ಜಮ್ಮು, ಕಾಶ್ಮೀರ, ಲಡಾಖ್ನಲ್ಲಿ ಇನ್ನು ಭಾರತೀಯರು ಜಮೀನು ಖರೀದಿಸಬಹುದು
Team Udayavani, Oct 27, 2020, 4:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಣಿಪಾಲ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ಗೆ ಭೂ ಕಾನೂನಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಕೇಂದ್ರ ಸರಕಾರ ಮಂಗಳವಾರ ಬಿಡುಗಡೆ ಮಾಡಿದೆ. ಈಗ ಯಾವುದೇ ಭಾರತೀಯರು ಕಾಶ್ಮೀರ ಮತ್ತು ಲಡಾಖ್ನಲ್ಲಿ ಭೂಮಿಯನ್ನು ಖರೀದಿಸಬಹುದು. ಈ ಕಾನೂನು ಎರಡೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರಲಿದೆ.
ಇಲ್ಲಿಯವರೆಗೆ, ಅಲ್ಲಿ ಭೂಮಿಯನ್ನು ಖರೀದಿಸಲು ಕಾಶ್ಮೀರದ ಪ್ರಜೆಯಾಗಬೇಕೆಂಬ ಒತ್ತಾಯವಿತ್ತು. ಈಗ ಈ ಬಾಧ್ಯತೆಯನ್ನು ಕೇಂದ್ರ ರದ್ದುಪಡಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಹೊಸ ಕಾನೂನಿನಡಿ ಕೇಂದ್ರ ಈ ಆದೇಶ ಹೊರಡಿಸಿದೆ.
ಮೊದಲು ಇದ್ದ ಕಾನೂನು ಏನು?
ಕಳೆದ ವರ್ಷ ಆಗಸ್ಟ್ನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು ಆರ್ಟಿಕಲ್ 35-ಎ ಅನ್ನು ತೆಗೆದುಹಾಕುವ ಮೊದಲು, ಜಮ್ಮು ಮತ್ತು ಕಾಶ್ಮೀರದ ನಿವಾಸಿಯಲ್ಲದ ವ್ಯಕ್ತಿಗೆ ಸ್ಥಿರವಾದ ಆಸ್ತಿಯನ್ನು ಖರೀದಿಸಲು ಸಾಧ್ಯವಾಗಿರಲಿಲ್ಲ.
ಈಗ ಕೇಂದ್ರವು ಭೂ ಖರೀದಿಗೆ ಸಂಬಂಧಿಸಿದ ಕಾನೂನುಗಳನ್ನು ಬದಲಾಯಿಸಿದೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ಹೊರಗಿನ ನಿವಾಸಿಯೂ ಇಲ್ಲಿ ಭೂಮಿಯನ್ನು ಖರೀದಿಸಬಹುದು. ಆದರೆ, ಕೃಷಿ ಭೂಮಿಯನ್ನು ಖರೀದಿಸಲು ಸರಕಾರ ನಿರ್ಬಂಧ ಹೇರಿದೆ. ಸಾಗುವಳಿ ಮಾಡಿದ ಭೂಮಿಯನ್ನು ಯಾವುದೇ ಕೃಷಿ ಮಾಡದ ವ್ಯಕ್ತಿಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಹೇಳಿದೆ. ಆದರೆ ಕೃಷಿಯೇತರ ಉದ್ದೇಶಗಳಿಗಾಗಿ ಕೃಷಿ ಭೂಮಿ ಖರೀದಿಗೆ ಅನುಮತಿಸಲು ಕೆಲವು ವಿನಾಯಿತಿಗಳನ್ನು ನೀಡಲಾಗಿದೆ.
Unacceptable amendments to the land ownership laws of J&K. Even the tokenism of domicile has been done away with when purchasing non-agricultural land & transfer of agricultural land has been made easier. J&K is now up for sale & the poorer small land holding owners will suffer.
— Omar Abdullah (@OmarAbdullah) October 27, 2020
ಕೇಂದ್ರದ ಈ ನಿರ್ಧಾರವನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ವಿರೋಧಿಸಿದ್ದಾರೆ. ಟ್ವೀಟ್ ಮಾಡಿರುವ ಅವರು ಜಮ್ಮು ಮತ್ತು ಕಾಶ್ಮೀರದ ಭೂ ಕಾನೂನುಗಳಲ್ಲಿ ಮಾಡಿದ ಬದಲಾವಣೆಗಳನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ. ಸಣ್ಣ ಭೂಮಾಲೀಕರು ತೊಂದರೆ ಅನುಭವಿಸಲಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು