ಸೇನಾ ನಿಯಮಗಳನ್ನು ಪರಿಶೀಲಿಸುವ ಸಾಧ್ಯತೆ


Team Udayavani, Jun 17, 2020, 6:38 PM IST

ಸೇನಾ ನಿಯಮಗಳನ್ನು ಪರಿಶೀಲಿಸುವ ಸಾಧ್ಯತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಡಾಖ್‌: ಪೂರ್ವ ಲಡಾಖ್‌ನಲ್ಲಿ ಭಾರತ ಹಾಗೂ ಚೀನಾದ ಸೈನಿಕರ ನಡುವೆ ಸೋಮವಾರ ರಾತ್ರಿ ನಡೆದಿರುವ ಭೀಕರ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.

ಈ ವಿದ್ಯಮಾನ ಗಡಿಯುದ್ದಕ್ಕೂ ಪ್ರಕ್ಷುಬ್ಧತೆಯನ್ನು ಹೆಚ್ಚಿಸಿದೆ. ಹುತಾತ್ಮರಾದ ಭಾರತೀಯ ಸೈನಿಕರ ಮಾಹಿತಿಗಳು ಹೊರಬಿದ್ದಿದ್ದರೂ, ಚೀನ ಸೈನ್ಯಕ್ಕಾಗಿರುವ ನಷ್ಟದ ಅಧಿಕೃತ ಅಂಕಿ ಅಂಶ ಇನ್ನೂ ಬಹಿರಂಗೊಂಡಿಲ್ಲ. ಭಾರತೀಯ ಗಡಿಯ ಒಳನುಗ್ಗಿದ ಚೀನಕ್ಕೆ ನಮ್ಮ ಸೇನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎನ್ನಲಾಗುತ್ತಿದೆ.

ಚೀನದ ಈ ವಿದ್ಯಮಾನಗಳಿಂದ ಎಚ್ಚರಗೊಂಡಿರುವ ಭಾರತೀಯ ಸೇನೆ ಹಲವು ದಶಕಗಳ ಹಳೆಯ ನಿಯಮಗಳನ್ನು ಪರಿಶೀಲಿಸಲು ಮುಂದಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಸೋಮವಾರದ ಘರ್ಷಣೆಯಲ್ಲಿ ಯಾವುದೇ ರೀತಿಯಲ್ಲಿ ಮದ್ದು ಗುಂಡುಗಳು ಪ್ರಯೋಗವಾಗದೇ ಇದ್ದ ಪರಿಣಾಮ ಇದು ತಾರಕಕ್ಕೇರಿದೆ ಎನ್ನಲಾಗಿದೆ.

ಹಿಂಸಾತ್ಮಕ ಮುಖಾಮುಖಿಯಲ್ಲಿ ಚೀನದ ಸೈನ್ಯವನ್ನು ಎದುರಿಸುವ ಸೈನಿಕರತ್ತ ಗುಂಡು ಹಾರಿಸಲು ಸೂಚನೆಗಳು ದೊರೆಯದೇ ಇದ್ದ ಕಾರಣ ಗುಂಡು ಹಾರಿಸಲಾಗಲಿಲ್ಲ. ಪರಿಣಾಮವಾಗಿ ಮಲ್ಲಯುದ್ಧದಂತೆ ಆರಂಭವಾದ ಈ ಯುದ್ದ ಬಳಿಕ ಕಲ್ಲು ತೂರಾಟ ಹಾಗೂ ದೊಣ್ಣೆಗಳಿಂದ ಬಡಿದಾಡಿಕೊಳ್ಳುವ ಹಂತಕ್ಕೆ ಬಂದಿತ್ತು ಎನ್ನಲಾಗಿದೆ.

ಒಂದು ವೇಳೆ ಗುಂಡಿನ ಮೊರೆತವಾಗಿದ್ದರೆ ಪರಿಸ್ಥಿತಿ ಎತ್ತ ಸಾಗುತ್ತಿತ್ತು ಎಂದು ಹೇಳುವುದು ಕಷ್ಟ. ಮುಂದೆ ಇಂತಹ ಕೈಕಟ್ಟಿ ಕುಳಿತುಕೊಳ್ಳುವ ಪ್ರಸಂಗ ನಡೆಯದಂತೆ ನೋಡಿಕೊಳ್ಳಲು ಸೇನೆ ಮುಂದಾಗಿದೆ.

ಗಲ್ವಾನ್‌ ನದಿ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಘರ್ಷಣೆಯ ಬಳಿಕ ಕೆಲವು ನಿಯಮವನ್ನು ಪರಿಷ್ಕರಿಸಲು ಸೇನೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತದ ಗಡಿಯ ಒಳಗೆ ಚೀನಿ ಸೈನಿಕರು ಹಾಕಿದ ಟೆಂಟ್‌ ಅನ್ನು ತೆಗೆದುಹಾಕಲು ಭಾರತೀಯ ಪಡೆಗಳು ತೆರಳಿದಾಗ ಈ ಘರ್ಷಣೆಗಳು ಪ್ರಾರಂಭವಾಗಿದೆ. ಈ ಘಟನೆಯಲ್ಲಿ 20 ಭಾರತೀಯ ಸೈನಿಕರು ದೇಶಕ್ಕಾಗಿ ಮಡಿದಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭಿಸಿದ್ದು, ಅವರ ಹೆಸರುಗಳನ್ನೂ ಸೇನೆ ಬಹಿರಂಗಗೊಳಿಸಿದೆ.

ಆದರೆ ಎಷ್ಟು ಚೀನೀ ಸೈನಿಕರು ಗಾಯಗೊಂಡರು ಅಥವಾ ಮೃತಪಟ್ಟಿದ್ದಾರೆ ಎಂಬುದರ ಬಗ್ಗೆ ಸೈನ್ಯ ಅಥವಾ ಸರಕಾರ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ. ಆದರೆ ಮೂಲಗಳ ಪ್ರಕಾರ ಈ ಸಂಖ್ಯೆ ಸುಮಾರು 45ರಷ್ಟಿದೆ ಎನ್ನಲಾಗುತ್ತಿದೆ.

ಭಾರತದ ಭೂಭಾಗದಿಂದ ಹಿಂದೆ ಸರಿಯುವ ನಿಟ್ಟಿನಲ್ಲಿ ಬಿಹಾರ್‌ ರೆಜಿಮೆಂಟ್‌ನ ಕರ್ನಲ್‌ ಸಂತೋಷ್‌ ಬಾಬು ನೇತೃತ್ವದಲ್ಲಿ ಮಾತುಕತೆಗೆ ತೆರಳಿತ್ತು. ಆದರೆ ಈ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿದ್ದ ಚೀನಾ ಸೈನಿಕರು ಹಿಂದೆ ಸರಿಯಲು ನಿರಾಕರಿಸಿದ್ದು ಮಾತ್ರವಲ್ಲದೆ ಪರಿಸ್ಥಿತಿಯನ್ನು ಮತ್ತಷ್ಟು ಬಿಗಿಗೊಳಿಸುತ್ತಾ ಹೋಗಿದ್ದಾರೆ. ಇದೇ ಸಂದರ್ಭ ಚೀನಾ ಸೈನಿಕರು ತಮ್ಮ ಬಳಿಗೆ ಮಾತುಕತೆಗೆಂದು ಬಂದಿದ್ದ ಭಾರತೀಯ ಸೈನಿಕರ ತಂಡದ ಮೇಲೆ ದೊಣ್ಣೆ, ಕಲ್ಲು, ಮುಳ್ಳುತಂತಿ ಸುತ್ತಿದ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.

45 ವರ್ಷಗಳ ಬಳಿಕ ಗಡಿಯಲ್ಲಿ ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. 1975ರಲ್ಲಿ ಅರುಣಾಚಲ ಪ್ರದೇಶದ ತುಲುನುಗ್‌ ಲಾ ಪಾಸ್‌ನಲ್ಲಿ ಗಸ್ತು ತಿರುಗುತ್ತಿದ್ದ ನಾಲ್ವರು ಅಸ್ಸಾಂ ರೈಫ‌ಲ್ಸ್‌ ನ ಸೈನಿಕರನ್ನು ಚೀನೀ ಸೈನಿಕರು ಕೊಂದಿದ್ದರು. ಸೋಮವಾರದ ಹಲ್ಲೆಯಲ್ಲಿ ಸೈನಿಕರು ಕಲ್ಲು, ಲಾಠಿಗಳಿಂದ ಮತ್ತು ಉಗುರುಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಡಿಯುದ್ದಕ್ಕೂ ಚೀನ ತನ್ನ ಅಸ್ತಿತ್ವವನ್ನು ಹೆಚ್ಚಿಸಿಕೊಂಡ ಅನಂತರ ಈ ದಾಳಿ ನಡೆದಿದೆ. ಈ ಘರ್ಷಣೆಯ ಸಂದರ್ಭ ಭಾರತ ಮತ್ತು ಚೀನ ಸೈನಿಕರ ಸಂಖ್ಯೆಯ ಅಂತರ 3:1 ಇತ್ತು ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಘರ್ಷಣೆಯಿಂದ ಭಾರತದ ಕಮಾಂಡರ್‌ ಗಂಭೀರವಾಗಿ ಗಾಯಗೊಂಡಿದ್ದರು.

ಟಾಪ್ ನ್ಯೂಸ್

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.