3 ತಿಂಗಳ ಬಳಿಕ ಶ್ರೀನಗರ್-ಬಾರಾಮುಲ್ಲಾ ನಡುವೆ ನ.12ರಿಂದ ರೈಲು ಸಂಚಾರ ಪುನರಾರಂಭ
Team Udayavani, Nov 11, 2019, 3:28 PM IST
ಜಮ್ಮು-ಕಾಶ್ಮೀರ: ಶ್ರೀನಗರ್ ಮತ್ತು ಬಾರಾಮುಲ್ಲಾ ನಡುವೆ ಮಂಗಳವಾರದಿಂದ ರೈಲು ಸಂಚಾರ ಪುನರಾರಂಭಗೊಳ್ಳಲಿದ್ದು, ಸೋಮವಾರ ಭಾರತೀಯ ರೈಲ್ವೆ ಇಲಾಖೆ ಈ ಮಾರ್ಗದ ನಡುವೆ ಪ್ರಾಯೋಗಿಕ ರೈಲು ಸಂಚಾರ ನಡೆಸಿದೆ ಎಂದು ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರ್-ಬಾರಾಮುಲ್ಲಾ ನಡುವೆ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇಂದು ನಡೆದ ಪ್ರಾಯೋಗಿಕ ಸಂಚಾರದ ವೇಳೆ ರೈಲ್ವೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳು ಕೂಡಾ ಉಪಸ್ಥಿತರಿದ್ದರು.
ಸುಮಾರು ಮೂರು ತಿಂಗಳಿಗಿಂತಲೂ ಹೆಚ್ಚು ಸಮಯ ಈ ಮಾರ್ಗದಲ್ಲಿ ರೈಲ್ವೆ ಸಂಚಾರ ರದ್ದು ಮಾಡಲಾಗಿದ್ದು, ಇದೀಗ ಭಾರತೀಯ ರೈಲ್ವೆ ಇಲಾಖೆ ಮತ್ತೆ ರೈಲು ಸಂಚಾರ ಪುನರಾರಂಭಿಸುವ ಮೂಲಕ ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ ಎಂದು ವರದಿ ವಿವರಿಸಿದೆ.
ಶ್ರೀನಗರ್-ಬಾರಾಮುಲ್ಲಾ ನಡುವಿನ ರೈಲು ಸಂಚಾರ ಸ್ಥಗಿತಗೊಳಿಸಿದ್ದರಿಂದ ರೈಲ್ವೆ ಇಲಾಖೆಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಆದರೆ ಭದ್ರತಾ ದೃಷ್ಟಿಯಿಂದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..