ಝಾಕಿರ್ ನಾಯ್ಕ ಭಾಷಣದಿಂದ ಉಗ್ರ ಸಂಘಟನೆ ರಚನೆಗೆ ಪ್ರೇರಣೆ
Team Udayavani, Jul 25, 2019, 5:00 AM IST
ಮುಂಬೈ: ಕಳೆದ ಜನವರಿಯಲ್ಲಿ ಮಹಾರಾಷ್ಟ್ರದಲ್ಲಿ ಉಗ್ರ ನಿಗ್ರಹ ಪಡೆಗೆ ಸಿಕ್ಕಿಬಿದ್ದ ಇಸ್ಲಾಮಿಕ್ ಸ್ಟೇಟ್ ಪ್ರೇರಿತ ಉಗ್ರ ಸಂಘಟನೆಯೊಂದು ಧರ್ಮ ಪ್ರಚಾರಕ ಝಾಕಿರ್ ನಾಯ್ಕ ಭಾಷಣಗಳಿಂದ ಪ್ರಭಾವಿತಗೊಂಡಿದೆ ಎಂದು ಹೇಳಲಾಗಿದೆ.
ಮುಂಬೈ ನ್ಯಾಯಾಲಯಕ್ಕೆ ಎಟಿಎಸ್ ಸಲ್ಲಿಸಿದ ಚಾರ್ಜ್ ಶೀಟ್ನಲ್ಲಿ ಈ ಆರೋಪ ಮಾಡಲಾಗಿದೆ. ಈ ಉಗ್ರರು ಮುಂಬೈನಲ್ಲಿನ ಮುಂಬ್ರೇಶ್ವರ ದೇಗುಲದ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿ 400 ಜನರನ್ನು ಹತ್ಯೆಗೈಯುವ ಯೋಜನೆ ರೂಪಿಸಿದ್ದರು. ಕಳೆದ ಡಿಸೆಂಬರ್ನಲ್ಲಿ ಶ್ರೀಮದ್ ಭಾಗವತ ಕಥೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸಾವಿರಾರು ಜನರು ಭಾಗವಹಿಸಿದ್ದರು. ಇಲ್ಲಿ ವಿತರಿಸಲಾಗುವ ಪ್ರಸಾದಕ್ಕೆ ವಿಷ ಬೆರೆಸಲು ಉಗ್ರರು ಯತ್ನಿಸಿದ್ದರು ಎಂಬುದು ವಿಚಾರಣೆಯ ವೇಳೆ ತಿಳಿದು ಬಂದಿದೆ. ಇವರು ಸ್ಫೋಟಕಗಳು ಹಾಗೂ ವಿಷ ತಯಾರಿಕೆ ತರಬೇತಿ ಪಡೆದಿದ್ದರು. ಅಷ್ಟೇ ಅಲ್ಲ, ಥಾಣೆ ಜಿಲ್ಲೆಯ ಮುಂಬ್ರಾ ಬೈಪಾಸ ಬಳಿ ಸ್ಫೋಟದ ಪ್ರಯೋಗವನ್ನೂ ನಡೆಸಿದ್ದರು ಎಂದು ಚಾರ್ಜ್ ಶೀಟ್ನಲ್ಲಿ ಉಲ್ಲೇಖೀಸಲಾಗಿದೆ.
ಕಳೆದ ಜನವರಿಯಲ್ಲಿ ಉಮ್ಮತ್ ಎ ಮೊಹಮ್ಮದೀಯ ಎಂಬ ಸಂಘಟನೆಯ 10 ಸದಸ್ಯರನ್ನು ಮಹಾರಾಷ್ಟ್ರ ಎಟಿಎಸ್ ಬಂಧಿಸಿತ್ತು. ಇವರಿಗೆ ಐಸಿಸ್ ಉಗ್ರ ಸಂಘಟನೆಯೊಂದಿಗೂ ಸಂಪರ್ಕವಿತ್ತು ಎಂದು ಎಟಿಎಸ್ ಶಂಕಿಸಿದೆ. ಅಬು ಹಮ್ಜಾ ಎಂಬಾತ ಈ ಉಗ್ರ ಸಂಘಟನೆಗೆ ನಾಯಕನಾಗಿದ್ದ. ಈತನೇ ಸ್ಫೋಟದ ಪ್ರಯೋಗ ನಡೆಸಿದ್ದ ಎನ್ನಲಾಗಿದೆ. ಶಂಕಿತರ ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳಲ್ಲಿ ನಾಯ್ಕ ವೀಡಿಯೋಗಳನ್ನು ಶೇರ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ