ಚಕ್ರಬಡ್ಡಿ ಮನ್ನಾ ಪ್ರಕರಣದ ವಿಚಾರಣೆ: ಕೇಂದ್ರದ ಅಫಿಡವಿಟ್‌ಗೆ ಸುಪ್ರೀಂ ಅಸಮಾಧಾನ

ಕಾಮತ್‌ ನೇತೃತ್ವದ ಸಮಿತಿಯ ವರದಿಯನ್ವಯವೇ ಚಕ್ರಬಡ್ಡಿ ಮನ್ನಾ ಮಾಡಲಾಗಿದೆಯೇ ಎಂಬುದರ ಬಗ್ಗೆ ಅಫಿಡ ವಿಟ್‌ನಲ್ಲಿ ಸ್ಪಷ್ಟ ಉಲ್ಲೇಖವಿಲ್ಲ.

Team Udayavani, Oct 6, 2020, 6:35 PM IST

ಚಕ್ರಬಡ್ಡಿ ಮನ್ನಾ ಪ್ರಕರಣದ ವಿಚಾರಣೆ: ಕೇಂದ್ರದ ಅಫಿಡವಿಟ್‌ಗೆ ಸುಪ್ರೀಂ ಅಸಮಾಧಾನ

ನವದೆಹಲಿ:ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಾಲ ಮರುಪಾವತಿ ಕಂತುಗಳ ಮುಂದೂಡಿಕೆಯ (ಲೋನ್‌ ಮೊರಟೋರಿಯಂ) ಅವಧಿಯ ಚಕ್ರಬಡ್ಡಿಯನ್ನು ಮನ್ನಾ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿದ್ದು, ಅದು ಎಲ್ಲಾ ಸಾಲಗಾರರಿಗೂ ಸಮಾಧಾನಕರವಾದ ಕ್ರಮವಾಗಿಲ್ಲ ಎಂದು ಸುಪ್ರೀಂಕೋರ್ಟ್‌ ವ್ಯಾಖ್ಯಾನಿಸಿದೆ.

ಪ್ರಕರಣ ಸಂಬಂಧ ‌ ವಿವಿಧ ವಲಯಗ‌ಳಿಂದ ಸಲ್ಲಿಕೆಯಾಗಿರುವ ಆಕ್ಷೇಪಣಾ ಅರ್ಜಿಗಳ ‌ ವಿಚಾರಣೆ ನಡೆಸಿದ ‌ ನ್ಯಾಯಪೀಠ, ಈ ಆಕ್ಷೇಪಣೆಗಳಿಗೆ ಪ್ರತಿ
ಯಾಗಿ ಕೇಂದ್ರ ಸರ್ಕಾರ ‌ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿರುವ ಲೋಪಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟಿತು.  ಜೊತೆಗೆ, ಎಲ್ಲಾ ವಲಯಗಳ ‌ ಸಾಲಗಾರರ ‌ ಗೊಂದಲ
ಪರಿಹಾರ ‌ವಾಗುವಂತೆ ಸೂಕ್ತ ಪ್ರಕ‌ಟಣೆ ಹೊರತರು ವಂತೆ ಸೂಚಿಸಿತು.

ಮೂರು ಬಗೆಯ ಲೋಪ ಪತ್ತೆ: ಚಕ್ರಬಡ್ಡಿ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣ  ಪತ್ರದಲ್ಲಿ 3 ಬಗೆಯ ಲೋಪಗಳಿವೆ ಎಂದು ನ್ಯಾಯ
ಪೀಠ ಹೇಳಿತು. ಮೊದಲನೆಯದಾಗಿ, ಚಕ್ರಬಡ್ಡಿ ಮನ್ನಾ ವಿಚಾರವಾಗಿ ಕೇಂದ್ರ ಸರ್ಕಾರದಿಂದಾಗಲೀ, “ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ'(ಆರ್‌ಬಿ
ಐ)ದಿಂದಾಗಲೀ ಯಾವುದೇ “ಪರಿಣಾಮಕಾರಿ ಆದೇಶ’ ಅಥವಾ “ಸುತ್ತೋಲೆ’ ಪ್ರಕಟವಾಗಿಲ್ಲ.

ಎರಡನೆಯದಾಗಿ, ಕೊರೊನಾ ಸಾಂಕ್ರಾಮಿಕ ಘಟ್ಟ ದಲ್ಲಿ ಸಾಲಗಾರರ ಮೇಲಿನ ಸಾಲದ ಹೊರೆ ಇಳಿಕೆ ಮಾಡುವ ವಿಧಾನಗಳನ್ನು ಪರಿಶೋಧಿಸಿ ಸಲಹೆ
ನೀಡುವ ಸಲುವಾಗಿ ನೇಮಿಸಲಾಗಿದ್ದ ಕೆ.ವಿ.ಕಾಮತ್‌ ನೇತೃತ್ವದ ಸಮಿತಿಯ ವರದಿಯನ್ವಯವೇ ಚಕ್ರಬಡ್ಡಿ ಮನ್ನಾ ಮಾಡಲಾಗಿದೆಯೇ ಎಂಬುದರ ಬಗ್ಗೆ ಅಫಿಡ
ವಿಟ್‌ನಲ್ಲಿ ಸ್ಪಷ್ಟ ಉಲ್ಲೇಖವಿಲ್ಲ. ಅಸಲಿಗೆ, ವರದಿ ಯನ್ನು ಸರ್ಕಾರ ಸ್ವೀಕರಿಸಿದೆಯೇ ಅಥವಾ ತಿರಸ್ಕರಿಸಿ ದೆಯೇ ಎಂಬ ಬಗ್ಗೆಯೂ ಸ್ಪಷ್ಟವಾಗಿ ಹೇಳಲಾಗಿಲ್ಲ.

ಮೂರನೆಯದಾಗಿ, ಕಾಮತ್‌ ಸಮಿತಿ ವರದಿಯನ್ನು ಸಾರ್ವಜನಿಕ ಅವಗಾಹನೆಗಾಗಿ ಎಲ್ಲಿಯೂ ಅದನ್ನು ಅಧಿಕೃತವಾಗಿ ಪ್ರಕಟಿಸಿರುವ ಬಗ್ಗೆಯಾಗಲೀ
ಅಫಿಡವಿಟ್‌ನಲ್ಲಿ ಎಲ್ಲೂ ತಿಳಿಸಿಲ್ಲ ಎಂದು ನ್ಯಾಯ ಪೀಠ ಹೇಳಿತು.

ಬೇರೆ ಅಫಿಡವಿಟ್‌ಗೆ ಸೂಚನೆ: ಮೇಲೆ ತಿಳಿಸಿದ ಎಲ್ಲಾ ಲೋಪಗಳಿಗೆ ಸೂಕ್ತ ಉತ್ತರವಿರುವ ಬೇರೊಂದು ಅಫಿಡವಿಟ್‌ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿತು. ಜೊತೆಗೆ, ಈಗಾಗಲೇ ಚಕ್ರಬಡ್ಡಿ ಮನ್ನಾ ವಿಚಾರಕ್ಕೆ ಸಂಬಂಧಿಸಿ ಅನೇಕ ವಲಯಗಳಿಂದ ಬಂದಿರುವ ಆಕ್ಷೇಪಣಾ ಅರ್ಜಿಗಳಿಗೆ ಅದರಲ್ಲೂ ವಿಶೇಷವಾಗಿ ರಿಯಲ್‌ ಎಸ್ಟೇಟ್ ವಲಯ ಹಾಗೂ ವಿದ್ಯುತ್‌ ಉತ್ಪಾದನಾ ವಲಯಗಳಿಂದ ಬಂದಿರುವ ಅರ್ಜಿಗಳಿಗೆ ಸೂಕ್ತ ಉತ್ತರ ನೀಡಬೇಕು ಎಂದು ಆದೇಶಿಸಿತು. ಇದೇ ವೇಳೆ, ಚಕ್ರಬಡ್ಡಿ ಮನ್ನಾದಿಂದ ಬ್ಯಾಂಕುಗಳಿಗೆ6 ಸಾವಿರಕೋಟಿ ರೂ. ಹೊರೆ ಬೀಳುತ್ತದೆ ಎಂದು ಕೇಂದ್ರ ಸರ್ಕಾರ ಅಂದಾಜು ಮಾಡಿರುವ ಬಗ್ಗೆಯೂ ಸ್ಪಷ್ಟನೆ ನೀಡು ವಂತೆ ನ್ಯಾಯಪೀಠ ಸೂಚಿಸಿ ವಿಚಾರಣೆಯನ್ನು ಅ.13ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.