ಇಂದಿನಿಂದ ವಿಮಾನ ಪ್ರಯಾಣ ಸಲೀಸು; ವಿದೇಶಕ್ಕೆ ತೆರಳುವವರಿಗೆ ಬೂಸ್ಟರ್?
Team Udayavani, Mar 27, 2022, 6:50 AM IST
ಮುಂಬೈ/ಹೊಸದಿಲ್ಲಿ: ಬರೋಬ್ಬರಿ ಎರಡು ವರ್ಷಗಳ ಬಳಿಕ ದೇಶದಿಂದ ಸಾಮಾನ್ಯ ಅಂತಾರಾಷ್ಟ್ರೀಯ ವಿಮಾನಯಾನ ರವಿವಾರದಿಂದ ಶುರುವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿಮಾನಯಾನ ಪೂರ್ಣ ಪ್ರಮಾಣದಲ್ಲಿ ರದ್ದುಗೊಳಿಸಿ ಆದೇಶ ನೀಡಿತ್ತು. ಆದರೆ ಕೆಲವೊಂದು ದೇಶಗಳ ಜತೆಗೆ ವಿಮಾನ ಸಂಚಾರಕ್ಕಾಗಿ ಮಾಡಿಕೊಂಡಿರುವ ಒಪ್ಪಂದದಂತೆ ಆದ್ಯತೆಯಲ್ಲಿ ಇದುವರೆಗೆ ವಿಮಾನಯಾನ ಹಾರಾಟ ನಡೆಯುತ್ತಿತ್ತು.
ದೇಶದಲ್ಲಿ ಸೋಂಕಿನ ಅಬ್ಬರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರವಿವಾರದಿಂದ ಅಂತಾರಾಷ್ಟ್ರೀಯ ವಿಮಾನಯಾನ ಪುನಾರಂಭಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯ ಹೊಸ ನಿಯಮಾವಳಿಗಳನ್ನೂ ಬಿಡುಗಡೆ ಮಾಡಿದೆ. ಕೊರೊನಾ ಹೆಚ್ಚಾಗಿದ್ದ ಸಂದರ್ಭದಲ್ಲಿ ಇದ್ದ ಕಠಿಣ ನಿಯಮಗಳಿಗೆ ವಿನಾಯಿತಿ ನೀಡಲಾಗಿದೆ.
ಅದಕ್ಕೆ ಅನುಸಾರವಾಗಿ ವಿವಿಧ ವಿಮಾನಯಾನ ಕಂಪೆನಿಗಳು ಪ್ರಯಾಣಿಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಆಫರ್ಗಳನ್ನೂ ನೀಡಲಾರಂಭಿಸಿವೆ.ಬೂಸ್ಟರ್ ಡೋಸ್ ನೀಡಲು ಚಿಂತನೆ ಉದ್ಯೋಗ, ಶಿಕ್ಷಣ, ಉದ್ದಿಮೆ, ಕ್ರಿಡಾ ಚಟುವಟಿಕೆಗಳಿಗಾಗಿ ವಿದೇಶಗಳಿಗೆ ತೆರಳುವವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಶುಲ್ಕ ಪಾವತಿಸಿ ಲಸಿಕೆ ಹಾಕಿಸಿಕೊಳ್ಳಲು ಅನುವು ಮಾಡಿಕೊಡಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ.
ಇದನ್ನೂ ಓದಿ:ಮಾ. 30ಕ್ಕೆ ಬಿಮ್ಸ್ಟೆಕ್ ಶೃಂಗಸಭೆ: ಪ್ರಧಾನಿ ಮೋದಿ ಭಾಗಿ
ಬೂಸ್ಟರ್ ಡೋಸ್ ನೀಡಲು ಚಿಂತನೆ
ಉದ್ಯೋಗ, ಶಿಕ್ಷಣ, ಉದ್ದಿಮೆ, ಕ್ರಿಡಾ ಚಟುವಟಿಕೆಗಳಿಗಾಗಿ ವಿದೇಶಗಳಿಗೆ ತೆರಳುವವರಿಗೆ ಬೂಸ್ಟರ್ ಡೋಸ್ ಲಸಿಕೆ
ನೀಡಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಶುಲ್ಕ ಪಾವತಿಸಿ ಲಸಿಕೆ ಹಾಕಿಸಿಕೊಳ್ಳಲು ಅನುವು ಮಾಡಿಕೊಡಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ.
ಮಾರ್ಗಸೂಚಿಯಲ್ಲಿ ಏನಿದೆ?
-ಮಾಸ್ಕ್ ಧರಿಸುವುದು, ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನದಲ್ಲಿ ಸ್ಯಾನಿಟೈಸರ್ ಬಳಕೆ ಕಡ್ಡಾಯ
-ವಿಮಾನದಲ್ಲಿರುವ ಕ್ಯಾಬಿನ್ ಸಿಬ್ಬಂದಿ ಪಿಪಿಇ ಕಿಟ್ ಧರಿಸಬೇಕಾಗಿಲ್ಲ
-ಪ್ರಯಾಣಿಕರನ್ನು ಮುಟ್ಟಿ ತಪಾಸಣೆ ನಡೆಸಲು ಅವಕಾಶ
-ಅಂತಾರಾಷ್ಟ್ರೀಯ ವಿಮಾನಗಳಲ್ಲಿ 3 ಸೀಟು ವೈದ್ಯಕೀಯ ತುರ್ತು ಪರಿಸ್ಥಿತಿಯ ಬಳಕೆಗೆ ಮೀಸಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ