21 ವರ್ಷದ ಬಳಿಕ ಮಿಸ್ ಯುನಿವರ್ಸ್ ಗೆದ್ದ ಭಾರತದ ಚೆಲುವೆ; ಕಿರೀಟ ಗೆದ್ದ ಹರ್ನಾಜ್ ಸಂಧು
Team Udayavani, Dec 13, 2021, 9:47 AM IST
ಐಲಾಟ್ (ಇಸ್ರೇಲ್): ಸೌಂದರ್ಯ ಸ್ಪರ್ಧೆ ಮಿಸ್ ಯುನಿವರ್ಸ್ ನಲ್ಲಿ ಭಾರತದ ಚೆಲುವೆ ಹರ್ನಾಜ್ ಸಂಧು ಗೆಲುವು ಸಾಧಿಸಿದ್ದಾರೆ. ಈ ಮೂಲಕ 21 ವರ್ಷಗಳ ಬಳಿಕ ಮಿಸ್ ಯುನಿವರ್ಸ್ ಕಿರೀಟ ಭಾರತದ ಬೆಡಗಿಯ ಪಾಲಾಗಿದೆ.
ಇಸ್ರೇಲ್ ನ ಐಲಾಟ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಹರ್ನಾಜ್ ಸಂಧು ಅವರು ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸ್ಪರ್ಧಿಗಳನ್ನು ಸೋಲಿಸಿದರು. ಮೆಕ್ಸಿಕೋದ ಮಾಜಿ ವಿಶ್ವ ಸುಂದರಿ 2020 ರ ಆಂಡ್ರಿಯಾ ಮೆಜಾ ಅವರು ಸಮಾರಂಭದಲ್ಲಿ ಹರ್ನಾಜ್ ಸಂಧುಗೆ ಕಿರೀಟವನ್ನು ತೊಡಿಸಿದರು.
ಮೊದಲ ಮತ್ತು ಎರಡನೇ ರನ್ನರ್ ಅಪ್ ಕ್ರಮವಾಗಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರ ಪಾಲಾಯಿತು.
ಇದನ್ನೂ ಓದಿ:ಡಿ.31ಕ್ಕೆ ರಕ್ಷಿತ್ ನಟನೆಯ ಚಾರ್ಲಿ ಬರಲ್ಲ
ಹರ್ನಾಜ್ ಗಿಂತ ಮೊದಲು, ಇಬ್ಬರು ಭಾರತೀಯರು ಮಾತ್ರ ಮಿಸ್ ಯುನಿವರ್ಸ್ ಕಿರೀಟವನ್ನು ಗೆದ್ದಿದ್ದಾರೆ. 1994ರಲ್ಲಿ ಸುಶ್ಮಿತಾ ಸೇನ್ ಮತ್ತು 2000ನೇ ಇಸವಿಯಲ್ಲಿ ಲಾರಾ ದತ್ತಾ ಮಿಸ್ ಯುನಿವರ್ಸ್ ಕಿರೀಟ ಗೆದ್ದುಕೊಂಡಿದ್ದರು.
The new Miss Universe is…India!!!! #MISSUNIVERSE pic.twitter.com/DTiOKzTHl4
— Miss Universe (@MissUniverse) December 13, 2021
ಅಕ್ಟೋಬರ್ನಲ್ಲಿ ಹರ್ನಾಜ್ ಮಿಸ್ ಯೂನಿವರ್ಸ್ ಇಂಡಿಯಾ 2021 ಕಿರೀಟವನ್ನು ಗೆದ್ದುಕೊಂಡಿದ್ದರು. 21 ವರ್ಷದ ಸೌಂದರ್ಯ ರಾಣಿ ಪ್ರಸ್ತುತ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ.
View this post on Instagram
ಹರ್ನಾಜ್ ಸಂಧು ಅವರು ಕೇವಲ 17 ವರ್ಷದವರಾಗಿದ್ದಾಗ ತಮ್ಮ ಸೌಂದರ್ಯ ಸ್ಪರ್ಧೆಯ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಈ ಹಿಂದೆ ಮಿಸ್ ದಿವಾ 2021, ಫೆಮಿನಾ ಮಿಸ್ ಇಂಡಿಯಾ ಪಂಜಾಬ್ 2019 ಕಿರೀಟವನ್ನು ಪಡೆದಿದ್ದಾರೆ ಮತ್ತು ಅವರು ಫೆಮಿನಾ ಮಿಸ್ ಇಂಡಿಯಾ 2019 ರಲ್ಲಿ ಟಾಪ್ 12 ರಲ್ಲಿ ಸ್ಥಾನ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ