ಹುತಾತ್ಮತೆಯ ಅರ್ಥ ತಿಳಿಯದವರಿಂದ ಮಾತ್ರ ಇಂತಹ ಅವಮಾನ ಮಾಡಲು ಸಾಧ್ಯ : ರಾಹುಲ್ ಗರಂ
ನಾವು ಈ ಅಸಭ್ಯ ಕ್ರೌರ್ಯದ ವಿರುದ್ಧ ಇದ್ದೇವೆ : ಮೋದಿ ವಿರುದ್ಧ ರಾಹುಲ್ ಕಿಡಿ
Team Udayavani, Aug 31, 2021, 11:34 AM IST
ನವ ದೆಹಲಿ : ಜಲಿಯನ್ ವಾಲಾಬಾಗ್ ಸ್ಮಾರಕವನ್ನು ಕೇಂದ್ರ ಸರ್ಕಾರ ನವಿಕರಿಸುವುದು ಹುತಾತ್ಮರಿಗೆ ಅವಮಾನ. ಹುತಾತ್ಮತೆಯ ಅರ್ಥ ತಿಳಿಯದವರಿಂದ ಮಾತ್ರ ಇಂತಹ ಅವಮಾನ ಮಾಡಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ, ಕೇಂದ್ರ ಸರ್ಕಾರ ಮಾಡಲು ಹೊರಟಿರುವ ಸ್ಮಾರಕದ ನವೀಕರಣದ ವರದಿಯೊಂದನ್ನು ಟ್ಯಾಗ್ ಮಾಡಿದ ರಾಹುಲ್ ಗಾಂಧಿ, ನಾನು ಹುತಾತ್ಮರ ಮಗ. ಹುತಾತ್ಮರ ಅವಮಾನವನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನಾವು ಈ ಅಸಭ್ಯ ಕ್ರೌರ್ಯದ ವಿರುದ್ಧ ಇದ್ದೇವೆ ಎಂದು ಅವರು ಗುಡುಗಿದ್ದಾರೆ.
जलियाँवाला बाग़ के शहीदों का ऐसा अपमान वही कर सकता है जो शहादत का मतलब नहीं जानता।
मैं एक शहीद का बेटा हूँ- शहीदों का अपमान किसी क़ीमत पर सहन नहीं करूँगा।
हम इस अभद्र क्रूरता के ख़िलाफ़ हैं। pic.twitter.com/3tWgsqc7Lx
— Rahul Gandhi (@RahulGandhi) August 31, 2021
ಇದನ್ನೂ ಓದಿ : ಕಾಬೂಲ್ ತೊರೆದ ಅಮೆರಿಕ ಸೇನಾ ಪಡೆ : ಗಾಳಿಯಲ್ಲಿ ಗುಂಡು ಹಾರಿಸಿ ತಾಲಿಬಾನಿಗಳ ಸಂಭ್ರಮ
ಅಮೃತ್ ಸರದಲ್ಲಿರುವ ಜಲಿಯನ್ ವಾಲಾ ಬಾಗ್ ಹುತಾತ್ಮರ ಸ್ಮಾರಕವನ್ನು ನವೀಕರಿಸಲು ಹೊರಟಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಇದು ‘ಇತಿಹಾಸವನ್ನು ಅಳಿಸುವ ಕೇಂದ್ರ ಸರ್ಕಾರದ ವ್ಯವಸ್ಥಿತ ಯೋಜನೆ’ ಎಂದು ಭಾರಿ ಟೀಕೆ ಕೇಳಿ ಬರುತ್ತಿದೆ.
Our history- being erased! Why?
— Preet Kaur Gill MP (@PreetKGillMP) August 28, 2021
ಕಳೆದ ಶನಿವಾರ, ಪ್ರಧಾನಿ ನರೇಂದ್ರ ಮೋದಿ ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವೊಂದನ್ನು ಉದ್ಘಾಟಿಸಿದ್ದರು. ಮಾತ್ರವಲ್ಲದೇ, ಪಿಎಂ ಮೋದಿ ಸ್ಮಾರಕದಲ್ಲಿ ಮ್ಯೂಸಿಯಂ ಗ್ಯಾಲರಿಗಳನ್ನು ಉದ್ಘಾಟಿಸಿದ್ದರು.
ವರ್ಚುವಲ್ ಸಮಾರಂಭದಲ್ಲಿ ಮಾತನಾಡಿದ್ದ ಮೋದಿ, ಪಂಜಾಬ್ ಜನರು ದೇಶದ ವಿಭಜನೆಯಲ್ಲಿ ಬಲಿಪಶುಗಳಾಗಿದ್ದಾರೆ “ಭಾರತದ ಮೂಲೆ ಮೂಲೆಯಲ್ಲಿ ಮತ್ತು ವಿಶೇಷವಾಗಿ ಪಂಜಾಬ್ ಕುಟುಂಬಗಳಲ್ಲಿ ವಿಭಜನೆಯ ಸಮಯದಲ್ಲಿ ಏನಾಯಿತು ಎಂಬುದರ ನೋವನ್ನು ನಾವು ಇನ್ನೂ ಅನುಭವಿಸುತ್ತಿದ್ದೇವೆ” ಎಂದು ಅವರು ಹೇಳಿದರು.
ಈ ಸ್ಮಾರಕ ಸ್ಥಳವು ನಮ್ಮ ಸ್ವಾತಂತ್ರ್ಯ ಚಳುವಳಿಯ ಪ್ರಯಾಣ, ನಮ್ಮ ಪೂರ್ವಜರ ತ್ಯಾಗ ಮತ್ತು ಅಸಂಖ್ಯಾತ ಹೋರಾಟಗಳ ಬಗ್ಗೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದರು.
ಏಪ್ರಿಲ್ 13, 1919 ರಂದು ಬ್ರಿಟಿಷ್ ಪಡೆಗಳು ಪ್ರತಿಭಟನಾಕಾರರ ಮೇಲೆ ಮನಬಂದಂತೆ ಗುಂಡು ಹಾರಿಸಿದರು. 1,000 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದರು. ನೂರಾರು ಮಂದಿ ಸಾವನ್ನಪಿಸಿದ್ದರು.
ಇದನ್ನೂ ಓದಿ : ರಣಜಿ ಟ್ರೋಫಿ: ಒಂದೇ ಗುಂಪಿನಲ್ಲಿ ಕರ್ನಾಟಕ, ಮುಂಬೈ, ದೆಹಲಿ ತಂಡಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು