ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಶೇ. 0.1 ಇಳಿಕೆ
Team Udayavani, Jul 1, 2017, 3:45 AM IST
ಹೊಸದಿಲ್ಲಿ: ಪಿಪಿಎಫ್, ಕಿಸಾನ್ ವಿಕಾಸ ಪತ್ರ, ಸುಕನ್ಯಾ ಸಮೃದ್ಧಿಯಂಥ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ. 0.1 ಇಳಿಕೆ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಎಪ್ರಿಲ್-ಜೂನ್ ಅವಧಿಗೆ ಹೋಲಿಸಿದರೆ ಜುಲೈ-ಸೆಪ್ಟಂಬರ್ ತ್ತೈಮಾಸಿಕ ಅವಧಿಯಲ್ಲಿ ಉಳಿತಾಯ ಯೋಜನೆಗಳ ಬಡ್ಡಿ ದರ ದಲ್ಲಿ ಇಳಿಕೆ ಆಗಲಿದೆ. ಬ್ಯಾಂಕ್ಗಳು ಕೂಡ ಠೇವಣಿ ದರದಲ್ಲಿ ಇಳಿಕೆ ಮಾಡುವ ಸಾಧ್ಯತೆಯಿದೆ. ಆದರೆ ಉಳಿತಾಯ ಠೇವಣಿಗಳ ಮೇಲಿನ ಬಡ್ಡಿ ದರ ಯಥಾಸ್ಥಿತಿ ಶೇ. 4 ಇರಲಿದೆ.
ಕಳೆದ ವರ್ಷದ ಎಪ್ರಿಲ್ನಿಂದ ಸರಕಾರ ಪ್ರತಿ ತ್ತೈಮಾಸಿಕಕ್ಕೂ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಪರಿಷ್ಕರಿಸುತ್ತಿದೆ. ಶುಕ್ರವಾರ ವಿತ್ತ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ಪ್ರಕಾರ ಪಿಪಿಎಫ್(ಸಾರ್ವಜನಿಕ ಭವಿಷ್ಯ ನಿಧಿ) ಬಡ್ಡಿ ದರ ವರ್ಷಕ್ಕೆ ಶೇ. 7.8, ಕಿಸಾನ್ ವಿಕಾಸ ಪತ್ರದ ಬಡ್ಡಿದರ ಶೇ. 7.5 ಆಗಲಿದ್ದು, 115 ತಿಂಗಳಿಗೆ ಇದು ಮೆಚೂÂರ್ ಆಗಲಿದೆ. ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರ ಶೇ. 8.3 (ಈಗಿರುವುದು ಶೇ. 8.4), 1ರಿಂದ 5 ವರ್ಷಗಳ ಅವಧಿ ಠೇವಣಿಗೆ ಶೇ. 6.8ರಿಂದ ಶೇ. 7.6 ಹಾಗೂ 5 ವರ್ಷಗಳ ರಿಕರಿಂಗ್ ಡೆಪಾಸಿಟ್ಗೆ ಶೇ. 7.1 ಬಡ್ಡಿ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ