ಭಾರತದ ಕೋವಿಡ್ ಬೆಳವಣಿಗೆ ಆತಂಕಕಾರಿಯಾಗಿದೆ : ಸೌಮ್ಯಾ ಸ್ವಾಮಿನಾಥನ್
Team Udayavani, May 11, 2021, 8:30 AM IST
ನವದೆಹಲಿ : ದೇಶದಲ್ಲಿ ಕೋವಿಡ್ ಸಂಖ್ಯೆ ಗಣನೀಯವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ವಿಶ್ಯ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿಕೆಯೊಂದನ್ನು ನೀಡಿದ್ದು, ಭಾರತದ ಈ ಕೋವಿಡ್ ಬೆಳವಣಿಗೆ ʼಆತಂಕಕಾರಿಯಾಗಿದೆʼ ಎಂದು ಹೇಳಿದ್ದಾರೆ. ಅಲ್ಲದೆ ದೇಶದಲ್ಲಿ ನಿಖರವಾದ ಕೋವಿಡ್ ಅಂಕಿ–ಅಂಶಗಳನ್ನು ಅಂದಾಜಿಸಲು ಕಾರ್ಯಪ್ರವೃತ್ತರಾಗಬೇಕೆಂದು ಅವರು ತಿಳಿಸಿದ್ದಾರೆ.
ಸದ್ಯದ ಪರಿಸ್ಥಿತಿ ತುಂಬಾ ಆತಂಕಕಾರಿಯಾಗಿದೆ. ಅಲ್ಲದೆ ಭಾರತ ಮತ್ತು ಆಗ್ನೇಯ ದೇಶಗಳಲ್ಲಿ ವರದಿಯಾಗುತ್ತಿರುವ ಪ್ರಕರಣಗಳು, ಮತ್ತು ಸಾವಿನ ಸಂಖ್ಯೆ ತುಂಬಾ ಕಳವಳ ತರಿಸಿದೆ ಎಂದಿದ್ದಾರೆ. ಇಷ್ಟೊಂದು ಪ್ರಕರಣಗಳು ಮತ್ತು ಸಾವಿನ ಸಂಖ್ಯೆಯನ್ನು ನಾವು ಊಹೆ ಮಾಡಿರಲಿಲ್ಲ ಎಂದು ಸೌಮ್ಯ ಹೇಳಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸರ್ಕಾರಗಳು ಪ್ರಕರಣಗಳ ನಿಜವಾದ ವರದಿಯನ್ನು ನೀಡಲು ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.
ಮತ್ತೊಂದು ಪ್ರಮುಖ ಮಾಹಿತಿಯನ್ನು ಹೇಳಿರುವ ಅವರು, ಸದ್ಯ ಜರುಗುತ್ತಿರುವ ಸಾವಿನ ಎಲ್ಲಾ ಪ್ರಕರಣಗಳೂ ಕೋವಿಡ್ ನಿಂದಲೇ ನಡೆಯುತ್ತಿಲ್ಲ. ಬೇರೆ ಬೇರೆ ಕಾಯಿಲಿಗಳಿಂದಲೂ, ಔಷಧ ಸಿಗದೆ ಕೆಲವು ಜನ ಸಾಯುತ್ತಿದ್ದಾರೆ. ಈ ಎಲ್ಲ ಅಂಕಿ ಅಂಶಗಳು ನಿಖರವಾಗಿ ವರದಿಯಾಗಬೇಕು ಎಂದು ಅವರು ತಿಳಿಸಿದ್ದಾರೆ.
ಇನ್ನು ರೂಪಾಂತರ ಕೋವಿಡ್ ವೈರಸ್ನ ಹರಡುವಿಕೆ, ಅದರಿಂದ ಆಗುವ ರೋಗದ ತೀವ್ರತೆ, ಲಸಿಕೆ ಪಡೆದುಕೊಂಡವರಲ್ಲಿನ ಪ್ರತಿಕಾಯ ಪ್ರತಿಕ್ರಿಯೆಗಳ ಬಗ್ಗೆ ಭಾರತದಲ್ಲಿ ಅಧ್ಯಯನ ನಡೆಯುತ್ತಿದೆ. ದೇಶದ ವಿವಿಧ ಪ್ರದೇಶಗಳಲ್ಲಿನ ಸಂಪೂರ್ಣ ಚಿತ್ರಣದ ಮಾಹಿತಿ ಕಲೆಹಾಕಬೇಕಬೇಕೆಂದು ಡಬ್ಲುಎಚ್ಒ ವಿಜ್ಞಾನಿಗಳು ಕರೆ ನೀಡಿದ್ದಾರೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ