ಬಡ್ಡಿ ದರ ಪೂರ್ತಿ ಮನ್ನಾ?
Team Udayavani, Dec 29, 2018, 12:30 AM IST
ನವದೆಹಲಿ: ಲೋಕಸಭೆ ಚುನಾವಣೆ ಹೊತ್ತಿಗೆ ಕೃಷಿ ವಲಯಕ್ಕೆ ಭರ್ಜರಿ ಯೋಜನೆಗಳನ್ನು ಪ್ರಕಟಿಸಿ ರೈತರ ಮನಗೆಲ್ಲುವ ಉತ್ಸಾಹದಲ್ಲಿರುವ ಕೇಂದ್ರ ಸರ್ಕಾರ, ನಿಗದಿತ ಅವಧಿಯಲ್ಲಿ ಮರುಪಾವತಿಯಾಗುವ ರೈತರ ಸಾಲಗಳ ಮೇಲೆ ಬಡ್ಡಿ ಮನ್ನಾ ಮಾಡಲು ಚಿಂತನೆ ನಡೆಸಿದೆ. ಜತೆಗೆ, ಹೊಲಗಳಲ್ಲಿ ಬೆಳೆಯುವ ಬೆಳೆಗಳ ವಿಮೆ ಪ್ರೀಮಿಯಂಗಳನ್ನು ಮನ್ನಾ ಮಾಡುವ, ತೋಟಗಾರಿಕೆ ಬೆಳೆಗಳ ಮೇಲಿನ ಪ್ರೀಮಿಯಂ ಅನ್ನು ಕಡಿತಗೊಳಿಸುವ ನಿರ್ಧಾರಗಳನ್ನು ಕೈಗೊಳ್ಳುವ ಅಂಶಗಳನ್ನು ಯೋಜನೆಗಳಲ್ಲಿ ಸೇರಿಸಲು ಆಲೋಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯಕ್ಕೆ ರೈತರು ಪಡೆಯುತ್ತಿರುವ ಸಾಮಾನ್ಯ ಕೃಷಿ ಸಾಲದ ಮೇಲೆ ಶೇ. 4ರಷ್ಟು ಬಡ್ಡಿ ವಿಧಿಸಲಾಗುತ್ತಿದೆ. ಅಲ್ಪಾವಧಿ ಕೃಷಿ ಸಾಲಗಳ ಮೇಲೆ ಶೇ. 7ರಷ್ಟು ಬಡ್ಡಿ ವಿಧಿಸಲಾಗುತ್ತಿದೆ. ಈಗ ಚಾಲ್ತಿಯಲ್ಲಿರುವಂತೆ ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡುವ ಸಾಮಾನ್ಯ ಕೃಷಿ ಸಾಲದ ಮೇಲಿನ ಬಡ್ಡಿ ದರಕ್ಕೆ ಶೇ.2ರಷ್ಟು ರಿಯಾಯಿತಿ, ಅಲ್ಪಾವಧಿ ಕೃಷಿ ಸಾಲದ ಮೇಲಿನ ಬಡ್ಡಿಯಲ್ಲಿ ಶೇ. 5ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಇವೆರಡರಿಂದಲೇ ಬೊಕ್ಕಸಕ್ಕೆ ಈಗ 15,000 ಕೋಟಿ ರೂ. ಹೊರೆ ಬೀಳುತ್ತಿದೆ. ಈ ಎಲ್ಲಾ ಕೃಷಿ ಸಾಲಗಳ ಬಡ್ಡಿ ಮನ್ನಾ ಮಾಡಿದರೆ ಒಟ್ಟು 30,000 ಕೋಟಿ ರೂ. ಹೊರೆ ಬೀಳಲಿದೆ ಎನ್ನಲಾಗಿದೆ. ಇನ್ನು, ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ಬೆಳೆ ವಿಮೆಗಳಿಗಾಗಿ ರೈತರಿಂದ ವಾರ್ಷಿಕ 5,000 ಕೋಟಿ ರೂ. ಪ್ರೀಮಿಯಂ ಹರಿದುಬರುತ್ತಿದೆ. ಇದನ್ನು ಮನ್ನಾ ಮಾಡಿದರೆ, ಸರ್ಕಾರದ ಮೇಲೆ ಮತ್ತೆ 5,000 ಕೋಟಿ ರೂ. ಹೊರೆ ಬೀಳುತ್ತದೆ.
ಈರುಳ್ಳಿ ಮೇಲಿನ ಪ್ರೋತ್ಸಾಹ ಧನ ಹೆಚ್ಚಳ
ಈರುಳ್ಳಿ ಬೆಲೆ ಕುಸಿದಿರುವ ಹಿನ್ನೆಲೆಯಲ್ಲಿ ಈರುಳ್ಳಿ ರಫ್ತಿನ ಮೇಲೆ ವಿಧಿಸಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ದ್ವಿಗುಣಗೊಳಿಸಲು ಕೇಂದ್ರ ತೀರ್ಮಾನಿಸಿದೆ. ಅದರಿಂದಾಗಿ, ಎಂಎಸ್ಐಎಎಸ್ ವತಿಯಿಂದ ರಫ್ತಾಗುವ ಈರುಳ್ಳಿಯ ಮೇಲೆ ಶೇ. 5ರಷ್ಟು ಇರುವ ಪ್ರೋತ್ಸಾಹ ಧನ ಇದನ್ನು ಶೇ. 10ಕ್ಕೆ ಏರಲಿದೆ. ಇದೇ ವರ್ಷ ಜುಲೈನಲ್ಲಿ ಈರುಳ್ಳಿ ರಫ್ತಿನ ಮೇಲೆ ಶೇ. 5ರಷ್ಟು ಪ್ರೋತ್ಸಾಹ ಧನ ವಿಧಿಸಲಾಗಿತ್ತು.
3 ಆಯ್ಕೆಗಳ ಪರಿಶೀಲನೆ
ರೈತರ ಪ್ಯಾಕೇಜ್ಗೆ ಸಂಬಂಧಿಸಿ ಪ್ರಧಾನಿ ಮೋದಿ ಅವರು 3 ಆಯ್ಕೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವೆಂದರೆ, ಭೂಮಿ ಹೊಂದಿರುವ ರೈತರಿಗೆ ನೇರವಾಗಿ ಎಕರೆಗೆ 1,700-2 ಸಾವಿರ ರೂ. ಪಾವತಿಸುವುದು, ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಿದ ನಂತರ, ಸರ್ಕಾರ ನಿಗದಿಪಡಿಸಿದ ಬೆಲೆಗೂ, ಅವರು ಮಾರಾಟ ಮಾಡಿದ ಬೆಲೆಗೂ ನಡುವೆ ಇರುವ ಅಂತರದ ಮೊತ್ತವನ್ನು ಸರ್ಕಾರವೇ ಭರಿಸುವುದು ಮತ್ತು ಪ್ರತಿ ವ್ಯಕ್ತಿಯ 1 ಲಕ್ಷ ರೂ.ವರೆಗಿನ ಬೆಳೆ ಸಾಲವನ್ನು ಮನ್ನಾ ಮಾಡುವುದು. ಈ ಪೈಕಿ ಮೊದಲನೆಯ ಯೋಜನೆಗೆ 1 ಲಕ್ಷ ಕೋಟಿ ರೂ, ಎರಡನೆಯದಕ್ಕೆ 50,000 ಕೋಟಿ ರೂ. ಹಾಗೂ ಮೂರನೆಯ ಯೋಜನೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂ.ಗಳಷ್ಟು ಹೊರೆ ಸರ್ಕಾರದ ಬೊಕ್ಕಸದ ಮೇಲೆ ಬೀಳಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ