1.90 ಕೋ.ರೂ. ವಿಮಾ ಮೊತ್ತಕ್ಕಾಗಿ ಅಪಘಾತದಂತೆ ಬಿಂಬಿಸಿ ಪತ್ನಿಯನ್ನೇ ಕೊಲೆಗೈದ ಪತಿ


Team Udayavani, Dec 1, 2022, 5:52 PM IST

1.90 ಕೋ.ರೂ. ವಿಮಾ ಮೊತ್ತಕ್ಕಾಗಿ ಅಪಘಾತದಂತೆ ಬಿಂಬಿಸಿ ಪತ್ನಿಯನ್ನೇ ಕೊಲೆಗೈದ ಪತಿ

ಜೈಪುರ: ಪತ್ನಿಯ ಹೆಸರಿನಲ್ಲಿದ್ದ 1.90 ಕೋಟಿ ರೂಪಾಯಿ ಮೌಲ್ಯದ ವಿಮಾ ಮೊತ್ತವನ್ನು ಪಡೆಯಲು ಪತಿಯೇ ತನ್ನ ಪತ್ನಿಯನ್ನು ಅಪಘಾತದಂತೆ ಬಿಂಬಿಸಿ ಕೊಲೆಗೈದ ಘಟನೆ ರಾಜಸ್ಥಾನದ ಜೈಪುರದಲ್ಲಿ ಬುಧವಾರ ನಡೆದಿದೆ.

ಮೃತ ಮಹಿಳೆಯನ್ನು ಶಾಲು ಎನ್ನಲಾಗಿದೆ. ಅಲ್ಲದೆ ಪತಿ ತನ್ನ ಪತ್ನಿಯನ್ನು ಕೊಲ್ಲಲು ಓರ್ವ ರೌಡಿ ಶೀಟರ್ ಗೆ ಗುತ್ತಿಗೆ ನೀಡಲಾಗಿದೆ ಎನ್ನಲಾಗಿದೆ.

ಅದರಂತೆ ಅಕ್ಟೋಬರ್ 5 ರಂದು ಪತಿ ಮಹೇಶ್ ಚಂದ್ ಒತ್ತಾಯದ ಮೇರೆಗೆ ಪತ್ನಿ ಶಾಲು ತನ್ನ ಸೋದರ ಸಂಬಂಧಿ ಯುವಕನ ಜೊತೆ ಮುಂಜಾನೆ 4.45 ವೇಳೆಗೆ ಬೈಕ್ ನಲ್ಲಿ ಹನುಮಂತ ದೇವಸ್ಥಾನಕ್ಕೆ ಹೊರಟಿದ್ದಾರೆ ಈ ವೇಳೆ ರೌಡಿ ಶೀಟರ್ ಹಾಗೂ ಆತನ ಇಬ್ಬರು ಸಹಚರರು ಕಾರು ಚಲಾಯಿಸಿಕೊಂಡು ಪತ್ನಿ ಶಾಲು ಪ್ರಯಾಣಿಸುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದ್ದಾರೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ಶಾಲು ಸ್ಥಳದಲ್ಲೇ ಸಾವನ್ನಪ್ಪಿದ್ದರೆ , ಸೋದರ ಸಂಬಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಮೇಲ್ನೋಟಕ್ಕೆ ಇದು ರಸ್ತೆ ಅಪಘಾತದಂತೆ ಕಂಡುಬಂದರೂ ಪೊಲೀಸರ ತನಿಖೆಯ ವೇಳೆ ಪತಿ ತಾನು ಪತ್ನಿಯ ಹೆಸರಿನಲ್ಲಿದ್ದ ವಿಮಾ ಮೊತ್ತ ಪಡೆಯಲು ಅಪಘಾತದಂತೆ ಬಿಂಬಿಸಿ ಪತ್ನಿಯನ್ನು ಕೊಲೆಗೈದಿರುವುದಾಗಿ ಹೇಳಿಕೊಂಡಿದ್ದಾನೆ, ಅಲ್ಲದೆ ಇದಕ್ಕಾಗಿ ರೌಡಿ ಶೀಟರ್ ಓರ್ವನಿಗೆ ಹತ್ತು ಲಕ್ಷಕ್ಕೆ ಗುತ್ತಿಗೆ ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಅದರಂತೆ ಪತ್ನಿಯನ್ನು ದೇವಸ್ಥಾನಕ್ಕೆ ಸೋದರ ಸಂಬಂಧಿ ಯುವಕನ ಜೊತೆ ಹೋಗುವಂತೆ ಒತ್ತಾಯಿಸಿ ಆಮೇಲೆ ಅವರ ಮೇಲೆ ಕಾರು ಹರಿಸಿ ಕೊಲೆಗೈದು ಆಕೆಯ ಹೆಸರಿನಲ್ಲಿದ್ದ 1.90 ಕೋ.ರೂ. ವಿಮಾ ಮೊತ್ತವನ್ನು ತನ್ನ ಹೆಸರಿಗೆ ಮಾಡಿಕೊಳ್ಳುವ ಆಲೋಚನೆ ಮಾಡಿಕೊಂಡಿದ್ದೆ ಎಂದು ಪೊಲೀಸರ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ.

ಶಾಲು 2015 ರಲ್ಲಿ ಚಂದ್ ಅವರನ್ನು ಮದುವೆಯಾಗಿದ್ದು ಒಂದು ಹೆಣ್ಣು ಮಗು ಇದೆ. ಆದರೆ ಮದುವೆಯಾದ ಎರಡು ವರ್ಷಗಳ ನಂತರ ಅವರಿಬ್ಬರ ನಡುವೆ ಜಗಳ ಶುರುವಾಗಿ ಬಳಿಕ ಶಾಲು ತನ್ನ ಮಗುವಿನೊಂದಿಗೆ ತಾಯಿ ಮನೆಯಲ್ಲೇ ವಾಸವಾಗಿದ್ದರು. ಈ ನಡುವೆ ಚಾಂದ್ ಶಾಲು ಹೆಸರಿನಲ್ಲಿ ವಿಮೆ ಮಾಡಿಸಿದ್ದ ಒಂದು ವೇಳೆ ವಿಮೆ ಮಾಡಿದವರು ಅಪಘಾತದಲ್ಲಿ ಸತ್ತರೆ ಅವರ ಪತಿಗೆ 1.90 ಕೋಟಿ ಮೌಲ್ಯದ ವಿಮೆ ಸೇರುತ್ತದೆ ಎಂದು ಚಾಂದ್ ಗೆ ಗೊತ್ತಿತ್ತು ಹಾಗಾಗಿ ಹೇಗಾದರೂ ಮಾಡಿ ಪತ್ನಿಯನ್ನು ಅಪಘಾತದ ರೀತಿಯಲ್ಲಿ ಕೊಲೆಗೈದು ವಿಮೆ ಮೊತ್ತವನ್ನು ಪಡೆಯಬೇಕೆಂದು ಶಾಲು ಬಳಿ ಹೊಸ ಉಪಾಯ ಮಾಡಿದ್ದಾನೆ ಅದೇನೆಂದರೆ ತಾನೊಂದು ಕೆಲಸಕ್ಕೆ ಕೈ ಹಾಕಿದ್ದು ಅದು ಈಡೇರಬೇಕಾದರೆ ನೀನು ನಿರಂತರ ಹನ್ನೊಂದು ದಿನಗಳ ಕಾಲ ಬೈಕ್ ನಲ್ಲಿ ಹನುಮಂತ ದೇವಸ್ಥಾನಕ್ಕೆ ಹೋಗಿ ಬರಬೇಕೆಂದು ಪತ್ನಿ ಬಳಿ ಹೇಳಿಕೊಂಡಿದ್ದ, ಅದರಂತೆ ಪತ್ನಿ ಶಾಲು ಹನ್ನೊಂದು ದಿನಗಳ ವೃತ ಆಚರಿಸಲು ಬೆಳಿಗ್ಗೆ ಎದ್ದು ಸೋದರ ಸಂಬಂಧಿ ಯುವಕನ ಜೊತೆ ದೇವಸ್ಥಾನಕ್ಕೆ ಹೋಗಲು ನಿರ್ಧರಿಸಿದ್ದಾಳೆ ಹಾಗೆ ಮೊದಲ ದಿನ ಬೈಕ್ ನಲ್ಲಿ ದೇವಸ್ಥಾನಕ್ಕೆ ಹೋಗುವ ವೇಳೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ, ಸದ್ಯ ಆರೋಪಿ ಪತಿ ಚಾಂದ್ ಹಾಗೂ ಹತ್ಯೆಗೆ ಗುತ್ತಿಗೆ ಪಡೆದ ಮೂವರು ಪೊಲೀಸರ ವಶದಲ್ಲಿದ್ದಾರೆ.

ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಗೆ ಟೀಕೆ ; ಇಸ್ರೇಲಿ ನಿರ್ಮಾಪಕಗೆ ಅನುಪಮ್ ಖೇರ್ ತಿರುಗೇಟು

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.