IRCTC ಹಗರಣ: ಜ.28ರ ವರೆಗೆ ಲಾಲು, ಇತರರ ಜಾಮೀನು ವಿಸ್ತರಣೆ
Team Udayavani, Jan 19, 2019, 6:21 AM IST
ಹೊಸದಿಲ್ಲಿ : ಐಆರ್ಸಿಟಿಸಿ ಯ ಎರಡು ಹಗರಣಗಳಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ಗೆ ದಿಲ್ಲಿ ನ್ಯಾಯಾಲಯ ಜನವರಿ 28ರ ವರೆಗೆ ಮಧ್ಯಾವಧಿ ಜಾಮೀನು ವಿಸ್ತರಿಸಿದೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಈ ಕೇಸುಗಳನ್ನು ದಾಖಲಿಸಿತ್ತು.
ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್ ಅವರು ಇದೇ ವೇಳೆ ಲಾಲು ಪತ್ನಿ ರಾಬ್ರಿ ದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಅವರ ಮಧ್ಯಾವಧಿ ಜಾಮೀನನ್ನು ಕೂಡ ಜನವರಿ 28ರ ವರೆಗೆ ವಿಸ್ತರಿಸಿದರು.
ಅಂತೆಯೇ ಜನವರಿ 28ರಂದು ನ್ಯಾಯಾಲಯವು ಲಾಲು ಪ್ರಸಾದ್ ಮತ್ತು ಇತರರ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಪ್ರಕಟಿಸಲಿದೆ.
ಖಾಸಗಿ ಸಂಸ್ಥೆಯೊಂದಕ್ಕೆ ಎರಡು ಐಆರ್ಸಿಟಿಸಿ ಹೊಟೇಲುಗಳ ನಿರ್ವಹಣಾ ಗುತ್ತಿಗೆಯನ್ನು ಅಕ್ರಮವಾಗಿ ಮಂಜೂರು ಮಾಡಿರುವುದಕ್ಕೆ ಸಂಬಂಧಿಸಿ ಈ ಕೇಸುಗಳನ್ನು ಲಾಲು ಮತ್ತು ಇತರರ ವಿರುದ್ಧ ಸಿಬಿಐ, ಇಡಿ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ