ಹತ್ತು ವರ್ಷ ಪೂರೈಸಿದ ಆಧಾರ್ ನವೀಕರಣಕ್ಕೆ ಸೂಚನೆ
ನಾಗರಿಕರಿಗೆ ಗುರುತಿನ ಚೀಟಿ ಪ್ರಾಧಿಕಾರ ಮನವಿ ಆನ್ಲೈನ್ನಲ್ಲೂ ನವೀಕರಣಕ್ಕೆ ಇದೆ ಅವಕಾಶ
Team Udayavani, Oct 13, 2022, 7:20 AM IST
ಹೊಸದಿಲ್ಲಿ: ನೀವು ಆಧಾರ್ ಕಾರ್ಡ್ ಅನ್ನು ಪಡೆದು ಹತ್ತು ವರ್ಷಗಳಾಗಿದೆಯೇ? ಹಾಗಿದ್ದರೆ ಅದರಲ್ಲಿನ ಮಾಹಿತಿಯನ್ನು ಅಪ್ಡೇಟ್ ಮಾಡಬೇಕು. ಈ ಬಗ್ಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಬುಧವಾರ ಮನವಿ ಮಾಡಿದೆ. ಅದಕ್ಕೆ ಪೂರಕವಾದ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಿದೆ,
ಆನ್ಲೈನ್ ಮೂಲಕ ಅಥವಾ ಆಧಾರ್ ಕೇಂದ್ರಗಳಲ್ಲಿ ಮಾಹಿತಿಯನ್ನು ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಆಧಾರ್ ಕೇಂದ್ರಕ್ಕೆ ತೆರಳಿ ಮಾಹಿತಿ ಅಪ್ಡೇಟ್ ಮಾಡುವುದಿದ್ದರೆ ಸರಕಾರ ನಿಗದಿಪಡಿಸಿದ ಶುಲ್ಕ ಪಾವತಿ ಮಾಡಬೇಕಾಗುತ್ತದೆ.
“ಕಳೆದ 10 ವರ್ಷಗಳಿಂದ ಆಧಾರ್ ಸಂಖ್ಯೆಯು ವ್ಯಕ್ತಿಯ ಗುರುತಿನ ದಾಖಲೆ ಯಾಗಿ ಹೊರಹೊಮ್ಮಿದೆ. ಸರಕಾರದ ವಿವಿಧ ಯೋಜನೆಗಳು ಮತ್ತು ಸೇವೆಗಳ ಉಪಯೋಗ ಪಡೆಯಲು ಆಧಾರ್ ಸಂಖ್ಯೆಯನ್ನು ನೀಡಲಾಗುತ್ತದೆ. ಸರಕಾರಿ ಯೋಜನೆಗಳ ಫಲವನ್ನು ಪಡೆಯಲು ಸಾರ್ವಜನಿಕರು ತಮ್ಮ ಇತ್ತೀಚಿನ ವೈಯಕ್ತಿಕ ಮಾಹಿತಿಗಳೊಂದಿಗೆ ಆಧಾರ್ ಅಪ್ಡೇಟ್ ಮಾಡುವುದು ಅಗತ್ಯವಾಗಿದೆ. ಅಲ್ಲದೆ, ಇದರಿಂದ ಆಧಾರ್ ದೃಢೀಕರಣದಲ್ಲಿ ಅನಾನುಕೂಲತೆ ತಪ್ಪಿಸಬಹುದಾಗಿದೆ,’ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ತಿಳಿಸಿದೆ.
“ಈ ಹಿನ್ನೆಲೆಯಲ್ಲಿ 10 ವರ್ಷಗಳ ಹಿಂದೆ ವಿಶಿಷ್ಟ ಗುರುತಿನ ಸಂಖ್ಯೆ ಪಡೆದಿದ್ದವರು, ಈವರೆಗೆ ತಮ್ಮ ಮಾಹಿತಿಗಳ ಬಗ್ಗೆ ಅಪ್ಡೇಟ್ ಮಾಡದೇ ಇದ್ದರೆ, ಕೂಡಲೇ ತಮ್ಮ ದಾಖಲಾತಿಗಳನ್ನು ಅಪ್ಡೆàಟ್ ಮಾಡಬೇಕು,’ ಎಂದು ಸಚಿವಾಲಯ ವಿನಂತಿಸಿದೆ.
ವ್ಯಕ್ತಿಯ ಗುರುತು, ವಾಸದ ಸ್ಥಳವನ್ನು ದೃಢೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ನಲ್ಲಿ ಮಾಹಿತಿ ನವೀಕರಣಕ್ಕೆ ಈ ವೆಬ್ಸೈಟ್ ಲಾಗಿನ್ ಮಾಡಬಹುದು. https://myaadhaar.uidai.gov.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ