ವೇದಗಳಲ್ಲೂ ಸಾಪೇಕ್ಷ ಸಿದ್ಧಾಂತ ಇತ್ತು
Team Udayavani, Mar 17, 2018, 6:00 AM IST
ಇಂಫಾಲ್: ವಿಶ್ವವಿಖ್ಯಾತ ವಿಜ್ಞಾನಿ ಐನ್ಸ್ಟೀನ್ ಪ್ರಸ್ತಾಪಿಸಿದ ಸಾಪೇಕ್ಷ ಸಿದ್ಧಾಂತವನ್ನು ಅದಕ್ಕೂ ಮೊದಲೇ ವೇದಗಳಲ್ಲಿ ಪ್ರಸ್ತಾಪಿಸಲಾಗಿತ್ತು ಎಂಬುದು ಇತ್ತೀಚೆಗೆ ನಿಧನರಾದ ಭೌತಶಾಸ್ತ್ರಜ್ಞ ಸ್ಟೀಫನ್ ಹಾಕಿಂಗ್ ಹೇಳಿದ್ದರು ಎಂಬುದಾಗಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಇಂಫಾಲದಲ್ಲಿ ನಡೆದ 105ನೇ ಭಾರತೀಯ ವಿಜ್ಞಾನ ಸಮ್ಮೇಳನದಲ್ಲಿ ಅವರು ಮಾತುಗಳನ್ನಾದ್ದಾರೆ. ಆಧುನಿಕ ವಿಜ್ಞಾನದ ಹಲವು ಅಂಶಗಳು ನಮ್ಮ ವೇದದಲ್ಲಿ ಪ್ರಸ್ತಾಪವಾದವುಗಳ ವಿಸ್ತೃತ ರೂಪವಾಗಿವೆ. ನಮ್ಮ ವೇದಗಳು ತುಂಬಾ ಮುಂದಿವೆ ಎಂದು ಅವರು ಹೇಳಿದ್ದಾರೆ. ಸ್ಟೀಫನ್ ಹಾಕಿಂಗ್ ಹೇಳಿಕೆಯ ಮೂಲ ಯಾವುದು ಎಂದು ಕೇಳಿದಾಗ, ನೀವೇ ಹುಡುಕಿಕೊಳ್ಳಿ ಎಂದೂ ಅವರು ಸೂಚಿಸಿದ್ದಾರೆ. ಅಲ್ಲದೆ ಈ ಬಗೆ ಮೂಲ ಸಿಗದಿದ್ದರೆ ತನ್ನನ್ನು ಸಂಪರ್ಕಿಸಿ ಎಂದಿದ್ದಾರೆ.
ಲ್ಯಾಬ್ನಿಂದ ಲ್ಯಾಂಡ್ಗೆ ಸಂಶೋಧನೆ ಸಾಗಲಿ: ವೈಜ್ಞಾನಿಕ ಸಂಶೋಧನೆಗಳು ಲ್ಯಾಬ್ನಿಂದ ಲ್ಯಾಂಡ್ಗೆ (ಪ್ರಯೋಗಾಲಯದಿಂದ ಕಾರ್ಯಕ್ಷೇತ್ರಕ್ಕೆ) ಸಾಗಬೇಕು. ಆಗಲೇ ವಿಜ್ಞಾನ ಸದ್ಬಳಕೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತೀಯ ವಿಜ್ಞಾನ ಸಮ್ಮೇಳನದಲ್ಲಿ ಮಾತನಾಡಿದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜ್ಞಾನ ಕ್ಷೇತ್ರದಲ್ಲಿ ನಾವು ಅಭಿವೃದ್ಧಿಗೊಂಡ ದೇಶಗಳ ಸಾಲಿನಲ್ಲಿ ಗುರುತಿಸಿಕೊಳ್ಳಬೇಕು. ಜನ ಬಳಕೆಗೆ ಸೂಕ್ತ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ವಿಜ್ಞಾನ ಅನುಕೂಲ ಕಲ್ಪಿಸಬೇಕು ಎಂದು ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ