಶಾಖಪಟ್ಟಣ: ಒತ್ತೆಯಾಳುಗಳ ರಕ್ಷಣೆಗೆ ಧಾವಿಸಿದ ‘ಮಾರ್ಕೋಸ್’

ವಿಶಾಖಪಟ್ಟಣದ ಹೊಟೇಲಿನಲ್ಲಿ ನೌಕಾದಳದಿಂದ ನಡೆಯಿತು ರೋಚಕ ರಕ್ಷಣಾ ಕಾರ್ಯಾಚರಣೆ!

Team Udayavani, May 15, 2019, 10:54 AM IST

Marcos-726

ವಿಶಾಖಪಟ್ಟಣ: ಆ ಐಷಾರಾಮಿ ಹೊಟೇಲೊಂದರಲ್ಲಿ ತಂಗಿದ್ದ ಪ್ರವಾಸಿಗರು ಕಂಗಾಲಾಗಿದ್ದರು. ಕಾರಣ ಕೆಲವು ಆಗಂತುಕರು ಆ ಹೊಟೇಲಿನಲ್ಲಿದ್ದ ಪ್ರವಾಸಿಗರನ್ನು ಒತ್ತೆಯಾಳಾಗಿರಿಸಿದ್ದರು. ಈ ವಿಚಾರ ತಿಳಿದು ಒತ್ತೆ ನಿಗ್ರಹ ಕಾರ್ಯಾಚರಣೆಗೆ ದೌಡಾಯಿಸಿದ್ದು ನಮ್ಮ ಹೆಮ್ಮೆಯ ನೌಕಾದಳದ ವಿಶೇಷ ಕಾರ್ಯಾಚರಣೆ ಪಡೆ ‘ಮಾರ್ಕೋಸ್’. ಮತ್ತು ಈ ಹೊಟೇಲನ್ನು ಪ್ರವೇಶಿಸಲು ಈ ಪಡೆಗಳು ಬಳಸಿದ್ದು ಸೀಕಿಂಗ್ 42ಸಿ ಹೆಲಿಕಾಫ್ಟರ್ ಗಳನ್ನು.

ಸೀಕಿಂಗ್ ಹೆಲಿಕಾಫ್ಟರ್ ಗಳನ್ನು ಬಳಸಿಕೊಂಡು ಆ ಬಹುಮಹಡಿ ಹೊಟೇಲ್ ಕಟ್ಟಡದ ಮೇಲ್ಛಾವಣಿಯಲ್ಲಿ ಇಳಿದು ಹೊಟೇಲನ್ನು ಪ್ರವೆಶಿಸುವ ನಮ್ಮ ಹೆಮ್ಮೆಯ ಮಾರ್ಕೋಸ್ ಕಮಾಂಡೋಗಳು ಅಲ್ಲಿ ಪ್ರವಾಸಿಗರನ್ನು ಒತ್ತೆಯಿರಿಸಿಕೊಂಡಿದ್ದ ಜಾಗಕ್ಕೆ ತೆರಳುತ್ತಾರೆ.

ಬಳಿಕ ಕಾರ್ಯಾಚರಣೆ ನಡೆಸಿ ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸುತ್ತಾರೆ. ಕಾರ್ಯಾಚರಣೆಯಲ್ಲಿ ಹತರಾದ ಅಥವಾ ಸೆರೆ ಸಿಕ್ಕಿದ ಉಗ್ರರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಹೆಚ್ಚಿನ ವಿವರಗಳು ಲಭ್ಯವಿಲ್ಲ!

ಗಾಬರಿಯಾಗಬೇಡಿ, ಇದು ಭಾರತೀಯ ನೌಕಾದಳವು ಇತ್ತೀಚೆಗೆ ನಡೆಸಿದ ಅಣಕು ರಕ್ಷಣಾ ಕಾರ್ಯಾಚರಣೆಯ ಒಂದು ಝಲಕ್. ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯಲ್ಲಿರುವ ಹೊಟೇಲೊಂದರಲ್ಲಿ ಮಾರ್ಕೋಸ್ ಪಡೆಗಳು ಸೀಕಿಂಗ್ ಹೆಲಿಕಾಫ್ಟರ್ ಗಳ ನೆರವಿನಿಂದ ಈ ಅಣಕು ಕಾರ್ಯಾಚರಣೆಯನ್ನು ನಡೆಸಿತು.

ಈ ಅಣಕು ಕಾರ್ಯಾಚರಣೆಯ ವಿಡಿಯೋ ತುಣುಕೊಂದನ್ನು ನೌಕಾದಳದ ಆಧಿಕೃತ ವಕ್ತಾರರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿವಿಧ ರಕ್ಷಣಾ ಸಾಮಾಗ್ರಿ ತಯಾರಕ ಕಂಪೆನಿ ಪ್ರತಿನಿಧಿಗಳು ಈ ಅಣಕು ಕಾರ್ಯಾಚರಣೆಗೆ ಸಾಕ್ಷಿಯಾಗಿದ್ದರು. ಈ ಹಿಂದೆ ಸಾಗರ ಕಮಾಂಡೋ ಪಡೆ ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದ ‘ಮಾರ್ಕೋಸ್’ ಪಡೆಯನ್ನು ವಿಶೇಷ ಕಾರ್ಯಾಚರಣೆಯ ಉದ್ದೇಶಕ್ಕಾಗಿ ಭಾರತೀಯ ನೌಕಾದಳವು ಬಳಸಿಕೊಳ್ಳುತ್ತಿದೆ.

ಯಾವುದೇ ವ್ಯತಿರಿಕ್ತ ಸನ್ನಿವೇಶದಲ್ಲೂ ಕಾರ್ಯಾಚರಣೆ ಮಾಡಬಲ್ಲ ಸಾಮರ್ಥ್ಯವನ್ನು ಈ ಕಮಾಂಡೋ ಪಡೆ ಹೊಂದಿದ್ದು ದಿನದ 24 ಗಂಟೆಗಳ ಕಾಲವೂ ಸನ್ನದ್ಧ ಸ್ಥಿತಿಯಲ್ಲಿರುವ ಈ ಪಡೆ ಕಾಶ್ಮೀರದಲ್ಲೂ, ಗೋವಾದಲ್ಲೂ ಅಥವಾ ಸೊಮಾಲಿಯಾದ ಕಡಲ ಮಧ್ಯದಲ್ಲೂ ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಹೊಂದಿದೆ.

ಆಳ ಸಮುದ್ರದಲ್ಲಿ ವೈರಿ ಹಡಗುಗಳ ಮೆಲೆ ಗುಪ್ತ ಕಾರ್ಯಾಚರಣೆಯನ್ನು ನಡೆಸುವುದು, ತೀರ ಕಾರ್ಯಾಚರಣೆ, ಉಗ್ರ ನಿಗ್ರಹ ಕಾರ್ಯಾಚರಣೆ ಸೇರಿದಂತೆ ಸಾಗರದಲ್ಲಿರಲಿ ಅಥವಾ ಸಾಗರ ತೀರದಲ್ಲಿರಲಿ ಯಾವುದೇ ಪ್ರತಿಕೂಲ ಸನ್ನಿವೇಶಗಳನ್ನು ಎದುರಿಸಲು ಮಾರ್ಕೋಸ್ ಕಮಾಂಡೋಗಳು ಸದಾ ಸಿದ್ಧರಾಗಿರುತ್ತಾರೆ.

ಮಾರ್ಕೋಸ್ ಕಮಾಂಡೋಗಳ ಚಾಕಚಕ್ಯತೆಗೆ ಬಲ ತುಂಬುವುದೇ ಈ ರೀತಿಯ ಅಣಕು ಕಾರ್ಯಾಚರಣೆಗಳು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.