ಮಾಡೆಲ್‌ ಬಲೆಗೆ ಬಿದ್ದ ವಾಯುಪಡೆ ಅಧಿಕಾರಿ


Team Udayavani, Feb 10, 2018, 8:05 AM IST

Honey-Trap-1-600.jpg

ಹೊಸದಿಲ್ಲಿ: ಭಾರತೀಯ ವಾಯುಪಡೆಗೆ (ಐಎಎಫ್) ಸಂಬಂಧಿಸಿದ ರಹಸ್ಯಗಳನ್ನು ತನ್ನ ಗುಪ್ತ ಪ್ರೇಯಸಿಗೆ ಗುಟ್ಟಾಗಿ ರವಾನಿಸುತ್ತಿದ್ದ ಆರೋಪದ ಮೇರೆಗೆ ಅರುಣ್‌ ಮರ್ವಾಹ (51) ಎಂಬ ಐಎಎಫ್ ಅಧಿಕಾರಿಯನ್ನು ದಿಲ್ಲಿ ಪೊಲೀಸರ ವಿಶೇಷ ದಳ ವಶಕ್ಕೆ ಪಡೆದಿದೆ. ಅವರು ತಮ್ಮ ಪ್ರೇಯಸಿ ಮೂಲಕ ದಾಖಲೆಗಳನ್ನು ಪಾಕ್‌ಗುಪ್ತಚರ ಇಲಾಖೆಗೆ (ಐಎಸ್‌ಐ) ರವಾನಿಸಿರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಅರುಣ್‌ ರಹಸ್ಯ ಮಾಹಿತಿಗಳನ್ನು ರವಾನಿಸುತ್ತಿದ್ದುದು ಆಂತರಿಕ ತನಿಖೆಯಿಂದ ದೃಢಪಟ್ಟ ಅನಂತರ, ಇವರನ್ನು ಬಂಧಿಸಿದ್ದ ಐಎಎಫ್, 10 ದಿನಗಳ ವಿಚಾರಣೆಯ ಅನಂತರ, ದಿಲ್ಲಿ ಪೊಲೀಸರಿಗೆ ಒಪ್ಪಿಸಿದೆ. ಆದರೆ, ಈ ಬಗ್ಗೆ ಐಎಎಫ್ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಫೇಸ್‌ಬುಕ್‌ನಲ್ಲಿ ಯುವತಿಯೊಬ್ಬಳ ಪರಿಚಯ ಮಾಡಿಕೊಂಡಿದ್ದ ಅರುಣ್‌, ಆಕೆಯ ಪ್ರೇಮದ ಬಲೆಯಲ್ಲಿ ಬಿದ್ದಿದ್ದರು. ಇಬ್ಬರ ನಡುವೆ ಅಶ್ಲೀಲ ಸಂದೇಶ, ಫೋಟೋಗಳು ವಿನಿಮಯವಾಗುತ್ತಿದ್ದವು. ಆಕೆ ಕಳುಹಿಸುತ್ತಿದ್ದ ಅಶ್ಲೀಲ ಫೋಟೋಗಳಿಗೆ ಪ್ರತಿಯಾಗಿ ಅರುಣ್‌ ಆಕೆಯ ವಾಟ್ಸ್‌ಆ್ಯಪ್‌ ಸಂಖ್ಯೆಗೆ ವಾಯುಪಡೆಯ ರಹಸ್ಯ ಮಾಹಿತಿಗಳನ್ನು ರವಾನಿಸುತ್ತಿದ್ದರು ಎನ್ನಲಾಗಿದೆ. ಬಂಧಿತ ಅರುಣ್‌ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆಯಡಿ (ಒಎಸ್‌ಎ) ದೂರು ದಾಖಲಿಸಲಾಗಿದೆ. ಆರೋಪ ಸಾಬೀತಾದಲ್ಲಿ ಅರುಣ್‌, 14 ವರ್ಷಗಳ ಸೆರೆವಾಸ ಅನುಭವಿಸಬೇಕಾಗುತ್ತದೆ. ಸ್ಥಳೀಯ ನ್ಯಾಯಾಲಯಕ್ಕೆ ಅವರನ್ನು ಗುರುವಾರ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಪೊಲೀಸ್‌ ವಶಕ್ಕೆ ಒಪ್ಪಿಸಿದೆ.

ಯಾರಿವರು ಅರುಣ್‌?: ಪ್ಯಾರಾ ಜಂಪರ್‌ ತರಬೇತುದಾರರಾಗಿದ್ದ ಅರುಣ್‌ ಮರ್ವಾ ಅವರನ್ನು ಗರುಡ ಕಮಾಂಡೋ ಪಡೆಯ ತರಬೇತಿಗಾಗಿಯೂ ನಿಯೋಜಿಸಲಾಗಿತ್ತು. ದಿಲ್ಲಿಯಲ್ಲಿರುವ ಐಎಎಫ್ನ ಕೇಂದ್ರ ಕಚೇರಿಯಲ್ಲಿ ಇವರು ಸೇವೆ ಸಲ್ಲಿಸುತ್ತಿದ್ದರು. ಮುಂದಿನ ವರ್ಷ ನಿವೃತ್ತಿಯಾಗಬೇಕಿತ್ತು.

ಪತ್ತೆಯಾಗಿದ್ದು ಹೇಗೆ?
ಅರುಣ್‌ ಕಾರ್ಯನಿರ್ವಹಿಸುತ್ತಿದ್ದ  ದಿಲ್ಲಿಯ ಕಚೇರಿಯಲ್ಲಿ ಮೊಬೈಲ್‌ಗ‌ಳ ಬಳಕೆಯನ್ನು ನಿಷೇಧಿಸಲಾಗಿತ್ತು. ಆದರೂ, ಇತ್ತೀಚಿನ ತಿಂಗಳುಗಳಲ್ಲಿ ಅರುಣ್‌, ತಮ್ಮೊಂದಿಗೆ ಅತ್ಯಾಧುನಿಕ, ದುಬಾರಿ ಬೆಲೆಯ ಸ್ಮಾರ್ಟ್‌ ಫೋನ್‌ ಕೊಂಡೊಯ್ಯುತ್ತಿದ್ದರು. ಇದನ್ನು ಗಮನಿಸಿದ್ದ ಐಎಎಫ್ನ ಹಿರಿಯ ಅಧಿಕಾರಿಯೊಬ್ಬರು ಇವರ ವಿರುದ್ಧ ಆಂತರಿಕ ತನಿಖೆಗೆ ಆದೇಶಿಸಿದ್ದರು. ತನಿಖೆಯಲ್ಲಿ, ಇವರು ವಾಟ್ಸ್‌ ಆ್ಯಪ್‌ ಮೂಲಕ ಐಎಎಫ್ನ ರಹಸ್ಯ ಮಾಹಿತಿಗಳನ್ನು ಕಳುಹಿಸುತ್ತಿದ್ದುದು ಪತ್ತೆಯಾಗಿದ್ದರಿಂದ ಇವರನ್ನು ಕೆಲವು ದಿನಗಳ ಹಿಂದೆ ಬಂಧಿಸಿ ವಿಚಾರಣೆಗೊಳಪಡಿಸಲಾಗಿತ್ತು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.