![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕಿಡಿಗೇಡಿಗಳ ಫೇಸ್ಗೆ ಸಾಫ್ಟ್ ವೇರ್ ಗುದ್ದು !
ಫೇಸ್ ರೆಕಗ್ನಿಶನ್ ಸಾಫ್ಟ್ ವೇರ್ ಬಳಕೆ ಹಿಂಸಾಚಾರದಲ್ಲಿ ತೊಡಗುವವರನ್ನು ಪತ್ತೆಹಚ್ಚಲು ಈ ಕ್ರಮ
Team Udayavani, Dec 29, 2019, 7:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಕೆಲವು ಕಡೆ ಇವು ಹಿಂಸೆಯ ರೂಪ ತಾಳಿರುವ ಹಿನ್ನೆಲೆಯಲ್ಲಿ ಪೊಲೀಸರು ಈಗ “ಫೇಸ್ ರೆಕಗ್ನಿಶನ್'(ಮುಖ ಗುರುತಿಸುವಿಕೆ) ಅಸ್ತ್ರವನ್ನು ಪ್ರಯೋಗಿಸಲು ಆರಂಭಿಸಿದ್ದಾರೆ.
ಪ್ರತಿಭಟನ ರ್ಯಾಲಿಗಳಲ್ಲಿ ಸಾವಿರಾರು ಮಂದಿ ಭಾಗವಹಿಸುವ ಕಾರಣ, ಹಿಂಸಾಚಾರದಲ್ಲಿ ತೊಡಗಿ ದವರು ಯಾರು ಎಂಬುದನ್ನು ಕರಾರುವಕ್ಕಾಗಿ ಪತ್ತೆಹಚ್ಚುವುದೇ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಫೇಸ್ ರೆಕಗ್ನಿಶನ್ ಸಾಫ್ಟ್ವೇರ್ ಬಳಸಿಕೊಂಡು, ಅದರ ಮೂಲಕ ಕಿಡಿಗೇಡಿಗಳನ್ನು ಪತ್ತೆಹಚ್ಚುವ ಉಪಾಯವನ್ನು ಹೂಡಲಾಗಿದೆ.
ಸಾಫ್ಟ್ ವೇರ್ಗೆ ಅಪ್ಲೋಡ್
ಪ್ರಸ್ತುತ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ದೃಶ್ಯಾವಳಿಗಳನ್ನು ಪೊಲೀಸರು ಈ ಸಾಫ್ಟ್ ವೇರ್ಗೆ ಅಪ್ಲೋಡ್ ಮಾಡುತ್ತಿದ್ದು, ಆ ಮೂಲಕ ವೃತ್ತಿಪರ “ಪ್ರತಿಭಟನಕಾರರು’ ಹಾಗೂ “ರೌಡಿ’ಗಳನ್ನು ಪತ್ತೆಹಚ್ಚುವ ಕಾರ್ಯ ವನ್ನು ಈಗಾಗಲೇ ಆರಂಭಿಸಲಾಗಿದೆ.
ಡೇಟಾಸೆಟ್ ರೆಡಿ
ಈವರೆಗೆ ದಿಲ್ಲಿ ಪೊಲೀಸರು ಮಾಮೂಲಿ ಅಪರಾಧ ಪ್ರಕರಣ ಗಳ ತನಿಖೆಗೆ ಅನುಕೂಲವಾಗ ಲೆಂದು ಸುಮಾರು 1.5 ಲಕ್ಷ “ಹಿಸ್ಟರಿ ಶೀಟರ್’ಗಳ ಫೋಟೋಗಳನ್ನು ಒಳಗೊಂಡ ಡೇಟಾಸೆಟ್ ತಯಾರಿಸಿಕೊಂಡಿದ್ದಾರೆ. ಇನ್ನು ಅತ್ಯಂತ ಸೂಕ್ಷ್ಮವಾದ ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ನಿಗಾ ಇಡಲೆಂದು ಶಂಕಿತ ಉಗ್ರರು ಹಾಗೂ ದುಷ್ಕರ್ಮಿಗಳ ಸುಮಾರು 2,000 ಫೋಟೋಗಳುಳ್ಳ ಮತ್ತೂಂದು ಸೆಟ್ ಅನ್ನು ಸಿದ್ಧಪಡಿಸಿಟ್ಟು ಕೊಂಡಿದ್ದಾರೆ.
ಮೋದಿ ರ್ಯಾಲಿಯಲ್ಲೂ ಬಳಕೆ
ಡಿ. 22ರಂದು ದಿಲ್ಲಿಯ ರಾಮಲೀಲಾ ಮೈದಾನ ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ನಡೆದಾಗಲೂ ಪೊಲೀಸರು ಈ ಸಾಫ್ಟ್ವೇರ್ ಅನ್ನು ಮುನ್ನೆಚ್ಚರಿಕೆಯಾಗಿ ಬಳಸಿದ್ದರು. ಈ ರ್ಯಾಲಿ ವೇಳೆ ಉಗ್ರರ ದಾಳಿ ನಡೆಯ ಬಹುದು ಅಥವಾ ಪ್ರತಿ ಭಟನೆ ಮೂಲಕ ಕೆಲವು ಶಕ್ತಿಗಳು ರ್ಯಾಲಿಗೆ ಅಡ್ಡಿ ಉಂಟು ಮಾಡ ಬಹುದು ಎಂಬ ಹಿನ್ನೆಲೆಯಲ್ಲಿಯೂ ಇದನ್ನು ಬಳಸಿಕೊಳ್ಳಲಾಗಿತ್ತು.
ಯಾವಾಗೆಲ್ಲ ಬಳಸಲಾಗಿತ್ತು?
– ನಮ್ಮ ದೇಶದಲ್ಲಿ ಈ ಸಾಫ್ಟ್ವೇರ್ ಅನ್ನು ಆರಂಭದಲ್ಲಿ ಬಳಸಿಕೊಂಡದ್ದು ನಾಪತ್ತೆ ಯಾದ ಮಕ್ಕಳನ್ನು ಪತ್ತೆಹಚ್ಚಲು. 2018ರ ಮಾರ್ಚ್ನಲ್ಲಿ ದಿಲ್ಲಿ ಹೈಕೋರ್ಟ್ ಆದೇಶದ ಅನ್ವಯ ಪೊಲೀಸರು ಈ ಸಾಫ್ಟ್ವೇರ್ ಬಳಸಿ, ಕಣ್ಮರೆಯಾದ ಮಕ್ಕಳ ಫೋಟೋ ಗಳೊಂದಿಗೆ ಹೋಲಿಕೆ ಮಾಡಿಕೊಂಡು, ಯಾರೆಲ್ಲ ನಾಪತ್ತೆ ಯಾಗಿದ್ದಾರೆ, ಯಾರು ಪತ್ತೆಯಾಗಿದ್ದಾರೆ ಎಂಬುದನ್ನು ಕಂಡುಕೊಂಡಿದ್ದರು.
– ಇದಕ್ಕೂ ಮುನ್ನ ಎರಡು ಬಾರಿ ಸ್ವಾತಂತ್ರ್ಯ ದಿನದ ಪರೇಡ್ನಲ್ಲಿ ಹಾಗೂ ಒಂದು ಬಾರಿ ಗಣರಾಜ್ಯೋತ್ಸವದ ಪರೇಡ್ನಲ್ಲಿ ದಿಲ್ಲಿ ಪೊಲೀಸರು ಮುಖ ಗುರುತಿಸುವಿಕೆ ಸಾಫ್ಟ್ ವೇರ್ನ ಪ್ರಯೋಜನ ಪಡೆದಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.