ಕಿಡಿಗೇಡಿಗಳ ಫೇಸ್‌ಗೆ ಸಾಫ್ಟ್ ವೇರ್ ಗುದ್ದು !

ಫೇಸ್‌ ರೆಕಗ್ನಿಶನ್‌ ಸಾಫ್ಟ್ ವೇರ್ ಬಳಕೆ ಹಿಂಸಾಚಾರದಲ್ಲಿ ತೊಡಗುವವರನ್ನು ಪತ್ತೆಹಚ್ಚಲು ಈ ಕ್ರಮ

Team Udayavani, Dec 29, 2019, 7:00 AM IST

Udayavani Kannada Newspaper

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಕೆಲವು ಕಡೆ ಇವು ಹಿಂಸೆಯ ರೂಪ ತಾಳಿರುವ ಹಿನ್ನೆಲೆಯಲ್ಲಿ ಪೊಲೀಸರು ಈಗ “ಫೇಸ್‌ ರೆಕಗ್ನಿಶನ್‌'(ಮುಖ ಗುರುತಿಸುವಿಕೆ) ಅಸ್ತ್ರವನ್ನು ಪ್ರಯೋಗಿಸಲು ಆರಂಭಿಸಿದ್ದಾರೆ.

ಪ್ರತಿಭಟನ ರ್ಯಾಲಿಗಳಲ್ಲಿ ಸಾವಿರಾರು ಮಂದಿ ಭಾಗವಹಿಸುವ ಕಾರಣ, ಹಿಂಸಾಚಾರದಲ್ಲಿ ತೊಡಗಿ ದವರು ಯಾರು ಎಂಬುದನ್ನು ಕರಾರುವಕ್ಕಾಗಿ ಪತ್ತೆಹಚ್ಚುವುದೇ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಫೇಸ್‌ ರೆಕಗ್ನಿಶನ್‌ ಸಾಫ್ಟ್ವೇರ್‌ ಬಳಸಿಕೊಂಡು, ಅದರ ಮೂಲಕ ಕಿಡಿಗೇಡಿಗಳನ್ನು ಪತ್ತೆಹಚ್ಚುವ ಉಪಾಯವನ್ನು ಹೂಡಲಾಗಿದೆ.

ಸಾಫ್ಟ್ ವೇರ್ಗೆ ಅಪ್‌ಲೋಡ್‌
ಪ್ರಸ್ತುತ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ದೃಶ್ಯಾವಳಿಗಳನ್ನು ಪೊಲೀಸರು ಈ ಸಾಫ್ಟ್ ವೇರ್‌ಗೆ ಅಪ್‌ಲೋಡ್‌ ಮಾಡುತ್ತಿದ್ದು, ಆ ಮೂಲಕ ವೃತ್ತಿಪರ “ಪ್ರತಿಭಟನಕಾರರು’ ಹಾಗೂ “ರೌಡಿ’ಗಳನ್ನು ಪತ್ತೆಹಚ್ಚುವ ಕಾರ್ಯ ವನ್ನು ಈಗಾಗಲೇ ಆರಂಭಿಸಲಾಗಿದೆ.

ಡೇಟಾಸೆಟ್‌ ರೆಡಿ
ಈವರೆಗೆ ದಿಲ್ಲಿ ಪೊಲೀಸರು ಮಾಮೂಲಿ ಅಪರಾಧ ಪ್ರಕರಣ ಗಳ ತನಿಖೆಗೆ ಅನುಕೂಲವಾಗ ಲೆಂದು ಸುಮಾರು 1.5 ಲಕ್ಷ “ಹಿಸ್ಟರಿ ಶೀಟರ್‌’ಗಳ ಫೋಟೋಗಳನ್ನು ಒಳಗೊಂಡ ಡೇಟಾಸೆಟ್‌ ತಯಾರಿಸಿಕೊಂಡಿದ್ದಾರೆ. ಇನ್ನು ಅತ್ಯಂತ ಸೂಕ್ಷ್ಮವಾದ ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ನಿಗಾ ಇಡಲೆಂದು ಶಂಕಿತ ಉಗ್ರರು ಹಾಗೂ ದುಷ್ಕರ್ಮಿಗಳ ಸುಮಾರು 2,000 ಫೋಟೋಗಳುಳ್ಳ ಮತ್ತೂಂದು ಸೆಟ್‌ ಅನ್ನು ಸಿದ್ಧಪಡಿಸಿಟ್ಟು ಕೊಂಡಿದ್ದಾರೆ.

ಮೋದಿ ರ್ಯಾಲಿಯಲ್ಲೂ ಬಳಕೆ
ಡಿ. 22ರಂದು ದಿಲ್ಲಿಯ ರಾಮಲೀಲಾ ಮೈದಾನ ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ನಡೆದಾಗಲೂ ಪೊಲೀಸರು ಈ ಸಾಫ್ಟ್ವೇರ್‌ ಅನ್ನು ಮುನ್ನೆಚ್ಚರಿಕೆಯಾಗಿ ಬಳಸಿದ್ದರು. ಈ ರ್ಯಾಲಿ ವೇಳೆ ಉಗ್ರರ ದಾಳಿ ನಡೆಯ ಬಹುದು ಅಥವಾ ಪ್ರತಿ ಭಟನೆ ಮೂಲಕ ಕೆಲವು ಶಕ್ತಿಗಳು ರ್ಯಾಲಿಗೆ ಅಡ್ಡಿ ಉಂಟು ಮಾಡ ಬಹುದು ಎಂಬ ಹಿನ್ನೆಲೆಯಲ್ಲಿಯೂ ಇದನ್ನು ಬಳಸಿಕೊಳ್ಳಲಾಗಿತ್ತು.

ಯಾವಾಗೆಲ್ಲ ಬಳಸಲಾಗಿತ್ತು?
– ನಮ್ಮ ದೇಶದಲ್ಲಿ ಈ ಸಾಫ್ಟ್ವೇರ್‌ ಅನ್ನು ಆರಂಭದಲ್ಲಿ ಬಳಸಿಕೊಂಡದ್ದು ನಾಪತ್ತೆ ಯಾದ ಮಕ್ಕಳನ್ನು ಪತ್ತೆಹಚ್ಚಲು. 2018ರ ಮಾರ್ಚ್‌ನಲ್ಲಿ ದಿಲ್ಲಿ ಹೈಕೋರ್ಟ್‌ ಆದೇಶದ ಅನ್ವಯ ಪೊಲೀಸರು ಈ ಸಾಫ್ಟ್ವೇರ್‌ ಬಳಸಿ, ಕಣ್ಮರೆಯಾದ ಮಕ್ಕಳ ಫೋಟೋ ಗಳೊಂದಿಗೆ ಹೋಲಿಕೆ ಮಾಡಿಕೊಂಡು, ಯಾರೆಲ್ಲ ನಾಪತ್ತೆ ಯಾಗಿದ್ದಾರೆ, ಯಾರು ಪತ್ತೆಯಾಗಿದ್ದಾರೆ ಎಂಬುದನ್ನು ಕಂಡುಕೊಂಡಿದ್ದರು.

– ಇದಕ್ಕೂ ಮುನ್ನ ಎರಡು ಬಾರಿ ಸ್ವಾತಂತ್ರ್ಯ ದಿನದ ಪರೇಡ್‌ನ‌ಲ್ಲಿ ಹಾಗೂ ಒಂದು ಬಾರಿ ಗಣರಾಜ್ಯೋತ್ಸವದ ಪರೇಡ್‌ನ‌ಲ್ಲಿ ದಿಲ್ಲಿ ಪೊಲೀಸರು ಮುಖ ಗುರುತಿಸುವಿಕೆ ಸಾಫ್ಟ್ ವೇರ್‌ನ ಪ್ರಯೋಜನ ಪಡೆದಿದ್ದರು.

Ad

ಟಾಪ್ ನ್ಯೂಸ್

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ನೂತನ ಜಿಲ್ಲಾಧಿಕಾರಿ ಡಾ.ಆನಂದ‌ ಕೆ.

Vijayapura: ಜಿಲ್ಲಾಧಿಕಾರಿ ಟಿ.ಭೂಬಾಲನ್ ವರ್ಗಾವಣೆ

8-web

Heart Health: ಹೃದಯ ಆರೋಗ್ಯಕ್ಕೆ ಸೇವಿಸಬಹುದಾದ ಹಣ್ಣು-ತರಕಾರಿಗಳಿವು

Dr-Parameshwar

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

22

Mangaluru: ಕೆಲಸಕ್ಕೆ ಹೋದವರು ನಾಪತ್ತೆ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

21

Mangaluru: ನೀರುಡೆ ನಿವಾಸಿ ನಾಪತ್ತೆ; ದೂರು ದಾಖಲು

23

Belthangady: ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿದ ದುಷ್ಕರ್ಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.