ರಾಜ್ಯಸಭೆಯಲ್ಲಿ ಇಂದು ತಲಾಖ್ ಮಸೂದೆ ಮಂಡನೆ
Team Udayavani, Jan 2, 2018, 9:35 AM IST
ಹೊಸದಿಲ್ಲಿ: ಕಳೆದ ವಾರ ಲೋಕಸಭೆಯಲ್ಲಿ ಅನುಮೋದನೆಗೊಂಡಿರುವ ತ್ರಿವಳಿ ತಲಾಖ್ ಮಸೂದೆಯು ರಾಜ್ಯಸಭೆಯಲ್ಲಿ ಮಂಗಳವಾರ ಮಂಡನೆಯಾಗಲಿದೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಇದನ್ನು ಮಂಡಿಸಲಿದ್ದಾರೆ. ಮಸೂದೆಯಲ್ಲಿ, ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರ ಎಂದು ಘೋಷಿಸಿರುವುದಲ್ಲದೆ, ಹೀಗೆ ವಿಚ್ಛೇದನ ನೀಡಿದ ಪತಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸುವ ಅಂಶ ಒಳಗೊಂಡಿರುವುದನ್ನು ಕಾಂಗ್ರೆಸ್ ಹಾಗೂ ವಿಪಕ್ಷಗಳು ವಿರೋಧಿಸಿವೆ. ಹಾಗಿದ್ದರೂ ಈ ಮಸೂದೆಗೆ ಬಿಜೆಪಿ ಹಾಗೂ ಮಿತ್ರಪಕ್ಷಗಳ ಸಂಖ್ಯಾಬಲವಿರುವ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಆದರೀಗ, ಕಾಂಗ್ರೆಸ್ ಹಾಗೂ ವಿಪಕ್ಷಗಳ ಸಂಖ್ಯೆ ಹೆಚ್ಚಿರುವ ರಾಜ್ಯಸಭೆಯಲ್ಲಿ ಈ ಮಸೂದೆ ಸಲೀಸಾಗಿ ಅನುಮೋದನೆಗೊಳ್ಳುವುದು ಕಷ್ಟ ಎಂದು ಹೇಳಲಾಗುತ್ತಿದ್ದು, ಮಂಗಳವಾರದ ರಾಜ್ಯಸಭೆ ಕಲಾಪ ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ