ಆಕಾಶ ಮಾರ್ಗದಲ್ಲೇ 2 ಬಾರಿ ಹೃದಯ ಸ್ತಂಭನಕ್ಕೊಳಗಾಗಿದ್ದ ಪ್ರಯಾಣಿಕನ ಜೀವ ಉಳಿಸಿದ ಭಾರತೀಯ ಮೂಲದ ವೈದ್ಯ..

ಮುಂಬೈ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಲು ವ್ಯವಸ್ಥೆ ಮಾಡಿದ್ದರು.

Team Udayavani, Jan 6, 2023, 3:16 PM IST

ಆಕಾಶ ಮಾರ್ಗದಲ್ಲೇ 2 ಬಾರಿ ಹೃದಯ ಸ್ತಂಭನಕ್ಕೊಳಗಾಗಿದ್ದ ಪ್ರಯಾಣಿಕನ ಜೀವ ಉಳಿಸಿದ ಭಾರತೀಯ ಮೂಲದ ವೈದ್ಯ..

ವಾಷಿಂಗ್ಟನ್/ನವದೆಹಲಿ: ದೀರ್ಘಕಾಲ ಪ್ರಯಾಣದ ವಿಮಾನವೊಂದರಲ್ಲಿ ಆಕಾಶ ಮಾರ್ಗದಲ್ಲಿಯೇ ಎರಡು ಬಾರಿ ಹೃದಯ ಸ್ತಂಭನಕ್ಕೊಳಗಾಗಿದ್ದ ಪ್ರಯಾಣಿಕರೊಬ್ಬರ ಜೀವವನ್ನು ಭಾರತೀಯ ಮೂಲದ ವೈದ್ಯರೊಬ್ಬರು ಉಳಿಸಿದ ಘಟನೆ ನಡೆದಿದ್ದು, ಡಾ.ವಿಶ್ವರಾಜ್ ವೇಮಲಾ ಅವರ ಕರ್ತವ್ಯ ಪ್ರಜ್ಞೆಗೆ ನೆಟ್ಟಿಗರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಭ್ರಷ್ಟಾಚಾರ ರಕ್ತ ಬೀಜಾಸುರರನ್ನು ಹುಟ್ಟಿಸಿದ್ದೆ ಕಾಂಗ್ರೆಸ್ : ಪ್ರಹ್ಲಾದ್ ಜೋಶಿ

ಪತ್ರಿಕಾ ಪ್ರಕಟಣೆಯ ಪ್ರಕಾರ, ಡಾ.ವೇಮಲಾ ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ಹೆಪಟೋಲೋಜಿಸ್ಟ್ (ರಕ್ತ ಸೋಂಕಿನ ತಜ್ಞ ವೈದ್ಯ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಡಾ. ವೇಮಲಾ ಕಳೆದ ವರ್ಷ ನವೆಂಬರ್ ನಲ್ಲಿ ಯುನೈಟೆಡ್ ಕಿಂಗ್ ಡಮ್ ನಿಂದ ಭಾರತಕ್ಕೆ ಪ್ರಯಾಣ ಬೆಳೆಸಿದ್ದರು. ಅವರು ತಮ್ಮ ತಾಯಿಯನ್ನು ಯುಕೆಯಿಂದ ತಾಯ್ನಾಡು ಬೆಂಗಳೂರಿಗೆ ಕರೆತರುತ್ತಿದ್ದರು. ಈ ಸಂದರ್ಭದಲ್ಲಿ ಏರ್ ಇಂಡಿಯಾ ವಿಮಾನದ ಸಿಬಂದಿ, ಪ್ರಯಾಣಿಕರೊಬ್ಬರಿಗೆ ಹೃದಯ ಸ್ತಂಭನವಾಗಿದ್ದು, ವಿಮಾನದಲ್ಲಿ ಯಾರಾದರು ವೈದ್ಯ ಪ್ರಯಾಣಿಕರಿದ್ದರೆ ತಕ್ಷಣವೇ ಆಗಮಿಸುವಂತೆ ಆಹ್ವಾನ ನೀಡಿದ್ದರು.

ಆಕಾಶ ಮಾರ್ಗದಲ್ಲೇ ಎರಡು ಬಾರಿ ಹೃದಯ ಸ್ತಂಭನಕ್ಕೊಳಗಾಗಿದ್ದ ಪ್ರಯಾಣಿಕನಿಗೆ ಡಾ.ವೇಮಲಾ ಅವರು ತಕ್ಷಣವೇ ಸ್ಪಂದಿಸುವ ಮೂಲಕ ಜೀವವನ್ನು ರಕ್ಷಿಸಿರುವುದಾಗಿ ವರದಿ ವಿವರಿಸಿದೆ.

ವಿಮಾನದೊಳಗೆ ದಿಢೀರನೆ ಹೃದಯ ಸ್ತಂಭನಕ್ಕೊಳಗಾಗಿದ್ದ ಪ್ರಯಾಣಿಕನಿಗೆ ಚಿಕಿತ್ಸೆ ನೀಡಲು ವಿಮಾನದಲ್ಲಿ ಯಾವುದೇ ವಿಶೇಷ ಸೌಲಭ್ಯಗಳಿಲ್ಲವಾಗಿತ್ತು. ಆದರೆ ಡಾ.ವೇಮಲಾ ಅವರು ಇತರ ಪ್ರಯಾಣಿಕರ ಬಳಿ ಇದ್ದ ಹೃದಯ ಬಡಿತದ ಮಾನಿಟರ್, ರಕ್ತದೊತ್ತಡ ಪರೀಕ್ಷಿಸುವ ಯಂತ್ರ, ಪಲ್ಸ್ ಆಕ್ಸಿಮೀಟರ್ ಬಳಸಿ ಆತನ ಜೀವಉಳಿಸಲು ಪ್ರಯತ್ನಿಸಿದ್ದರು. ಆಗ ಪ್ರಯಾಣಿಕ ಮತ್ತೊಮ್ಮೆ ಹೃದಯ ಸ್ಥಂಭನಕ್ಕೊಳಗಾಗಿದ್ದ. ಇದರಿಂದಾಗಿ ಆ ವ್ಯಕ್ತಿಯ ನಾಡಿ ಮಿಡಿತ ತುಂಬಾ ಕ್ಲೀಣಗೊಳ್ಳತೊಡಗಿತ್ತು. ರಕ್ತದೊತ್ತಡ ಕೂಡಾ ಕಡಿಮೆಯಾಗಿತ್ತು. ಸುಮಾರು ಐದು ಗಂಟೆಗಳ ಕಾಲ ಆಕಾಶ ಮಾರ್ಗದಲ್ಲಿ ಪ್ರಯಾಣಿಕನ ಜೀವ ಉಳಿಸಲು ಹರಸಾಹಸ ಪಡಲಾಗಿತ್ತು. ಈ ಸಂದರ್ಭದಲ್ಲಿ ಇತರ ಪ್ರಯಾಣಿಕರು ಭೀತಿಗೊಳಗಾಗಿದ್ದರು. ಕೊನೆಗೂ ಪೈಲಟ್ ವಿಮಾನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಲು ವ್ಯವಸ್ಥೆ ಮಾಡಿದ್ದರು. ಅದರಂತೆ ಪ್ರಯಾಣಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ದಾಖಲಾಗುವ ಮುನ್ನ ಪ್ರಯಾಣಿಕ ತನ್ನ ಜೀವ ಉಳಿಸಿದ್ದಕ್ಕಾಗಿ ಕಣ್ಣೀರಿಡುತ್ತಲೇ ಅಭಿನಂದನೆ ಸಲ್ಲಿಸಿರುವುದಾಗಿ ಡಾ.ವೇಮಲಾ ಅವರು ಘಟನೆಯನ್ನು ನೆನಪಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.