ಅನಾರೋಗ್ಯದ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ತೆರಳಿದ ಇಂಡಿಗೋ ಉದ್ಯೋಗಿಗಳು
ಶನಿವಾರ ಶೇ.55ರಷ್ಟು ವಿಮಾನಯಾನ ಅಸ್ತವ್ಯಸ್ತ: ಕಾರಣ ಕೇಳಿ ಡಿಜಿಸಿಎಯಿಂದ ನೋಟಿಸ್
Team Udayavani, Jul 3, 2022, 7:30 PM IST
ನವದೆಹಲಿ:“ಅನಾರೋಗ್ಯದ ಕಾರಣದಿಂದ ನಾನು ಇವತ್ತು ಕರ್ತವ್ಯಕ್ಕೆ ಬರುವುದಿಲ್ಲ’ ಹೀಗೆಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಪೈಲೆಟ್, ಸಿಬ್ಬಂದಿ ಶನಿವಾರ ರಜೆ ಹಾಕಿದ್ದರು.
ಹೀಗಾಗಿ, ಆ ಸಂಸ್ಥೆಯ ಶೇ.55ರಷ್ಟು ವಿಮಾನಯಾನ ಅಸ್ತವ್ಯಸ್ತಗೊಂಡಿತ್ತು. ಅಸಲು ವಿಚಾರ ಏನೆಂದರೆ, ಟಾಟಾ ಗ್ರೂಪ್ ಮಾಲೀಕತ್ವದ ಏರ್ ಇಂಡಿಯಾ ಎರಡನೇ ಹಂತದಲ್ಲಿ ವಿವಿಧ ಹಂತಗಳ ಹುದ್ದೆಗಳಿಗೆ ನೇಮಕ ಮಾಡುತ್ತಿದೆ.
ಹೀಗಾಗಿ, ಇಂಡಿಗೋ ವಿಮಾನ ಕಂಪನಿಯ ಸಿಬ್ಬಂದಿ ಸಂದರ್ಶನಕ್ಕೆ ತೆರಳಿದ್ದರು. ಹೀಗಾಗಿ, ಗೈರುಹಾಜರಾಗಿದ್ದವರು ಅನಾರೋಗ್ಯದ ಕಾರಣ ನೀಡಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ.
ಇಂಡಿಗೋ ವಿಮಾನ ಸಂಸ್ಥೆ 1,600 ವಿಮಾನ ಸಂಚಾರವನ್ನು ನಡೆಸುತ್ತದೆ. ಸಿಬ್ಬಂದಿ ಸಂದರ್ಶನಕ್ಕೆ ತೆರಳಿದ್ದರಿಂದ ಈ ಸಮಸ್ಯೆ ಉಂಟಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮುಖ್ಯಸ್ಥ ಅರುಣ್ ಕುಮಾರ್ “ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಮತ್ತು ಸಂಸ್ಥೆಯ ಬಳಿ ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…