ಭಾರತೀಯರ ಜೀವಿತಾವಧಿ 2 ವರ್ಷ ಹೆಚ್ಚಳ: ಈಗ ಸರಾಸರಿ ಆಯಸ್ಸು 69.7 ವರ್ಷ
; 4 ದಶಕಗಳಲ್ಲಿ 20 ವರ್ಷದಷ್ಟು ಏರಿಕೆ
Team Udayavani, Jun 14, 2022, 7:25 AM IST
ಹೊಸದಿಲ್ಲಿ: ಭಾರತೀಯರ ಜನನ ಸಮಯದ ಜೀವಿತಾವಧಿಗೆ 2015-19ರ ನಡುವಣ ನಾಲ್ಕು ವರ್ಷಗಳ ಅವಧಿಯಲ್ಲಿ 2ವರ್ಷ ಸೇರ್ಪಡೆ ಯಾಗಿದ್ದು, ಜೀವಿತಾವಧಿಯು ಸರಾಸರಿ 69.7 ವರ್ಷಗಳಿಗೆ ಏರಿಕೆಯಾಗಿದೆ. ಆದರೆ ಇದು ಜಾಗತಿಕ ಸರಾಸರಿಯಾಗಿರುವ 72.6 ವರ್ಷ ಗಳಿಗಿಂತ ಬಹಳ ಕಡಿಮೆಯಿದೆ.
ಇತ್ತೀಚೆಗೆ ಬಿಡುಗಡೆಯಾದ “ಅಬ್ರಿಡ್ಜ್ಡ್ ಲೈಫ್ ಟೇಬಲ್ಸ್ 2015-19′ ವರದಿಯಲ್ಲಿ ಈ ವಿಚಾರ ಬಹಿರಂಗಗೊಂಡಿದೆ. ಭಾರತೀಯರ ಜೀವಿತಾವಧಿ 2 ವರ್ಷ ಹೆಚ್ಚಳವಾಗಲು ಬರೋಬ್ಬರಿ 10 ವರ್ಷಗಳು ಬೇಕಾದವು ಎಂದು ವರದಿ ಹೇಳಿದೆ. ಜನನ ಸಮಯದ ಜೀವಿತಾವಧಿ ದೊಡ್ಡ ಮಟ್ಟಿನ ಏರಿಕೆ ಕಾಣದಿರಲುಜನನ ಸಮಯದಲ್ಲಿ ಶಿಶು ಮರಣ ಮತ್ತು 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ ಹೆಚ್ಚಿರುವುದೇ ಕಾರಣ.
ಭಾರತದ ಗ್ರಾಮೀಣ ಪ್ರದೇಶಗಳ ಜನರ ಸರಾಸರಿ ಜೀವಿತಾವಧಿ 68.3 ವರ್ಷ, ನಗರ ಪ್ರದೇಶಗಳಲ್ಲಿ ಈ ಪ್ರಮಾಣ 73 ವರ್ಷ. ರಾಷ್ಟ್ರೀಯ ಮಟ್ಟದಲ್ಲಿ ಪುರುಷರ ಜೀವಿತಾವಧಿ 68.4 ವರ್ಷಗಳಾದರೆ, ಮಹಿಳೆಯರದ್ದು 71.1 ವರ್ಷಗಳಾಗಿವೆ. 1970-75ರಲ್ಲಿ ಭಾರತೀಯರ ಜನನ ಸಮಯದ ಜೀವಿತಾವಧಿ 49.7 ವರ್ಷ ಗಳಾಗಿದ್ದವು. 2015-19ರ ಅವಧಿಯಲ್ಲಿ ಇದು 69.7 ವರ್ಷಗಳಿಗೇರಿದೆ. 4 ದಶಕಗಳಲ್ಲಿ ಜೀವಿತಾವಧಿಯು 20 ವರ್ಷಗಳಷ್ಟು ಹೆಚ್ಚಳ ಕಂಡಿದೆ. ರಾಜ್ಯದಲ್ಲಿ ಪುರುಷರ ಜೀವಿತಾವಧಿ: 67.9 ವರ್ಷ, ಮಹಿಳೆಯರ ಜೀವಿತಾವಧಿ: 71.3 ವರ್ಷ, ಒಟ್ಟಾರೆ ಜೀವಿತಾವಧಿ ಸರಾಸರಿ: 69.5.
ದಿಲ್ಲಿಯಲ್ಲಿ ಹೆಚ್ಚು
ದೇಶದಲ್ಲಿ ಅತೀ ಹೆಚ್ಚು ಜೀವಿತಾವಧಿ ಇರುವ ರಾಜ್ಯವೆಂದರೆ ದಿಲ್ಲಿ. ಇಲ್ಲಿ ಸರಾಸರಿ ಜೀವಿತಾವಧಿ 75.9 ವರ್ಷಗಳು. 2ನೇ ಸ್ಥಾನದಲ್ಲಿ ಕೇರಳ ಇದ್ದು, ಇಲ್ಲಿನ ಜನರ ಜೀವಿತಾವಧಿ 75.2 ವರ್ಷಗಳು. ಜನರ ಆಯಸ್ಸು ಕಡಿಮೆಯಿರುವ ರಾಜ್ಯವೆಂದರೆ ಛತ್ತೀಸ್ಗಢ-65.3 ವರ್ಷಗಳು.
ಜಾಗತಿಕ ಸ್ಥಿತಿಗತಿ
ಅತೀ ಹೆಚ್ಚು ಜೀವಿತಾವಧಿ ಇರುವ ದೇಶ ಜಪಾನ್: 85 ವರ್ಷಗಳು ನಾರ್ವೆ, ಆಸ್ಟ್ರೇಲಿಯಾ, ಸ್ವಿಜರ್ಲೆಂಡ್, ಐಸ್ಲ್ಯಾಂಡ್: 83 ವರ್ಷ ಭಾರತ: 69.7 ವರ್ಷಗಳು ಬಾಂಗ್ಲಾದೇಶ: 72.1 ವರ್ಷಗಳು ನೇಪಾಲ: 70.5 ವರ್ಷಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ