ದೇಶದಲ್ಲಿ ಕೋವಿಡ್ ಅಟ್ಟಹಾಸ: 4 ಲಕ್ಷ ದಾಟಿದ ಸೊಂಕಿತರ ಸಂಖ್ಯೆ: 13 ಸಾವಿರ ಜನ ಬಲಿ
Team Udayavani, Jun 21, 2020, 9:06 AM IST
ನವದೆಹಲಿ: ದೇಶದಲ್ಲಿ ಕೋವಿಡ್-19 ವೈರಸ್ ಪ್ರತಾಪ ಮುಂದುವರೆದಿದ್ದು ಸೋಂಕಿತರ ಸಂಖ್ಯೆ 4ಲಕ್ಷದ ಗಡಿ ದಾಟಿದೆ. ಶನಿವಾರದ ವೇಳೆಗೆ (20-6-2020) ಈ ಮಹಾಮಾರಿಗೆ 13,000 ಮಂದಿ ಬಲಿಯಾಗಿದ್ದು ಹೊಸ ಪ್ರಕರಣಗಳು ದ್ವಿಗುಣಗೊಳ್ಳುತ್ತಲೇ ಇದೆ. ಮಾತ್ರವಲ್ಲದೆ ಅಮೆರಿಕಾ, ಬ್ರೆಜಿಲ್, ರಷ್ಯಾ ನಂತರದ 4ನೇ ಕೋವಿಡ್ ಹಾಟ್ ಸ್ಪಾಟ್ ಆಗಿ ಭಾರತ ಗುರುತಿಸಿಕೊಂಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 15,813 ಜನರಿಗೆ ವೈರಾಣು ಭಾಧಿಸಿದ್ದು ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಹೊಸ ಪ್ರರಣಗಳು ಪತ್ತೆಯಾಗಿದೆ. ಹಾಗಾಗಿ ಒಟ್ಟಾರೆ ಸೋಂಕಿತರ ಸಂಖ್ಯೆ 4,11,500ಕ್ಕೆ ತಲುಪಿದೆ.
ದೇಶದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ತೆಗೆದ ನಂತರ ಈ ಸಾಂಕ್ರಾಮಿಕ ರೋಗದ ವೇಗ ಹೆಚ್ಚಾಗುತ್ತಿದ್ದು, ಇತ್ತೀಚಿನ ಒಂದು ಲಕ್ಷ ಸೋಂಕಿತ ಪ್ರಕರಣಗಳು ಕೇವಲ ಎಂಟು ದಿನಗಳಲ್ಲಿ ದಾಖಲಾಗಿವೆ. ಈ ಹಿಂದೆ ಒಂದು ಲಕ್ಷ ವೈರಾಣು ಪೀಡಿತರು 15 ದಿನದಲ್ಲಿ ಕಂಡುಬಂದಿದ್ದರು. ಅದಕ್ಕೂ ಮೊದಲು 1 ಲಕ್ಷ ಸೊಂಕಿತರ ಸಂಖ್ಯೆ 78 ದಿನದಲ್ಲಿ ದಾಖಲಾಗಿದ್ದವು.
ಭಾರತದ ಶೇ. 75% ಸೋಂಕಿತರ ಸಂಖ್ಯೆ ಮೇ 19 ರಿಂದ ಜೂನ್ 20 ರೊಳಗೆ ವರದಿಯಾಗಿದೆ. ಅದಾಗ್ಯೂ ಭಾರತದಲ್ಲಿ ಸೋಂಕಿನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಶೇ. 54.12 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ ರಾಜ್ಯದಲ್ಲೇ ಕೋವಿಡ್ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು 1.24 ಲಕ್ಷ ಮಂದಿ ವೈರಸ್ ಸೊಂಕಿತರಾಗಿದ್ದಾರೆ. ತಮಿಳುನಾಡಿನಲ್ಲಿ 56,845, ದೆಹಲಿಯಲ್ಲಿ 53,000 ವೈರಾಣು ಪೀಡಿತರಿದ್ದಾರೆ. ಭಾರತದಲ್ಲಿ ಕಳೆದ 24 ಗಂಟೆಗಲಲ್ಲಿ 1,89,869 ಜನರ ಗಂಟಲ ದ್ರವ ಪರೀಕ್ಷಿಸಲಾಗಿದೆ.
ಜಗತ್ತಿನಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ 86 ಲಕ್ಷ ತಲುಪಿದ್ದು, 4.5 ಲಕ್ಷ ಮಂದಿ ಈ ವೈರಾಣುವಿಗೆ ಬಲಿಯಾಗಿದ್ದಾರೆ. ಅಮೆರಿಕಾ ದೇಶವೊಂದರಲ್ಲೇ 22 ಲಕ್ಷ ಮಂದಿ ಸೋಂಕಿತರಿದ್ದು, 1.1 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ