ರಕ್ಷಣಾ ಸಾಮಗ್ರಿಗಳ ರಫ್ತು 5 ಪಟ್ಟು ಹೆಚ್ಚು ; ಜಾಗತಿಕ ರಂಗದಲ್ಲಿ ಹೊಸ ಹೆಗ್ಗಳಿಕೆಯತ್ತ ಭಾರತ
Team Udayavani, Apr 22, 2020, 6:45 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸಾದ ‘ಮೇಕ್ ಇನ್ ಇಂಡಿಯಾ’ದ ಪರಿಣಾಮವಾಗಿ, ಕಳೆದ ನಾಲ್ಕು ವರ್ಷಗಳಲ್ಲಿ ಭಾರತದ ರಕ್ಷಣಾ ಸಾಮಗ್ರಿಗಳ ರಫ್ತು ಐದು ಪಟ್ಟು ಹೆಚ್ಚಳವಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಇದೊಂದು ಹೆಮ್ಮೆಯ ವಿಚಾರವಾಗಿದ್ದು, ಈವರೆಗೆ, ರಕ್ಷಣಾ ಸಾಮಗ್ರಿಗಳನ್ನು ವಿಶ್ವದಲ್ಲೇ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರವಾಗಿದ್ದ ಭಾರತ, ಈಗ ನಿಧಾನವಾಗಿ ರಕ್ಷಣಾ ಸಾಮಗ್ರಿಗಳ ರಫ್ತು ಕ್ಷೇತ್ರದಲ್ಲಿ ಬೆಳೆಯಲಾರಂಭಿಸಿದೆ ಎಂದು ಸಚಿವಾಲಯ ಹೇಳಿದೆ.
ಇಲಾಖೆಯ ಪ್ರಕಟಣೆಯ ಪ್ರಕಾರ, 2016-17ರಲ್ಲಿ 1,521.86 ಕೋಟಿ ರೂ.ಗಳಷ್ಟು ರಕ್ಷಣಾ ಸಾಮಗ್ರಿಗಳನ್ನು ಭಾರತ ರಫ್ತು ಮಾಡಿತ್ತು. 2019-20ರಲ್ಲಿ 8,620.59 ಕೋಟಿ ರೂ.ಗಳಷ್ಟು ಸಾಮಗ್ರಿಗಳನ್ನು ರಫ್ತು ಮಾಡಲಾಗಿದ್ದು, ರಫ್ತು ಪ್ರಮಾಣ ಐದು ಪಟ್ಟು ಹೆಚ್ಚಳವಾಗಿದೆ.
ರಕ್ಷಣಾ ಸಾಮಗ್ರಿಗಳ ತಯಾರಿಕಾ ಇಲಾಖೆಯು ಸಲ್ಲಿಸಿರುವ ಅಂದಾಜು ಲೆಕ್ಕದ ಪ್ರಕಾರ, 2020-21ನೇ ಆರ್ಥಿಕ ವರ್ಷದಲ್ಲಿ ಈ ರಫ್ತಿನ ಪ್ರಮಾಣ 15,000 ಕೋಟಿ ರೂ.ಗಳಿಗೆ ಏರಬಹುದು ಎಂದು ಅಂದಾಜಿಸಲಾಗಿದೆ.
ಖಾಸಗಿ ಕಂಪನಿಗಳಿಗೆ ಹೆಚ್ಚು ಲಾಭ: ರಕ್ಷಣಾ ಸಾಮಗ್ರಿ ರಫ್ತು ಹೆಚ್ಚಳದಿಂದ ಹೆಚ್ಚಿನ ಮಟ್ಟದಲ್ಲಿ ಲಾಭವಾಗಿರುವುದು ಭಾರತದ ಖಾಸಗಿ ಕಂಪನಿಗಳಿಗೆ ಎಂದು ಡಿಡಿಪಿ ಹೇಳಿದೆ.
2016-17ರಲ್ಲಿ ಈ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳು 194.35 ಕೋಟಿ ರೂ. ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡಿದ್ದವು. 2019-20ರಲ್ಲಿ 8,013.65 ಕೋಟಿ ರೂ. ಮೌಲ್ಯದ ಸಾಮಗ್ರಿಗಳನ್ನು ಅವು ರಫ್ತು ಮಾಡಿವೆ ಎಂದು ಡಿಡಿಪಿ ತಿಳಿಸಿದೆ.
ಸರ್ಕಾರಿ ಕಂಪನಿಗಳ ರಫ್ತುಇಳಿಕೆ: ರಕ್ಷಣಾ ಸಾರ್ವಜನಿಕ ವಲಯ ಕ್ಷೇತ್ರದ ಉಸ್ತುವಾರಿಯಲ್ಲಿರುವ (ಪಿಎಸ್ಯುಗಳು) ಹಾಗೂ ಆರ್ಡನ್ಸ್ ಫ್ಯಾಕ್ಟರಿ ಬೋರ್ಡ್ (ಒಎಫ್ಬಿ) ಕಂಪನಿಗಳ ಮೇಲಿನ ಹೊರೆಯೂ ಕಡಿಮೆಯಾಗಿದ್ದು, 2016-17ರಲ್ಲಿ ಈ ವಲಯದ ಸರ್ಕಾರಿ ಕಂಪನಿಗಳು 1,357.51 ಕೋಟಿ ರೂ. ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡಿದ್ದರೆ, 2019-20ರಲ್ಲಿ 404.94 ಕೋಟಿ ರೂ. ಮೌಲ್ಯದ ಸಾಮಗ್ರಿಗಳನ್ನು ರಫ್ತು ಮಾಡಿವೆ ಎಂದು ಡಿಡಿಪಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ