ಜನ್ಮಸ್ಥಾನಕ್ಕೆ ಖಟ್ಲೆ ಹೂಡಲು ನ್ಯಾಯಿಕ ಮಾನ್ಯತೆ ಇದೆಯೇ?


Team Udayavani, Aug 9, 2019, 5:50 AM IST

janma-stana

ಹೊಸದಿಲ್ಲಿ: “ಭೂವಿವಾದದಲ್ಲಿ ಜನ್ಮಸ್ಥಾನವು ಕಾನೂನು ಖಟ್ಲೆ ಹೂಡುವುದು ಹೇಗೆ. ಸ್ಥಳ ಎನ್ನುವುದು ನ್ಯಾಯಿಕ ವ್ಯಕ್ತಿಯಂತೆ ಕಾನೂನು ಹೋರಾಟ ನಡೆಸಲು ಸಾಧ್ಯವಾಗುತ್ತದೆಯೇ?

ಅಯೋಧ್ಯೆಯ ಸ್ಥಳ ಮಾಲಕತ್ವ ತಗಾದೆ ಬಗ್ಗೆ ಮೂರನೇ ದಿನ ನಡೆದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ನ್ಯಾಯಪೀಠ ರಾಮಲಲ್ಲಾ ವಿರಾಜಮಾನ್‌ ಪರ ನ್ಯಾಯವಾದಿ ಕೆ. ಪರಾಶರನ್‌ ಅವರನ್ನು ಹೀಗೆಂದು ಪ್ರಶ್ನಿಸಿದೆ.

ಅದಕ್ಕೆ ಉತ್ತರಿಸಿದ ಕೆ. ಪರಾಶರನ್‌ ಹಿಂದೂ ಧರ್ಮದಲ್ಲಿ, ಪೂಜಿಸುವ ಪವಿತ್ರ ಸ್ಥಳ ಎಂದು ಪರಿಗಣಿಸಲು ಅಲ್ಲಿ ಮೂರ್ತಿಯೇ ಇರಬೇಕೆಂದಿಲ್ಲ. ನದಿಗಳು, ಸೂರ್ಯನನ್ನೂ ಭಕ್ತಿಯಿಂದ ಪೂಜಿಸಲಾಗುತ್ತದೆ. ಹೀಗಾಗಿ ಜನ್ಮಸ್ಥಳವನ್ನೂ ನ್ಯಾಯಿಕ ವ್ಯಕ್ತಿಯನ್ನಾಗಿ ಪರಿಗಣಿಸಬಹುದು’ ಎಂದು ವಿವರಿಸಿದರು.

ಅಯೋಧ್ಯೆ ಜಮೀನು ಮಾಲಕತ್ವದಲ್ಲಿ ರಾಮಲಲ್ಲಾ ವಿರಾಜಮಾನ್‌ ಜನ್ಮಸ್ಥಾನವನ್ನೂ ಅರ್ಜಿದಾರರನ್ನಾಗಿ ಪರಿಗಣಿಸಿ ಅರ್ಜಿಸಲ್ಲಿಸಿದೆ.

ಪರಾಶರನ್‌ವಾದ ಆಲಿಸಿದ ನ್ಯಾಯಪೀಠ, ಪವಿತ್ರ ಗಂಗಾನದಿ ಕೂಡ ನ್ಯಾಯಿಕ ವ್ಯಕ್ತಿಯಾಗಿ ಖಟ್ಲೆ ಹೂಡಬಹುದು ಎಂಬ ಉತ್ತರಾಖಂಡ ಹೈಕೋರ್ಟ್‌ ನೀಡಿದ ತೀರ್ಪನ್ನು ಉಲ್ಲೇಖೀಸಿತು. ಬಳಿಕ ಪರಾಶರನ್‌ಗೆ ವಾದ ಮುಂದುವರಿಸಲು ಸೂಚನೆ ನೀಡಿತು. ಇದೇ ಪ್ರಕರಣಕ್ಕೆ ಸಂಬಂಧಿಸಿ ಸಿವಿಲ್‌ ಕೋರ್ಟ್‌ನಲ್ಲಿ ವಿಚಾರಣೆ ನಡೆದು ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಜನ್ಮಸ್ಥಾನವನ್ನು ಅರ್ಜಿದಾರರು ಎಂದು ಅಂಗೀಕರಿ ಸಿರಲಿಲ್ಲ ಎಂದು ಪರಾಶರನ್‌ ಆರೋಪಿಸಿದರು.

ಸ್ವರ್ಗಕ್ಕಿಂತ ಹೆಚ್ಚು: ಜನ್ಮಸ್ಥಾನದ ಮಹತ್ವ ವಿವರಿಸುವ ನಿಟ್ಟಿನಲ್ಲಿ “ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ’ (ತಾಯಿನಾಡು ಸ್ವರ್ಗಕ್ಕಿಂತ ಶ್ರೇಷ್ಠ) ಎಂಬ ಶ್ಲೋಕವನ್ನು ಪರಾಶರನ್‌ ಉಲ್ಲೇಖೀಸಿದರು. ಮುಸ್ಲಿಂ ಸಂಘಟನೆಗಳ ಪರ ವಾದಿಸಿದ ರಾಜೀವ್‌ ಧವನ್‌. ರಾಮ ಲಲ್ಲಾ ವಿರಾಜಮಾನ್‌ ಮತ್ತು ನಿರ್ಮೋಹಿ ಅಖಾಡಗಳೇ ಪರಸ್ಪರ ಸಂಘರ್ಷದಲ್ಲಿ ತೊಡಗಿವೆ ಎಂದರು.

ಹೀಗಾಗಿ, ಮುಸ್ಲಿಂ ಸಂಘಟನೆಗಳ ಪರವಾಗಿ ಮಂಡಿಸಬೇಕಾದ ವಾದ ವನ್ನು ಮುಂದೂಡುವುದು ಉತ್ತಮ ಎಂದು ಸಲಹೆ ನೀಡಿದರು. ಈ ನಡುವೆ, ಸಂಪ್ರದಾಯ ಮುರಿದು ಶುಕ್ರವಾರವೂ ಈ ಪ್ರಕರಣದ ವಿಚಾರಣೆ ಮುಂದುವರಿಯಲಿದೆ ಎಂದು ಕೋರ್ಟ್‌ ಹೇಳಿದೆ. ಸಾಮಾನ್ಯವಾಗಿ ಶುಕ್ರವಾರ ಹೊಸ ಕೇಸುಗಳ ವಿಚಾರಣೆ ಮಾತ್ರ ನಡೆಸಲಾಗುತ್ತದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.