ಭಾರತೀಯರ ಜೀವಿತಾವಧಿ 2 ವರ್ಷ ಹೆಚ್ಚಳ: ಈಗ ಸರಾಸರಿ ಆಯಸ್ಸು 69.7 ವರ್ಷ

 ; 4 ದಶಕಗಳಲ್ಲಿ 20 ವರ್ಷದಷ್ಟು ಏರಿಕೆ

Team Udayavani, Jun 14, 2022, 7:25 AM IST

thumb 5

ಹೊಸದಿಲ್ಲಿ: ಭಾರತೀಯರ ಜನನ ಸಮಯದ ಜೀವಿತಾವಧಿಗೆ 2015-19ರ ನಡುವಣ ನಾಲ್ಕು ವರ್ಷಗಳ ಅವಧಿಯಲ್ಲಿ 2ವರ್ಷ ಸೇರ್ಪಡೆ ಯಾಗಿದ್ದು, ಜೀವಿತಾವಧಿಯು ಸರಾಸರಿ 69.7 ವರ್ಷಗಳಿಗೆ ಏರಿಕೆಯಾಗಿದೆ. ಆದರೆ ಇದು ಜಾಗತಿಕ ಸರಾಸರಿಯಾಗಿರುವ 72.6 ವರ್ಷ ಗಳಿಗಿಂತ ಬಹಳ ಕಡಿಮೆಯಿದೆ.

ಇತ್ತೀಚೆಗೆ ಬಿಡುಗಡೆಯಾದ “ಅಬ್ರಿಡ್ಜ್ಡ್‌ ಲೈಫ್ ಟೇಬಲ್ಸ್‌ 2015-19′ ವರದಿಯಲ್ಲಿ ಈ ವಿಚಾರ ಬಹಿರಂಗಗೊಂಡಿದೆ. ಭಾರತೀಯರ ಜೀವಿತಾವಧಿ 2 ವರ್ಷ ಹೆಚ್ಚಳವಾಗಲು ಬರೋಬ್ಬರಿ 10 ವರ್ಷಗಳು ಬೇಕಾದವು ಎಂದು ವರದಿ ಹೇಳಿದೆ. ಜನನ ಸಮಯದ ಜೀವಿತಾವಧಿ ದೊಡ್ಡ ಮಟ್ಟಿನ ಏರಿಕೆ ಕಾಣದಿರಲುಜನನ ಸಮಯದಲ್ಲಿ ಶಿಶು ಮರಣ ಮತ್ತು 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ ಹೆಚ್ಚಿರುವುದೇ ಕಾರಣ.

ಭಾರತದ ಗ್ರಾಮೀಣ ಪ್ರದೇಶಗಳ ಜನರ ಸರಾಸರಿ ಜೀವಿತಾವಧಿ 68.3 ವರ್ಷ, ನಗರ ಪ್ರದೇಶಗಳಲ್ಲಿ ಈ ಪ್ರಮಾಣ 73 ವರ್ಷ. ರಾಷ್ಟ್ರೀಯ ಮಟ್ಟದಲ್ಲಿ ಪುರುಷರ ಜೀವಿತಾವಧಿ 68.4 ವರ್ಷಗಳಾದರೆ, ಮಹಿಳೆಯರದ್ದು 71.1 ವರ್ಷಗಳಾಗಿವೆ. 1970-75ರಲ್ಲಿ ಭಾರತೀಯರ ಜನನ ಸಮಯದ ಜೀವಿತಾವಧಿ 49.7 ವರ್ಷ ಗಳಾಗಿದ್ದವು. 2015-19ರ ಅವಧಿಯಲ್ಲಿ ಇದು 69.7 ವರ್ಷಗಳಿಗೇರಿದೆ. 4 ದಶಕಗಳಲ್ಲಿ ಜೀವಿತಾವಧಿಯು 20 ವರ್ಷಗಳಷ್ಟು ಹೆಚ್ಚಳ ಕಂಡಿದೆ. ರಾಜ್ಯದಲ್ಲಿ ಪುರುಷರ ಜೀವಿತಾವಧಿ: 67.9 ವರ್ಷ, ಮಹಿಳೆಯರ ಜೀವಿತಾವಧಿ: 71.3 ವರ್ಷ, ಒಟ್ಟಾರೆ ಜೀವಿತಾವಧಿ ಸರಾಸರಿ: 69.5.

ದಿಲ್ಲಿಯಲ್ಲಿ ಹೆಚ್ಚು
ದೇಶದಲ್ಲಿ ಅತೀ ಹೆಚ್ಚು ಜೀವಿತಾವಧಿ ಇರುವ ರಾಜ್ಯವೆಂದರೆ ದಿಲ್ಲಿ. ಇಲ್ಲಿ ಸರಾಸರಿ ಜೀವಿತಾವಧಿ 75.9 ವರ್ಷಗಳು. 2ನೇ ಸ್ಥಾನದಲ್ಲಿ ಕೇರಳ ಇದ್ದು, ಇಲ್ಲಿನ ಜನರ ಜೀವಿತಾವಧಿ 75.2 ವರ್ಷಗಳು. ಜನರ ಆಯಸ್ಸು ಕಡಿಮೆಯಿರುವ ರಾಜ್ಯವೆಂದರೆ ಛತ್ತೀಸ್‌ಗಢ-65.3 ವರ್ಷಗಳು.

ಜಾಗತಿಕ ಸ್ಥಿತಿಗತಿ
ಅತೀ ಹೆಚ್ಚು ಜೀವಿತಾವಧಿ ಇರುವ ದೇಶ ಜಪಾನ್‌: 85 ವರ್ಷಗಳು ನಾರ್ವೆ, ಆಸ್ಟ್ರೇಲಿಯಾ, ಸ್ವಿಜರ್ಲೆಂಡ್‌, ಐಸ್‌ಲ್ಯಾಂಡ್‌: 83 ವರ್ಷ ಭಾರತ: 69.7 ವರ್ಷಗಳು ಬಾಂಗ್ಲಾದೇಶ: 72.1 ವರ್ಷಗಳು ನೇಪಾಲ: 70.5 ವರ್ಷಗಳು

 

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.