ಐಐಟಿ ಮದ್ರಾಸ್ ಕಾರ್ಯಕ್ರಮದಲ್ಲಿ ಸಂಸ್ಕೃತ ಸ್ವಸ್ತಿ ಗೀತೆ: ವಿವಾದ
Team Udayavani, Feb 26, 2018, 4:34 PM IST
ಚೆನ್ನೈ : ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಹಣಕಾಸು ಸಹಾಯಕ ಸಚಿವ ಪೊನ್ ರಾಧಾಕೃಷ್ಣನ್ ಭಾಗವಹಿಸಿದ್ದ ಐಐಟಿ ಮದ್ರಾಸ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಸ್ಕೃತ ಸ್ವಸ್ತಿ ಗೀತೆ ಹಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಬಂದರು, ಜಲಮಾರ್ಗ ಮತ್ತು ಕರಾವಳಿಗಳ ರಾಷ್ಟ್ರೀಯ ತಂತ್ರಜ್ಞಾನ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದಿವಂಗತ ಕವಿ ಮುತ್ತುಸ್ವಾಮಿ ದೀಕ್ಷಿತರ್ ವಿರಚಿತ ಸುಪ್ರಸಿದ್ಧ “ಮಹಾ ಗಣಪತಿಂ ಮನಸಾ ಸ್ಮರಾಮಿ’ ಸಂಸ್ಕೃತ ಗೀತೆಯನ್ನು ಸ್ವಸ್ತಿ ಗೀತೆಯಾಗಿ ಹಾಡಿದರು. ಸಾಮಾನ್ಯವಾಗಿ ತಮಿಳು ನಾಡಿನ ಸರಕಾರಿ ಕಾರ್ಯಕ್ರಮಗಳಲ್ಲಿ “ತಮಿಳ್ ತಾಯಿ ವಳತ್ತು’ ಗೀತೆಯನ್ನು ಸ್ವಸ್ತಿ ಗೀತೆಯಾಗಿ ಹಾಡುವುದು ವಾಡಿಕೆ.
”ಇದಕ್ಕೆ ವ್ಯತಿರಿಕ್ತವಾಗಿ ಸಂಸ್ಕೃತ ಗೀತೆಯನ್ನು ಹಾಡಲಾಗಿದೆ; ಈ ಮೂಲಕ ಕೇಂದ್ರವು ರಾಜ್ಯದಲ್ಲಿ ಸಂಸ್ಕೃತ ಮತ್ತು ಹಿಂದಿಯನ್ನು ಹೇರುತ್ತಿದೆ” ಎಂದು ಎಂಡಿಎಂಕೆ ಮುಖ್ಯಸ್ಥ ವೈಕೋ ಖಂಡಿಸಿದರು.
ಆದರೆ ಐಐಟಿ ಮದ್ರಾಸ್ ಆಡಳಿತೆಯು ಸ್ಪಷ್ಟನೆ ನೀಡಿ, ಸ್ವಸ್ತಿ ಗೀತೆಯಾಗಿ ಯಾವ ಗೀತೆ ಹಾಡಬೇಕೆಂಬ ಬಗ್ಗೆ ಆಡಳಿತೆಯು ವಿದ್ಯಾರ್ಥಿಗಳಿಗೆ ಸೂಚನೆ ನೀಡುವ ಕ್ರಮವಿಲ್ಲ. ಇದು ಅವರ ಆಯ್ಕೆಯೇ ವಿನಾ ಆಡಳಿತೆಯದ್ದಲ್ಲ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ
Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?
Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್ ದರ ದುಪ್ಪಟ್ಟು
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…