ಆಹಾರ ಹುಡುಕಿ ಬಂದ ಕೋತಿಯನ್ನು ಗಲ್ಲಿಗೇರಿಸಿದ ಅಮಾನವೀಯ ಘಟನೆ ವೈರಲ್


Team Udayavani, Jul 1, 2020, 10:31 AM IST

ಆಹಾರ ಹುಡುಕಿ ಬಂದ ಕೋತಿಯನ್ನು ಗಲ್ಲಿಗೇರಿಸಿದ ಅವಮಾನೀಯ ಘಟನೆ ವೈರಲ್

ತೆಲಂಗಾಣ : ಕೇರಳದಲ್ಲಿ ಪಟಾಕಿಯಿಟ್ಟು ಗರ್ಭಿಣಿ ಆನೆಯನ್ನು ಕೊಂದ ಘಟನೆ ಮಾಸುವ ಮುನ್ನವೇ ಆಹಾರದ ಆಶ್ರಯವನ್ನು ಹುಡುಕಿ ಬಂದ ಕೋತಿಯನ್ನು ಅಮಾನವೀಯವಾಗಿ ಗಲ್ಲಿಗೇರಿಸಿದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಅಮ್ಮಪಲೆಂ ಗ್ರಾಮದಲ್ಲಿ ನಡೆದಿದೆ.

ಹಸಿವಿನಿಂದ ಆಹಾರವನ್ನು ಹುಡುಕಿ ಬಂದ ಕೋತಿಯನ್ನು ಹೊಂಚು ಹಾಕಿದ ಹಳ್ಳಿಗರ ಗುಂಪೊಂದು ಕೋತಿಯನ್ನು ಸೆರೆ ಹಿಡಿದು ಅದನ್ನು ಹಿಂಸಾತ್ಮಕವಾಗಿ ಥಳಿಸಿದ ಜನರು, ನಂತರ ಹಗ್ಗದಿಂದ ಕೋತಿಯನ್ನು ಕಟ್ಟಿ ಮನಬಮದಂತೆ ಹೊಡೆದು ಘಾಸಿಗೊಳಿಸಿದ್ದಾರೆ.ಹಗ್ಗದ ಸಹಾಯದಿಂದ ಕೋತಿಯನ್ನು ಗಲ್ಲಿಗೇರಿಸಿದ ಹೇಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಕೋತಿಯನ್ನು ಹಗ್ಗದಿಂದ ಗಲ್ಲಿಗೇರಿಸಿದ್ದು ಮಾತ್ರವಲ್ಲದೆ. ಅದು ಬಿಡುಗಡೆಯ ಭಿಕ್ಷೆಯನ್ನು ಬೇಡುತ್ತಾ ತನ್ನ ತೋಳುಗಳನ್ನು ಹಾರಿಸುವಾಗ ಅಲ್ಲಿರುವ ಜನರ ಮನಸ್ಸು ಒಂಚೂರು ಕುಂದದೆ ಕೋತಿಯ ಮೇಲೆ ದಾಳಿ ಮಾಡಲು ನಾಯಿಗಳನ್ನು ಬಿಟ್ಟು ತಮಾಷೆ ನೋಡಿದ್ದಾರೆ. ಇದು ಟ್ವಿಟರ್ ನಲ್ಲಿ ನೆಟ್ಟಿಗರ ಆಕ್ರೋಶ ನೆತ್ತಿಗೇರುವಂತೆ ಮಾಡಿದೆ.

“ಇದು ಅಮಾನವೀಯ, ಕ್ರೂರ ಮತ್ತು ನಾಚಿಕೆಗೇಡಿನ ಕೃತ್ಯ. ಮಾನವರು ಎಲ್ಲಿಗೆ ಹೋಗುತ್ತಿದ್ದಾರೆಂದು ತಿಳಿಯುತ್ತಿಲ್ಲ” ಎಂದು ಟ್ವಿಟರ್ ಬಳಕೆದಾರರೊಬ್ಬರು ಬರೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ, ಅಮ್ಮಪಲೆಂ ನಿವಾಸಿ ವೆಂಕಟೇಶ್ವರ ರಾವ್ ಮತ್ತು ಇತರ ಆರೋಪಿಗಳ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅರಣ್ಯ ಅಧಿಕಾರಿಗಳು ಆರೋಪ ಮಾಡಿ ಬಂಧಿಸಿದ ಬಳಿಕ ಜಾಮೀನಿನ ಆಧಾರದ ಮೇಲೆ ಬಿಡುಗಡೆಗೊಳಿಸಲಾಗಿದೆ.

ರಾವ್ ತನ್ನ ಮನೆಗೆ ಆಹಾರ ಹುಡುಕಿ ಬಂದಿದ್ದ ಕೋತಿಯನ್ನು ನೋಡಿ ಅದನ್ನು ಕೋಲಿನಿಂದ ಹೊಡೆದಿದ್ದ. ನಂತರ ತನ್ನ ಸ್ನೇಹಿತನ ಸಹಾಯದಿಂದ ಮರಕ್ಕೆ ನೇತು ಹಾಕಿದ್ದರೆಂದು ವರದಿಯಾಗಿದೆ.

 

 

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.