ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ರೈಲ್ವೆ ಹಳಿಮೇಲೆ ಎಸೆದು ಹೋದ ಆರೋಪಿಗಳು!
ಚೂರಿಯಿಂದ ಇರಿದು ಗೋಣಿಚೀಲದಲ್ಲಿ ಕಟ್ಟಿ ಭಾಗಿರತ್ ಪುರದ ರೈಲ್ವೆ ಹಳಿ ಮೇಲೆ ಎಸೆದು ಹೋಗಿದ್ದರು.
Team Udayavani, Jan 21, 2021, 11:28 AM IST
ಇಂದೋರ್: ಮಧ್ಯಪ್ರದೇಶದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೇ ಕಾಲೇಜು ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ರೈಲ್ವೆ ಹಳಿ ಮೇಲೆ ಎಸೆದು ಹೋಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇಂದೋರ್ ನ 19 ವರ್ಷದ ಕಾಲೇಜು ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ಚೂರಿಯಿಂದ ಇರಿದು ರೈಲ್ವೆ ಹಳಿ ಮೇಲೆ ಎಸೆದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಬದುಕುಳಿದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅನುಭವಿಲ್ಲದ ವೈದ್ಯಕೀಯ ಶಿಕ್ಷಣ ಖಾತೆ ಸಿಕ್ಕಿದೆ..ನೋಡೋಣ: ಮಾಧುಸ್ವಾಮಿ
ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಯುವತಿಯನ್ನು ಮಾಜಿ ಪ್ರಿಯತಮ ನಂದಿಗ್ರಾಮದ ಫ್ಲ್ಯಾಟ್ ವೊಂದಕ್ಕೆ ಕರೆತಂದ ಸಂದರ್ಭದಲ್ಲಿ ಆತ ಗೆಳೆಯರ ಜತೆ ಸೇರಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದೆ.
ನಂತರ ಆಕೆಗೆ ಚೂರಿಯಿಂದ ಇರಿದು ಗೋಣಿಚೀಲದಲ್ಲಿ ಕಟ್ಟಿ ಭಾಗಿರತ್ ಪುರದ ರೈಲ್ವೆ ಹಳಿ ಮೇಲೆ ಎಸೆದು ಹೋಗಿದ್ದರು. ನಂತರ ಯುವತಿ ಹೇಗೋ ಗೋಣಿಚೀಲ ಹರಿದುಕೊಂಡು ಹೊರಬಂದ ನಂತರ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿ ವಿವರಿಸಿದೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಗೋವಾ ಚಿತ್ರೋತ್ಸವ: ಓಟಿಟಿ ಸಿನಿಮಾ ಮಂದಿರಗಳನ್ನು ಕೊಲ್ಲುತ್ತದೆಯೇ? ಒಂದು ಚರ್ಚೆ
ಮತ್ತೊಂದು ಪ್ರಕರಣದಲ್ಲಿ 14 ವರ್ಷದ ಬಾಲಕಿ ಬೇತುಲ್ ಗ್ರಾಮದಲ್ಲಿ ಗದ್ದೆಯ ಮೋಟಾರ್ ಸ್ವಿಚ್ ಆಫ್ ಮಾಡಲು ಹೋದ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಜೀವಂತವಾಗಿ ಹೂತು ಹಾಕಲು ಯತ್ನಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮನೆಯವರು ಮಗಳನ್ನು ಹುಡುಕುತ್ತಾ ಸ್ಥಳಕ್ಕೆ ಬಂದಾಗ ಸಣ್ಣ ಚರಂಡಿಯೊಳಗೆ ಕಲ್ಲಿನಿಂದ ಮುಚ್ಚಿದ್ದು, ನೋವಿನಿಂದ ನರಳುತ್ತಿದ್ದ ಶಬ್ದ ಕೇಳಿಸುತ್ತಿತ್ತು. ಕೂಡಲೇ ಕಲ್ಲನ್ನು ಸರಿಸಿ ಆಕೆಯನ್ನು ಹೊರತೆಗೆದು ನಾಗ್ಪುರ್ ಮೆಡಿಕಲ್ ಕಾಲೇಜ್ ಗೆ ದಾಖಲಿಸಿದ್ದರು. ಬಾಲಕಿಯ ಗುಪ್ತಾಂಗಕ್ಕೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು 35 ವರ್ಷದ ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ ಎಂದು ಮಹೇಂದ್ರ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ