![car](https://www.udayavani.com/wp-content/uploads/2024/07/car-7-415x248.jpg)
ಕನಸು ಭಗ್ನ;ಇಂಡೋನೇಷ್ಯಾ ವಿಮಾನ ಚಲಾಯಿಸುತ್ತಿದ್ದ ಪೈಲಟ್ ದೆಹಲಿ ನಿವಾಸಿ
Team Udayavani, Oct 29, 2018, 2:39 PM IST
![pilot.jpg](https://www.udayavani.com/wp-content/uploads/2018/10/29/pilot.jpg)
ಜಕಾರ್ತಾ: ಜಕಾರ್ತಾದಿಂದ ಪ್ಯಾಂಕಾಲ್ ಪಿನಾಂಗ್ ಗೆ 188 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಲಯನ್ ಏರ್ ಫ್ಲೈಟ್ ಟೇಕಾಫ್ ಆದ ಕೇವಲ 13 ನಿಮಿಷಗಳಲ್ಲಿ ಸಮುದ್ರದಲ್ಲಿ ಪತನಗೊಂಡಿದ್ದು, ಇಂಡೋನೇಷ್ಯಾ ವಿಮಾನ ಪೈಲಟ್ ಆಗಿದ್ದವರು ದೆಹಲಿ ನಿವಾಸಿ ಭಾವಯೈ ಸುನೇಜಾ(31) ಅವರು. ಏಳು ವರ್ಷದ ಹಿಂದೆ ಸುನೇಜಾ ಅವರು ಇಂಡೋನೇಷ್ಯಾ ಏರ್ ಲೈನ್ಸ್ ಸಂಸ್ಥೆಗೆ ಸೇರಿದ್ದರು.
ಇಂಡೋನೇಷ್ಯಾ ವಿಮಾನದ ಕ್ಯಾಪ್ಟನ್ ಆಗಿದ್ದದ್ದು ಸುನೇಜಾ ಹಾಗೂ ಸಹ ಪೈಲಟ್ ಹಾರ್ವಿನೋ ಸೇರಿದಂತೆ ಇತರ ಆರು ಮಂದಿ ವಿಮಾನದಲ್ಲಿದ್ದರು. 31ರ ಹರೆಯದ ಕ್ಯಾಪ್ಟನ್ ಸುನೇಜಾ ಅವರು ಆರು ಸಾವಿರ ಗಂಟೆಗಳ ಕಾಲ ವಿಮಾನದ ಪೈಲಟ್ ಆಗಿ ಅನುಭವ ಹೊಂದಿದ್ದರೆ, ಸಹ ಪೈಲಟ್ ಹಾರ್ವಿನೋ 5 ಸಾವಿರ ಗಂಟೆಗಳ ಕಾಲ ವಿಮಾನ ಹಾರಾಟ ನಡೆಸಿದ್ದ ಅನುಭವ ಹೊಂದಿದ್ದರು ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: 188ಪ್ರಯಾಣಿಕರಿದ್ದ ಇಂಡೋನೇಶ್ಯ ಲಯನ್ ಏರ್ ಫ್ಲೈಟ್ ಸಮುದ್ರದಲ್ಲಿ ಪತನ
ಭಾವಯೈ ಅವರು ದೆಹಲಿಯ ಮಯೂರ್ ವಿಹಾರ್ ನಿವಾಸಿ. 2011ರಲ್ಲಿ ಲಯನ್ ಏರ್ ಸಂಸ್ಥೆಯನ್ನು ಸೇರ್ಪಡೆಗೊಂಡಿದ್ದರು. ಸುನೇಜಾ ಅವರು 737 ಏರ್ ಬೋಯಿಂಗ್ ಹಾರಾಟ ನಡೆಸಿದ್ದರು. 2016ರಲ್ಲಿ ಕ್ಯಾಪ್ಟನ್ ಆಗಿ ಭಡ್ತಿ ಪಡೆದಿದ್ದರು. ಬಹಳಷ್ಟು ಕನಸುಗಳನ್ನು ಕಟ್ಟಿಕೊಂಡಿದ್ದ ಸುನೇಜಾ ಅವರು, ಅಧಿಕಾರಿಗಳ ಬಳಿ ತನಗೆ ದೆಹಲಿಗೆ ವರ್ಗಾಯಿಸಿ ಎಂದು ಕೇಳಿಕೊಂಡಿದ್ದರಂತೆ. ಆದರೆ ವಿಧಿ ವಿಪರ್ಯಾಸ ಸುನೇಜಾ ಅವರ ಕನಸು ಭಗ್ನಗೊಂಡಂತಾಗಿದೆ.
ಇಂಡೋನೇಷ್ಯಾ ವಿಮಾನ ಸಮುದ್ರದಲ್ಲಿ ಪತನಗೊಂಡು 30ರಿಂದ 40 ಮೀಟರ್ ಆಳಕ್ಕೆ ಮುಳುಗಿತ್ತು ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಡೈರೆಕ್ಟರೇಟ್ ಜನರಲ್ ಸಿಂಧು ಅವರು ನೀಡಿದ ಮಾಹಿತಿ ಪ್ರಕಾರ, ವಿಮಾನದಲ್ಲಿ 178 ವಯಸ್ಕ ಪ್ರಯಾಣಿಕರು, ಒಂದು ಮಗು ಮತ್ತು ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಪೈಲಟ್, ಐದು ವಿಮಾನದ ಸಿಬ್ಬಂದಿಗಳು ಮುಳುಗಿ ಹೋಗಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
MUST WATCH
ಹೊಸ ಸೇರ್ಪಡೆ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.