ಎರಡು ಮಕ್ಕಳ ನೀತಿ ಯಾವೆಲ್ಲಾ ರಾಜ್ಯಗಳಲ್ಲಿ ಹೇಗೆ ಪಾಲನೆಯಾಗುತ್ತಿದೆ : ಇಲ್ಲಿದೆ ಮಾಹಿತಿ


Team Udayavani, Oct 23, 2019, 6:50 PM IST

Two-Child-Policy-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅಸ್ಸಾಂನಲ್ಲಿ ಆಡಳಿತ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷ ಸರಕಾರವು ಈ ರಾಜ್ಯದಲ್ಲಿ ಎರಡು ಮಕ್ಕಳ ನೀತಿಯನ್ನು ಅನುಷ್ಠಾನಗೊಳಿಸಲು ನಿರ್ಧರಿಸಿದೆ. ರಾಜ್ಯದಲ್ಲಿ ಎರಡು ವರ್ಷಗಳ ಹಿಂದೆಯೇ ಇಂತಹ ಒಂದು ನೀತಿಯನ್ನು ರೂಪಿಸಲಾಗಿದ್ದರೂ ವಿವಿಧ ಕಾರಣಗಳಿಗೆ ಅನುಷ್ಠಾನಗೊಂಡಿರಲಿಲ್ಲ. ಈ ನೀತಿಯ ಅನುಸಾರ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳಿಗೆ ಅಸ್ಸಾಂ ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಸರಕಾರಿ ಹುದ್ದೆಗಳನ್ನು ಹೊಂದಲು ಸಾಧ್ಯವಾಗುವುದಿಲ್ಲ. ಈ ಕಾನೂನು 2021ರ ಜನವರಿ ತಿಂಗಳಿನಿಂದ ಅನುಷ್ಠಾನಗೊಳ್ಳಲಿದೆ.

ಜನಸಂಖ್ಯೆ ಮತ್ತು ಮಹಿಳಾ ಸಶಕ್ತೀಕರಣ ನೀತಿಯನ್ನು ಅಸ್ಸಾಂ ವಿಧಾನಸಭೆಯಲ್ಲಿ 2017ರಂದು ಅಂಗೀಕರಿಸಲಾಗಿತ್ತು. ಇದರನ್ವಯ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ರಾಜ್ಯ ಸರಕಾರದ ಹುದ್ದೆಗಳನ್ನು ಹೊಂದುವಂತಿಲ್ಲ ಮಾತ್ರವಲ್ಲದೇ ಈಗಾಗಲೇ ರಾಜ್ಯ ಸರಕಾರದ ಹುದ್ದೆಗಳಲ್ಲಿ ಇರುವವರು ಸಹ ಈ ಕಾನೂನಿನ ವ್ಯಾಪ್ತಿಗೊಳಪಡಲಿದ್ದಾರೆ. ಆದರೆ ಈ ನೀತಿಯನ್ನು ಜಾರಿಗೆ ತಂದಿರುವ ಮೊದಲ ರಾಜ್ಯ ಅಸ್ಸಾಂ ಅಲ್ಲ.

ಹಾಗಾದರೆ ಯಾವೆಲ್ಲಾ ರಾಜ್ಯಗಳು ಎರಡು ಮಕ್ಕಳ ನೀತಿಯನ್ನು ಯಾವ ಸ್ವರೂಪದಲ್ಲಿ ಅಳವಡಿಸಿಕೊಂಡಿವೆ ಎಂಬ ಮಾಹಿತಿ ಇಲ್ಲಿದೆ.

ಆಂಧ್ರಪ್ರದೇಶ ಮತ್ತು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ತೆಲಂಗಾಣ ರಾಜ್ಯಗಳ 1994ರ ಪಂಚಾಯತ್ ರಾಜ್ ಕಾಯ್ದೆಯು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಯು ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ನಿರ್ಬಂಧ ವಿಧಿಸುತ್ತದೆ.
ಮಹಾರಾಷ್ಟ್ರದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ಗ್ರಾಮ ಪಂಚಾಯತ್ ಹಾಗೂ ಮುನ್ಸಿಪಾಲಿಟಿ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ. ಇಷ್ಟು ಮಾತ್ರವಲ್ಲದೇ ಮಹಾರಾಷ್ಟ್ರ ನಾಗರಿಕ ಸೇವಾ (ಸಣ್ಣ ಕುಟುಂಬದ ಘೋಷಣೆ) ಕಾಯ್ದೆ, 2005, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳನ್ನು ರಾಜ್ಯಸರಕಾರದ ಹುದ್ದೆಯಿಂದ ಅನರ್ಹಗೊಳಿಸುತ್ತದೆ. ಮತ್ತು ಮಹಿಳೆಯೊಬ್ಬರು ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಲ್ಲಿ ಅಂತವರು ಸಾರ್ವಜನಿಕ ಪಡಿತರ ವ್ಯವಸ್ಥೆಯ ಪ್ರಯೋಜನಗಳನ್ನು ಪಡೆದುಕೊಳ್ಳಲು ಅವಕಾಶವಿರುವುದಿಲ್ಲ.

ಇನ್ನು ರಾಜಸ್ಥಾನದಲ್ಲೂ ಸಹ ಅಸ್ಸಾಂನಂತೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳಿಗೆ ರಾಜ್ಯ ಸರಕಾರದ ಹುದ್ದೆಗಳನ್ನು ಹೊಂದಲು ನಿರ್ಬಂಧವಿದೆ. ರಾಜಸ್ಥಾನ ಪಂಚಾಯತ್ ರಾಜ್ ಕಾಯ್ದೆ 1994ರ ಪ್ರಕಾರ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಯು ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ. ಆದರೆ ಇಬ್ಬರು ಮಕ್ಕಳಲ್ಲಿ ಒಂದು ಮಗು ಯಾವುದೇ ರೀತಿಯ ಮಾನಸಿಕ ಅಥವಾ ದೈಹಿಕ ನ್ಯೂನತೆಗಳನ್ನು ಹೊಂದಿದ್ದರೆ ಅದಕ್ಕೆ ರಿಯಾಯಿತಿಯನ್ನು ನೀಡಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 2005ನೇ ಇಸವಿಯಲ್ಲಿ ಸ್ಥಳೀಯಾಡಳಿತ ಕಾಯ್ದೆಗೆ ತಿದ್ದುಪಡಿಯೊಂದನ್ನು ಮಾಡಲಾಗಿತ್ತು. ಅದರ ಪ್ರಕಾರ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ಪಂಚಾಯತ್, ಮುನ್ಸಿಪಾಲಿಟಿ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ.

ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ರಾಜ್ಯಗಳು ಸರಕಾರಿ ಉದ್ಯೋಗ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಎರಡು ಮಕ್ಕಳ ನೀತಿಯನ್ನು 2001ರಲ್ಲೇ ಅಳವಡಿಸಿಕೊಂಡಿದ್ದವು. ಇನ್ನು ಮಧ್ಯಪ್ರದೇಶದಲ್ಲಿ ಎರಡು ಮಕ್ಕಳ ನೀತಿ ಸರಕಾರಿ ಉದ್ಯೋಗಗಳು ಮತ್ತು ನ್ಯಾಯಾಂಗ ಸೇವೆಗಳಿಗೂ ಅನ್ವಯಿಸುತ್ತದೆ.
ಒಡಿಸ್ಸಾ ರಾಜ್ಯದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ನಿರ್ಬಂಧ ವಿಧಿಸುತ್ತದೆ. ಬಿಹಾರ ಮತ್ತು ಉತ್ತರಾಖಂಡ ರಾಜ್ಯಗಳೂ ಸಹ ಎರಡು ಮಕ್ಕಳ ನೀತಿಯನ್ನು ರಾಜ್ಯ ಸರಕಾರದ ವಿವಿಧ ಸ್ತರಗಳಲ್ಲಿ ಅಳವಡಿಸಿಕೊಂಡಿತ್ತು. ಆದರೆ ಸದ್ಯಕ್ಕೆ ಈ ಎರಡು ರಾಜ್ಯಗಳಲ್ಲಿ ಈ ನೀತಿ ಮುನ್ಸಿಪಾಲಿಟಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಮಾತ್ರವೇ ಸೀಮಿತವಾಗಿದೆ.

ಕರ್ನಾಟಕ ರಾಜ್ಯದ ವಿಚಾರಕ್ಕೆ ಬರುವುದಾದರೆ ಇಲ್ಲಿ ಎರಡು ಮಕ್ಕಳ ನೀತಿಗೆ ಬದಲಾಗಿ ವ್ಯಕ್ತಿಯೊಬ್ಬರ ಮನೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದೇ ಇದ್ದಲ್ಲಿ ಅಂತಹ ವ್ಯಕ್ತಿಗಳು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಕಾನೂನನ್ನು 1993ರಲ್ಲೇ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಕಾಯ್ದೆಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಇದು ದೇಶಾದ್ಯಂತ ಸ್ವಚ್ಛ ಭಾರತ ಪರಿಕಲ್ಪನೆ ಮೂಡುವುದಕ್ಕಿಂತಲೂ 21 ವರ್ಷಗಳಿಗೂ ಮೊದಲು ಈ ಕಲ್ಪನೆ ನಮ್ಮ ರಾಜ್ಯದಲ್ಲಿ ಸಾಕಾರಗೊಂಡಿತ್ತು ಎನ್ನುವುದು ವಿಶೇಷ ವಿಚಾರವಾಗಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.