ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ವಿಟೋ ಹಕ್ಕು: ಇರಾನ್ ಆಗ್ರಹ
Team Udayavani, Feb 17, 2018, 7:07 PM IST
ಹೊಸದಿಲ್ಲಿ : ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ವಿಟೋ ಹಕ್ಕು ನೀಡಬೇಕು ಎಂದು ಕರೆ ನೀಡಿರುವ ಇರಾನ್ ಅಧ್ಯಕ್ಷ ಹಸನ್ ರೊಹಾನಿ ಅವರು ಭಾರತವು ಶತಕೋಟಿಗೂ ಮಿಕ್ಕಿದ ಶಾಂತಿ ಪ್ರಿಯ ಜನರಿರುವ ದೇಶವಾಗಿದೆ ಎಂದು ವರ್ಣಿಸಿದರು. ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟವನ್ನು ಇರಾನ್ ಸಕಲ ರೀತಿಯಲ್ಲಿ ಬೆಂಬಲಿಸುವುದಾಗಿ ರೊಹಾನಿ ಹೇಳಿದರು.
ಪ್ರಕೃತ ಭಾರತ ಭೇಟಿಯಲ್ಲಿರುವ ಇರಾನ್ ಅಧ್ಯಕ್ಷ ರೊಹಾನಿ ಅವರು “ಒಂದು ಶತಕೋಟಿಗೂ ಮಿಕ್ಕಿದ ಜನಸಂಖ್ಯೆ ಇರುವ ಭಾರತಕ್ಕೆ ಇನ್ನೂ ಯಾಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ವಿಟೋ ಹಕ್ಕಿಲ್ಲ’ ಎಂದು ಅಚ್ಚರಿ ಪಟ್ಟರು. ದಿಲ್ಲಿಯಲ್ಲಿಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ಅಣು ಬಾಂಬ್ ಹೊಂದಿರುವ ವಿಶ್ವದ ಐದು ದೊಡ್ಡ ದೇಶಗಳಿಗೆ ಮಾತ್ರವೇ ವಿಶ್ವಸಂಸ್ಥೆಯಲ್ಲಿ ವಿಟೋ ಹಕ್ಕು ನೀಡಲಾಗಿರುವುದು ಏಕೆ ಎಂದವರು ಪ್ರಶ್ನಿಸಿದರು.
ಇರಾನ್ ಜನರ ಭವಿಷ್ಯವನ್ನು ನಿಯಂತ್ರಿಸಲು ಯತ್ನಿಸುತ್ತಿರುವ ಅಮೆರಿಕವನ್ನು ಅವರು ಖಂಡಿಸಿದರು.
ರೊಹಾನಿ ಅವರ ಭೇಟಿಯ ಸಂದರ್ಭದಲ್ಲೇ ಭಾರತ ಮತ್ತು ಇರಾನ 9 ನಿರ್ಣಾಯಕ ಒಪ್ಪಂದಗಳಿಗೆ ಸಹಿ ಹಾಕಿವೆ. ಜತೆಗೆ ವ್ಯೂಹಾತ್ಮಕವಾಗಿ ಅತ್ಯಂತ ಮಹತ್ವದ್ದಾಗಿರುವ ಇರಾನಿನ ಚಬಹಾರ್ ಬಂದರಿಗೆ ಈ ಸಂದರ್ಭದಲ್ಲಿ ಹೆಚ್ಚಿನ ಮಹತ್ವ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ