ಬ್ಯಾಂಕ್ ದಿವಾಳಿಯಾದರೆ ಠೇವಣಿ ಸುರಕ್ಷಿತವಲ್ಲ?
Team Udayavani, Dec 3, 2017, 6:40 AM IST
ಹೊಸದಿಲ್ಲಿ: ಬ್ಯಾಂಕ್ಗಳು ಆರ್ಥಿಕ ಸಂಕಷ್ಟಕ್ಕೀಡಾದರೆ ಅದನ್ನು ತುಂಬಿಕೊಳ್ಳಲು ಠೇವಣಿದಾರರ ಠೇವಣಿಯ ಒಂದು ಭಾಗ ಬಳಸಿಕೊಳ್ಳಲು ಅನುವು ಮಾಡುವ ಪ್ರಸ್ತಾವನೆ ಇದೀಗ ವಿವಾದಕ್ಕೀಡಾಗಿದ್ದು, ಮರುಪರಿಶೀಲನೆ ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ನಿಯಮವನ್ನು 2008ರ ವೇಳೆ ಐರೋಪ್ಯ ಒಕ್ಕೂಟದ ಆರ್ಥಿಕ ವ್ಯವಸ್ಥೆ ಕುಸಿದಾಗ ಪರಿಚಯಿಸಲಾಗಿತ್ತು. ಆದರೆ ಭಾರತದಲ್ಲಿ ಈಗ ಇದನ್ನು ಹಣಕಾಸು ನಿಲುವಳಿ ಮತ್ತು ಠೇವಣಿ ವಿಮೆ ಮಸೂದೆ (ಎಫ್ಆರ್ಡಿಐ) ಅಡಿ ಪ್ರಸ್ತಾಪಿಸ ಲಾಗಿದೆ. ಆದರೆ ಈ ಮಸೂದೆಯನ್ನು ಸಂಸದೀಯ ಸಮಿತಿಗೆ ವರ್ಗಾಯಿಸಲಾಗಿದ್ದು, ಈ ಸೌಲಭ್ಯದ ಬಗ್ಗೆ ಮರುಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ.
ಏನಿದು ಮಸೂದೆ?: ಸದ್ಯ 1 ಲಕ್ಷ ರೂ.ವರೆಗಿನ ಬ್ಯಾಂಕ್ ಠೇವಣಿಗೆ ವಿಮೆ ಇರುತ್ತದೆ. ಬ್ಯಾಂಕ್ ನಷ್ಟಕ್ಕೀಡಾದರೆ ವಿಮೆಯಿಂದಾಗಿ ಠೇವಣಿದಾರರಿಗೆ ಹಣ ಹಿಂಪಡೆಯುವುದು ಸಮಸ್ಯೆ ಆಗುವುದಿಲ್ಲ. ಬ್ಯಾಂಕ್ಗೂ ಮರುಪಾವತಿಯ ಹೊರೆ ಇರುವುದಿಲ್ಲ. ಆದರೆ ಹೊಸ ಶಿಫಾರಸಿನಲ್ಲಿ, ಹೊರೆ ಕಡಿಮೆ ಮಾಡಿಕೊಳ್ಳಲು ಬಳಸಬಹುದಾದ ಠೇವಣಿ ಮಿತಿ ನಿಗದಿಪಡಿಸಿಲ್ಲ. ಇದರಿಂದಾಗಿ ಎಲ್ಲ ಠೇವಣಿಗಳನ್ನೂ ಬ್ಯಾಂಕ್ ಬಳಸಿಕೊಳ್ಳಬಹುದಾಗಿದ್ದು, 1 ಲಕ್ಷಕ್ಕಿಂತ ಹೆಚ್ಚು ಠೇವಣಿಗೆ ವಿಮೆ ಇರುವುದಿಲ್ಲವಾದ್ದರಿಂದ ಗ್ರಾಹಕರಿಗೆ ಮರುಪಾವತಿ ಅಸಾಧ್ಯ. ಇದಕ್ಕೆ ಬ್ಯಾಂಕಿಂಗ್ ವಲಯದಿಂದ ಆಕ್ಷೇಪ ವ್ಯಕ್ತವಾಗಿದ್ದು, ಸರಕಾರ ಮರುಪರಿಶೀಲನೆಗೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ