ಭಾರತದ ಪ್ರತೀಕಾರಾದ ದಾಳಿ: 7 ಪಾಕ್ ಸೈನಿಕರು ಬಲಿ; ನಾಲ್ವರು ಜಖಂ
Team Udayavani, Jan 15, 2018, 3:44 PM IST
ಜಮ್ಮು : ಪ್ರತೀಕಾರದ ಕ್ರಮವಾಗಿ ಭಾರತೀಯ ಸೈನಿಕರು ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಎಲ್ಓಸಿಯಲ್ಲಿ ಇಂದು ಸೋಮವಾರ ಪ್ರಬಲ ಗುಂಡಿನ ದಾಳಿ ಸಂಘಟಿಸಿ 7 ಪಾಕ್ ಸೈನಿಕರನ್ನು ಬಲಿ ಪಡೆದಿದ್ದಾರೆ ಮತ್ತು ಈ ದಾಳಿಯಲ್ಲಿ ನಾಲ್ವರು ಪಾಕ್ ಸೈನಿಕರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಕಳೆದ ಶನಿವಾರ ಕಾಶ್ಮೀರದ ರಾಜೋರಿ ಜಿಲ್ಲೆಯ ಎಲ್ಓಸಿಯಲ್ಲಿ ಪಾಕ್ ಸೈನಿಕರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಭಾರತೀಯ ಸೈನಿಕನೋರ್ವ ಹುತಾತ್ಮನಾಗಿದ್ದ.
ಪೂಂಚ್ ಜಿಲ್ಲೆಯ ಮೇಂದರ್ ಸೆಕ್ಟರ್ನ ಎಲ್ಓಸಿಯಲ್ಲಿನ ಜಗಲೋತೆ ಪ್ರದೇಶದಲ್ಲಿ ಭಾರತೀಯ ಸೈನಿಕರು ನಡೆಸಿದ ಪ್ರತೀಕಾರದ ದಾಳಿಗೆ ಪಾಕ್ ಸೇನೆ ಭಾರೀ ನಾಶ, ನಷ್ಟ, ಜೀವಹಾನಿಯನ್ನು ಅನುಭವಿಸಿತು ಎಂದು ಸೇನೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಭಾರತ ವಿರೋಧಿ ಚಟುವಟಿಕೆಗಳು ಯಶಸ್ವಿಯಾಗಲು ಎಷ್ಟು ಮಾತ್ರಕ್ಕೂ ಬಿಡಲಾಗದು ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆಯಷ್ಟೇ ಹೇಳಿದ್ದರಲ್ಲದೆ ಪಾಕ್ ಬೆಂಬಲಿತ ಭಯೋತ್ಪಾದನೆಗೆ ಅತ್ಯಂತ ಪ್ರಬಲ ಉತ್ತರ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ