ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ : ಆರ್‌ಬಿಐ ಸಮೀಕ್ಷೆ


Team Udayavani, Feb 9, 2020, 5:21 PM IST

RBI

ಹೊಸದಿಲ್ಲಿ: ದೇಶದ ಆರ್ಥಿಕತೆಯ ಕುರಿತು ಕೇಂದ್ರಿಯ ಬ್ಯಾಂಕ್‌ ದೇಶದ 13 ಪ್ರಮುಖ ನಗರಗಳಲ್ಲಿ ಸಮೀಕ್ಷೆ ನಡೆಸಿದ್ದು, ಆರ್ಥಿಕ ಕ್ಷೇತ್ರದ ಸ್ಥಿತಿಗತಿಗಳನ್ನು ಅನಾವರಣ ಮಾಡಿದೆ.

ದೇಶದ 13 ಪ್ರಮುಖ ನಗರಗಳ ಒಟ್ಟು 5,389 ಮನೆಗಳನ್ನು ಆಯ್ದುಕೊಂಡು ಕೇಂದ್ರೀಯ ಬ್ಯಾಂಕ್‌ ಸಮೀಕ್ಷೆ ನಡೆಸಿದ್ದು, ದೇಶದ ಆರ್ಥಿಕತೆಯ ಬಗ್ಗೆ ಜನಾಭಿಪ್ರಾಯವನ್ನು ಸಂಗ್ರಹ ಮಾಡಿದೆ.

ಕಳೆದ ಒಂದು ವರ್ಷದಲ್ಲಿ ಹದಗೆಟ್ಟಿದೆ :
ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಬಿಡುಗಡೆ ಮಾಡಿದ ಸಮೀಕ್ಷಾ ವರದಿಯಲ್ಲಿ “ದೇಶದ ಸಾಮಾನ್ಯ ಆರ್ಥಿಕ ಪರಿಸ್ಥಿತಿ ಡೋಲಾಯಮಾನವಾಗಿದೆ ‘ ಎಂದು ಅರ್ಧಕ್ಕಿಂತ ಹೆಚ್ಚು ಕುಟುಂಬಗಳು ಒಪ್ಪಿಕೊಂಡಿವೆ.

2019ರ ಮಾರ್ಚ್‌ನಲ್ಲಿ ಶೇ32.5ಕ್ಕೆ ಹೋಲಿಸಿದರೆ, 2020ರ ಜನವರಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ54.9ರಷ್ಟು ಕುಟುಂಬಗಳು ದೇಶದ ಸಾಮಾನ್ಯ ಆರ್ಥಿಕ ಪರಿಸ್ಥಿತಿ ಕಳೆದ ಒಂದು ವರ್ಷದಲ್ಲಿ ಹದಗೆಟ್ಟಿದೆ ಎಂಬ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಶೇ 27.1ರಷ್ಟು ಜನರು, ದೇಶದ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಿದ್ದಾರೆ.

ಯಾವುದೇ ಬದಲಾವಣೆ ಕಂಡು ಬಂದಿಲ್ಲ:
2019ರ ಜನವರಿಗೆ ಹೋಲಿಸಿದರೆ ಯಾವುದೇ ರೀತಿಯ ಬದಲಾವಣೆ ಕಂಡುಬಂದಿಲ್ಲ ಎಂದು ಶೇ.18ರಷ್ಟು ಕುಟುಂಬಗಳು ಒಪ್ಪಿಕೊಂಡಿವೆ ಎಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ. ಸಮೀಕ್ಷೆಯಲ್ಲಿ ಅಹಮದಾಬಾದ್‌, ಬೆಂಗಳೂರು, ಭೋಪಾಲ…, ಚೆನ್ನೈ, ಹೊಸದಿಲ್ಲಿ, ಗುವಾಹಟಿ, ಹೈದರಾಬಾದ್‌, ಜೈಪುರ, ಕೋಲ್ಕತಾ, ಲಕ್ನೋ, ಮುಂಬೈ, ಪಾಟ್ನಾ ಮತ್ತು ತಿರುವನಂತಪುರಂ ಸೇರಿವೆ.

ಭವಿಷ್ಯದಲ್ಲಿ ಸುಧಾರಣೆ ಕಾಣಬಹುದು
ಸಮೀಕ್ಷೆಯಲ್ಲಿ ಶೇ 48.4ರಷ್ಟು ಜನರು ಮುಂದಿನ ವರ್ಷದಲ್ಲಿ ಉದ್ಯೋಗ ಪರಿಸ್ಥಿತಿ ಸುಧಾರಿಸುತ್ತದೆ ಎಂದಿದ್ದಾರೆ. ಪ್ರಸ್ತುತ ಉದ್ಯೋಗದ ಸನ್ನಿವೇಶಕ್ಕೆ ಸಂಬಂಧಿಸಿದಂತೆ ಸುಮಾರು ಶೇ.57ರಷ್ಟು ಜನರು, ಒಂದು ವರ್ಷದ ಹಿಂದೆ ಇದೇ ಅವಧಿಗೆ ಹೋಲಿಸಿದರೆ ಪರಿಸ್ಥಿತಿ ಹದಗೆಟ್ಟಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಿರುದ್ಯೋಗವು ಭಾರತೀಯ ಆರ್ಥಿಕತೆಯ ಪ್ರಮುಖ ಹಿನ್ನೆಡೆಯ ಅಂಶಗಳಲ್ಲಿ ಒಂದಾಗಿದೆ.

ನಿರುದ್ಯೋಗ ಸಮಸ್ಯೆ
ಅಧಿಕೃತ ಮಾಹಿತಿಯ ಪ್ರಕಾರ, ನಿರುದ್ಯೋಗ ದರವು 2017-18ರಲ್ಲಿ ನಾಲ್ಕು ದಶಕಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ.ಗೃಹ ಬಳಕೆಯ ವಸ್ತುಗಳ ಬೆಲೆಗಳು ಕಳೆದ ವರ್ಷಕ್ಕಿಂತ ಹೆಚ್ಚಾಗಿವೆ. ಖರ್ಚು ಸಹ ಏರಿಕೆಯಾಗಿದೆ. ಮುಂದಿನ ವರ್ಷದಲ್ಲಿ ಖರ್ಚಿನಲ್ಲಿ ಮತ್ತಷ್ಟು ಏರಿಕೆಯನ್ನು ನಿರೀಕ್ಷಿಸಲಾಗುತ್ತಿದೆ. ಶೇ 84.9ರಷ್ಟು ಕುಟುಂಬಸ್ಥರು ಹಣದುಬ್ಬರ ಪ್ರಸ್ತುತ ಏರಿಕೆಯಾಗಿದೆ ಎಂದಿದ್ದಾರೆ. 2019ರ ಡಿಸೆಂಬರ್‌ನಲ್ಲಿ ಗ್ರಾಹಕರ ಹಣದುಬ್ಬರವು ಶೇ 7.3ಕ್ಕಿಂತ ಹೆಚ್ಚಳವಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.