ರೈಲು ದುರಂತ:12 ಗಂಟೆ,4 ಅವಘಡ
Team Udayavani, Nov 25, 2017, 10:13 AM IST
ಲಕ್ನೋ: ಪಾಟ್ನಾಗೆ ಹೊರಟಿದ್ದ ಪ್ರಯಾಣಿಕ ರೈಲೊಂದು ಉತ್ತರಪ್ರದೇಶದ ಮಣಿಕ್ಪುರ ರೈಲ್ವೆ ನಿಲ್ದಾಣದ ಬಳಿ ಹಳಿ ತಪ್ಪಿದ ಪರಿಣಾಮ, ಮೂವರು ಮೃತಪಟ್ಟು, 9 ಮಂದಿ ಗಾಯ ಗೊಂಡ ಘಟನೆ ಶುಕ್ರವಾರ ನಡೆದಿದೆ. ಮೃತರ ಪೈಕಿ 6ರ ಬಾಲಕ ಮತ್ತು ಆತನ ತಂದೆ ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೋವಾದಿಂದ ಪಟ್ನಾಗೆ ತೆರಳುತ್ತಿದ್ದ ವಾಸ್ಕೋಡ ಗಾಮ ಎಕ್ಸ್ಪ್ರೆಸ್ನ 13 ಬೋಗಿಗಳು ನಿಲ್ದಾಣದಿಂದ ಸ್ವಲ್ಪ ದೂರ ಹೋಗುತ್ತಲೇ ಬೆಳಿಗ್ಗೆ 4.18ರ ಸಮಯದಲ್ಲಿ ಹಳಿ ತಪ್ಪಿವೆ. ಮಣಿಕ್ಪುರ ರೈಲು ನಿಲ್ದಾಣದಿಂದ ಆಗಷ್ಟೇ ಹೊರಟಿದ್ದ ಕಾರಣ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗಾಗಿ, ಸಾವು-ನೋವಿನ ಪ್ರಮಾಣ ಕಡಿಮೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಳಿಯಲ್ಲಿನ ಬಿರುಕೇ ಅವಘಡಕ್ಕೆ ಕಾರಣ ಎಂದು ಅಂದಾಜಿಸಲಾಗಿದೆ. ತನಿಖೆ ನಂತರ ನಿಖರ ಕಾರಣ ತಿಳಿದುಬರಲಿದೆ. ವಿಧ್ವಂಸಕ ಕೃತ್ಯವೇ ಎಂಬ ದಿಕ್ಕಿನಲ್ಲೂ ತನಿಖೆ ನಡೆಸಲಾಗು ತ್ತಿದ್ದು, ಉಗ್ರ ನಿಗ್ರಹ ದಳದ ಅಧಿಕಾರಿ ಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ದ್ದಾರೆ.
ಪರಿಹಾರ ಘೋಷಣೆ
ಇದೇ ವೇಳೆ, ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ., ಗಂಭೀರ ಗಾಯಗೊಂಡವರಿಗೆ 1 ಲಕ್ಷ ರೂ. ಹಾಗೂ ಸಣ್ಣ ಪ್ರಮಾಣದ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರಪ್ರದೇಶದ ಸಿಎಂ ಯೋಗಿ, ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
12 ಗಂಟೆ,4 ಅವಘಡ
ಕೇವಲ 12 ಗಂಟೆಗಳ ಅವಧಿಯಲ್ಲಿ 4 ರೈಲು ಅವಘಡಗಳು ಸಂಭವಿಸಿದ್ದು, ಈ ಪೈಕಿ ಮೂರು ಉತ್ತರಪ್ರದೇಶದಲ್ಲೇ ನಡೆದಿರು ವುದು ವಿಶೇಷ. ಗುರುವಾರವಷ್ಟೇ ಮಾನವ ರಹಿತ ರೈಲ್ವೆ ಕ್ರಾಸಿಂಗ್ನಲ್ಲಿ ಕಾರೊಂದಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದರು. ಶುಕ್ರವಾರ ಸಹರಣ್ಪುರದಲ್ಲಿ ಜಮ್ಮು-ಪಾಟ್ನಾ ಅರ್ಚನಾ ಎಕ್ಸ್ಪ್ರೆಸ್ ರೈಲಿನ ಎಂಜಿನ್ ಬೋಗಿ ಯಿಂದ ಪ್ರತ್ಯೇಕವಾಗಿ ಹೋದ ಘಟನೆ ನಡೆದಿದ್ದರೆ, ಒಡಿಶಾದಲ್ಲೂ ಸರಕು ರೈಲೊಂದು ಹಳಿ ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ