ವೆಜ್ ಬಿರಿಯಾನಿಯಲ್ಲಿ ಚಿಕನ್ ಮೂಳೆ ಪತ್ತೆ: ಗ್ರಾಹಕನಿಂದ ಠಾಣೆಗೆ ದೂರು
Team Udayavani, Dec 28, 2022, 10:26 AM IST
ಮಧ್ಯ ಪ್ರದೇಶ: ವಿಚಿತ್ರ ಕಾರಣಕ್ಕೆ ಗ್ರಾಹಕನೊಬ್ಬ ಹೊಟೇಲ್ ಮಾಲಕನ ವಿರುದ್ಧ ದೂರು ದಾಖಲಿಸಿದ ಘಟನೆ ಇಂದೋರ್ ನ ವಿಜಯ್ ನಗರ ಪ್ರದೇಶದಲ್ಲಿ ನಡೆದಿದೆ.
ಇತ್ತೀಚೆಗೆ ಇಂದೋರ್ ನ ವಿಜಯ್ ನಗರ ಪ್ರದೇಶದಲ್ಲಿನ ಹೊಟೇಲ್ ನಲ್ಲಿ ಆಕಾಶ್ ದುಬೆ ಎನ್ನುವ ಗ್ರಾಹಕ ವೆಜ್ ಬಿರಿಯಾನ್ ವೊಂದನ್ನು ಆರ್ಡರ್ ಮಾಡಿದ್ದಾರೆ. ಇನ್ನೇನು ಹಸಿವು ಹೆಚ್ಚಾಗುತ್ತಿದೆ ಊಟ ಮಾಡಬೇಕು ಎನ್ನುವಾಗಲೇ ಸಸ್ಯಹಾರಿ ಆಗಿದ್ದ ಆಕಾಶ್ ದುಬೆಗೆ ವೆಜ್ ಬಿರಿಯಾನಿಯಲ್ಲಿ ಚಿಕನ್ ಮೂಳೆಗಳು ಸಿಕ್ಕಿವೆ.
ಈ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಹಕ ಆಕಾಶ್ ಹೊಟೇಲ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಹೊಟೇಲ್ ಮಾಲಕರು ಹಾಗೂ ಮ್ಯಾನೇಜರ್ ಕ್ಷಮೆ ಕೇಳಿದ್ದಾರೆ. ಆದರೆ ಇದಕ್ಕೆ ಜಗ್ಗದ ಆಕಾಶ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.
ವಿಜಯ್ ನಗರ್ ಪೊಲೀಸ್ ಠಾಣೆಯಲ್ಲಿ ಹೊಟೇಲ್ ಮಾಲಕ ಸ್ವಪ್ನಿಲ್ ಗುಜರಾತಿ ಅವರ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಮ್ಯಾನೇಜರ್ ಅವರನ್ನು ವಿಚಾರಣೆ ನಡೆಸಿದ್ದಾರೆ. ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ