“ವಂದೇ ಭಾರತ್‌’ಗೆ ವೇಗ! 2 ವರ್ಷಗಳಲ್ಲೇ 75 ರೈಲುಗಳು ಸಿದ್ಧ

ಖಾಸಗೀಕರಣಕ್ಕೆ ಸ್ಪಂದನೆ ಸಿಗದ ಹಿನ್ನೆಲೆ ಈ ಕ್ರಮ; 2026-27ರ ವೇಳೆಗೆ ಮೇನ್‌ ಇನ್‌ ಇಂಡಿಯಾ ಬೋಗಿ ರಫ್ತು

Team Udayavani, Oct 11, 2021, 6:15 AM IST

“ವಂದೇ ಭಾರತ್‌’ಗೆ ವೇಗ! 2 ವರ್ಷಗಳಲ್ಲೇ 75 ರೈಲುಗಳು ಸಿದ್ಧ

ನವದೆಹಲಿ: ರೈಲ್ವೆ ಖಾಸಗೀಕರಣದ ಉದ್ದೇಶದಿಂದ ಕೆಲ ತಿಂಗಳ ಹಿಂದೆಯೇ ಖಾಸಗಿ ರೈಲುಗಳಿಗಾಗಿ ಟೆಂಡರ್‌ ಕರೆದಿದ್ದರೂ, ಅದಕ್ಕೆ ಉತ್ತಮ ಸ್ಪಂದನೆ ಸಿಕ್ಕಿರಲಿಲ್ಲ. ಹಾಗಂತ, ಭಾರತೀಯ ರೈಲ್ವೆ ಸುಮ್ಮನೆ ಕುಳಿತಿಲ್ಲ. ಖಾಸಗಿ ರೈಲುಗಳ ಬದಲಾಗಿ ವಂದೇ ಭಾರತ್‌ ರೈಲುಗಳನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಓಡಿಸಲು ಚಿಂತನೆ ನಡೆಸಿದೆ.

2023ರ ಆಗಸ್ಟ್‌ನೊಳಗಾಗಿ ಸ್ವದೇಶಿ ನಿರ್ಮಿತ, 75 ಸೆಮಿ ಹೈಸ್ಪೀಡ್‌ ವಂದೇ ಭಾರತ್‌ ರೈಲುಗಳನ್ನು ಉತ್ಪಾದಿಸಲು ಪಣ ತೊಟ್ಟು, ಸಮರೋಪಾದಿಯಲ್ಲಿ ಕೆಲಸ ಶುರುವಿಟ್ಟುಕೊಂಡಿದೆ.

ಕಳೆದ ಸ್ವಾತಂತ್ರ್ಯೋತ್ಸವದ ದಿನ ಕೆಂಪುಕೋಟೆಯಲ್ಲಿ ಭಾಷಣ ಮಾಡುವ ವೇಳೆ ಪ್ರಧಾನಿ ಮೋದಿ ಅವರೇ ಈ ಗಡುವನ್ನು ವಿಧಿಸಿದ್ದರು. ಸ್ವಾತಂತ್ರ್ಯದ ಅಮೃತಮಹೋತ್ಸವದ 75 ವಾರಗಳಲ್ಲಿ (2021ರ ಮಾ.12- 2023ರ ಆ.15) 75 ವಂದೇ ಭಾರತ್‌ ರೈಲುಗಳು ದೇಶದ ಪ್ರತಿಯೊಂದು ಮೂಲೆಯನ್ನೂ ಸಂಪರ್ಕಿಸಲಿದೆ ಎಂದು ಅವರು ಹೇಳಿದ್ದರು.

1 ಲಕ್ಷ ಕಿ.ಮೀ. ಪ್ರಾಯೋಗಿಕ ಸಂಚಾರ:
ಅದರಂತೆ, ರೈಲ್ವೆ ಇಲಾಖೆಯು ಕ್ಷಿಪ್ರವಾಗಿ ತನ್ನ ಕೆಲಸ ಆರಂಭಿಸಿದೆ. ಈಗಾಗಲೇ 44 ರೈಲುಗಳಿಗೆ ಅಗತ್ಯವಿರುವ ವಿದ್ಯುತ್‌ ಉಪಕಪರಣಗಳನ್ನು ಪೂರೈಸುವ ಕೆಲಸವನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗಿದೆ. ಡ್ಯಾಂಪರ್‌ಗಳು, ವೀಲ್‌ ಆಕ್ಸೆಲ್‌ಗ‌ಳು, ಟ್ರ್ಯಾಕ್ಷನ್‌ ಮೋಟಾರ್‌, ಬ್ರೇಕ್‌ ವ್ಯವಸ್ಥೆ ಇತ್ಯಾದಿಗಳ ತಯಾರಿ ಆರಂಭವಾಗಿದೆ. 2022ರ ಏಪ್ರಿಲ್‌ನಲ್ಲಿ ರೈಲಿನ ಮಾದರಿ ಸಿದ್ಧಗೊಳ್ಳಲಿದ್ದು, ಕಡ್ಡಾಯವಾಗಿ 1 ಲಕ್ಷ ಕಿ.ಮೀ. ಪ್ರಾಯೋಗಿಕ ಸಂಚಾರ ನಡೆಸಲಿದೆ. ಪ್ರತಿ ತಿಂಗಳಿಗೆ 3 ಹೊಸ ರೇಕುಗಳನ್ನು ಸಿದ್ಧಪಡಿಸುವಲ್ಲಿ ಯಶಸ್ವಿಯಾದರೆ, ಖಂಡಿತಾ ಡೆಡ್‌ಲೈನ್‌ಗೆ ಮುನ್ನ ಎಲ್ಲ ರೈಲುಗಳೂ ಸಿದ್ಧವಾಗಲಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು. ಮೊದಲಿಗೆ 44 ರೈಲುಗಳನ್ನು ತಯಾರಿಸಿ, ನಂತರದಲ್ಲಿ ಉಳಿದ ರೈಲುಗಳ ತಯಾರಿಯೂ ಆರಂಭವಾಗಲಿದೆ ಎಂದು “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ.

ಇದನ್ನೂ ಓದಿ:‘ಜೈ ಮಾತಾ ದಿ’: ವಾರಾಣಸಿ ಪ್ರಚಾರ ಸಭೆಯಲ್ಲಿ ದುರ್ಗೆಯ ಭಜಿಸಿದ ಪ್ರಿಯಾಂಕಾ ಗಾಂಧಿ

ಪ್ರಸ್ತುತ ಸಂಚರಿಸುತ್ತಿವೆ 2 ರೈಲು:
ವಂದೇ ಭಾರತ್‌ ಎನ್ನುವುದು 16 ಬೋಗಿಗಳ ರೈಲು. ಇದರಲ್ಲಿ ಪ್ರತ್ಯೇಕ ಲೋಕೋಮೋಟಿವ್‌ ಇರುವುದಿಲ್ಲ. ಚೆನ್ನೈನಲ್ಲಿರುವ ಸರ್ಕಾರಿ ಸ್ವಾಮ್ಯದ ಇಂಟೆಗ್ರಲ್‌ ಕೋಚ್‌ ಫ್ಯಾಕ್ಟರಿ(ಐಸಿಎಫ್)ನಲ್ಲಿ ಈ ರೈಲುಗಳನ್ನು ತಯಾರಿಸಲಾಗಿದೆ. 2018ರ ಅಂತ್ಯದಲ್ಲೇ ಈ ರೈಲಿನ ಮೊದಲ ಮಾದರಿ ಸಿದ್ಧಗೊಂಡಿತ್ತು. ಈಗಾಗಲೇ ಇಂಥ ಎರಡು ರೈಲುಗಳನ್ನು ತಯಾರಿಸಲಾಗಿದ್ದು, ಒಂದು ರೈಲು ದೆಹಲಿ ಮತ್ತು ವಾರಾಣಸಿ ನಡುವೆ ಸಂಚರಿಸುತ್ತಿದ್ದರೆ, ಮತ್ತೂಂದು ದೆಹಲಿ ಮತ್ತು ಕಟ್ರಾ(ಜಮ್ಮು ಮತ್ತು ಕಾಶ್ಮೀರ) ನಡುವೆ ಸಂಚರಿಸುತ್ತಿದೆ. ಇದರ ವೇಗ ಗಂಟೆಗೆ 160 ಕಿ.ಮೀ.

ವಂದೇಭಾರತ್‌ ಕೋಚ್‌ ಉತ್ಪಾದನಾ ಪ್ಲ್ಯಾನ್
2021-22 – 32
2022-23 -672
2023-24 -944

– ಪ್ರಸ್ತುತ ಕಾರ್ಯಾಚರಿಸುತ್ತಿರುವ ವಂದೇ ಭಾರತ್‌ ರೈಲುಗಳು- 2
– 2022ರ ಏಪ್ರಿಲ್‌ನಲ್ಲಿ ಸಿದ್ಧವಾಗಲಿರುವ ನಿರೀಕ್ಷಿತ ಮಾದರಿಗಳು- 2
– 2023ರ ಆಗಸ್ಟ್‌ ವೇಳೆಗೆ ಭಾರತದಾದ್ಯಂತ ನಿಯೋಜನೆಗೊಳ್ಳಲಿರುವ ರೈಲುಗಳು- 75
– ಪ್ರತಿ ರೈಲಿನ ನಿರ್ಮಾಣಕ್ಕೆ ತಗಲುವ ವೆಚ್ಚ – 110-115 ಕೋಟಿ ರೂ.
– ಮೊದಲ 75 ರೈಲುಗಳಿಂದ ಎಷ್ಟು ನಗರಗಳಿಗೆ ಸಂಪರ್ಕ ಸಾಧ್ಯ? – 300
– ರೈಲ್ವೆ ಇಲಾಖೆಯ ಪ್ರಕಾರ ಈ ರೈಲುಗಳು ರಫ್ತಾಗುವ ವರ್ಷ – 2026-27

ವಂದೇ ಭಾರತ್‌ ಸರಣಿಯ ರೈಲುಗಳ ನಿರ್ಮಾಣ ಕಾರ್ಯವು 2023ರ ನಂತರವೂ ನಡೆಯಲಿದೆ. ಏಕೆಂದರೆ, ಈ ಮೇಡ್‌ ಇನ್‌ ಇಂಡಿಯಾ ರೈಲುಗಳನ್ನು 2026-27ರ ವೇಳೆಗೆ ವಿದೇಶಗಳಿಗೆ ರಫ್ತು ಮಾಡುವ ಗುರಿಯನ್ನು ರೈಲ್ವೆ ಇಲಾಖೆ ಹಾಕಿಕೊಂಡಿದೆ.
– ಅಶ್ವಿ‌ನಿ ವೈಷ್ಣವ್‌, ರೈಲ್ವೆ ಸಚಿವ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.