ವಿಭಜನೆ ತಪ್ಪು ಎಂದು ಪಾಕ್ಗೆ ಈಗ ಅರಿವಾಗಿದೆ! ಮೋಹನ್ ಭಾಗವತ್
Team Udayavani, Apr 1, 2023, 7:50 AM IST
ಭೋಪಾಲ್: ಸ್ವಾತಂತ್ರ್ಯ ಬಂದು 75 ದಶಕಗಳ ಬಳಿಕ ಈಗ ಪಾಕಿಸ್ಥಾನದ ಜನತೆಗೆ ವಿಭಜನೆಯ ನಿರ್ಧಾರ ತಪ್ಪು ಎಂದು ಅರಿವಾಗುತ್ತಿದೆ. ಪಾಕ್ನ ಜನರು ಅಸಂತುಷ್ಟರಾಗಿದ್ದು ವಿಭಜನೆಯ ನಿರ್ಣಯದಿಂದ ಪರಿತಪಿಸುತ್ತಿದ್ದಾರೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಆಯೋಜಿಸಲಾಗಿದ್ದ ಸಿಂಧ್ ಸಮುದಾಯದ ಯುವಕ್ರಾಂತಿಕಾರಿ ಹೇಮು ಕಲಾನಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವತ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿ ಸಿಂಧ್ ಸಮುದಾಯದ ಸಂಸ್ಕೃತಿ, ಮೌಲ್ಯಗಳಿಗೆ ಬೆಲೆ ನೀಡಿ, ಅವಿಭಜಿತ ಭಾರತದ ಭಾಗವಾಗಿದ್ದ ಸಿಂಧ್ ಸಮುದಾಯ ಈ ಭಾರತಕ್ಕೆ (ವಿಭಜಿತ) ಆಗಮಿಸಿತು. ನಿಮ್ಮ ಕೊಡುಗೆ ಅಸಾಧಾರಣ ಎಂದು ಶ್ಲಾಘಿಸಿದರು.
ಇದೇ ವೇಳೆ ನಮ್ಮಿಂದ ವಿಭಜನೆಗೊಂಡು ಹೋದವರು ಸುಖವಾಗಿದ್ದಾರೇನು? ಇಲ್ಲ! ಇಂದಿಗೆ ಅವರೆಲ್ಲರಿಗೂ ತಪ್ಪಿನ ಅರಿವಾಗಿದೆ ಎಂದಿದ್ದಾರೆ. ಪಾಕಿಸ್ಥಾನದ ಕುತಂತ್ರಗಳ ಕುರಿತು ಮಾತನಾಡಿದ ಅವರು, ದಾಳಿ ನಮ್ಮ ಸಂಸ್ಕೃತಿ ಅಲ್ಲ. ಆದರೆ ದಾಳಿ ಮಾಡುವವರನ್ನು ಹಿಮ್ಮೆಟ್ಟಿಸುವುದು ನಮ್ಮ ಸಂಸ್ಕತಿ. ಸ್ವರಾಷ್ಟ್ರ ರಕ್ಷಣೆಗಾಗಿ ಈ ನೀತಿ ಅನುಸರಿಸಿದ್ದೇವೆ. ಅನುಸರಿಸುತ್ತಲೇ ಇರುತ್ತೇವೆ ಎಂದು ಭಾಗವತ್ ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್