ಹಾಫೀಜ್ ಸಯೀದ್ ರಕ್ಷಣೆಗೆ ISI ಹೊಸ ಪ್ಲಾನ್: ಜೆಯುಡಿ ಇಬ್ಭಾಗ !
Team Udayavani, Feb 25, 2019, 6:19 AM IST
ಹೊಸದಿಲ್ಲಿ : 2008ರ ಮುಂಬಯಿ ದಾಳಿಯ ಸೂತ್ರದಾರ, ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ, ಹಾಫೀಜ್ ಸಯೀದ್ ನನ್ನು ರಕ್ಷಿಸಲು ಪಾಕಿಸ್ಥಾನದ ಕುಪ್ರಸಿದ್ಧ ಬೇಹು ಸಂಸ್ಥೆ ಐಎಸ್ಐ ಹೊಸ ಕುಟಿಲೋಪಾಯವನ್ನು ರೂಪಿಸಿದೆ.
ಜಮಾತ್ ಉದ್ ದಾವಾ ಉಗ್ರ ಸಂಘಟನೆಯನ್ನು ಐಎಸ್ಐ ಎರಡು ಭಾಗಗಳನ್ನಾಗಿ ವಿಂಗಡಿಸಿದೆ. ಇವುಗಳನ್ನು – 1. ಜಮ್ಮು ಕಾಶ್ಮೀರ ಮೂವ್ಮೆಂಟ್, ಮತ್ತು 2. ರೆಸ್ಕ್ಯೂ, ರಿಲೀಫ್ ಆ್ಯಂಡ್ ಎಜುಕೇಶನ್ ಫೌಂಡೇಶನ್ ಎಂದು ಪುನರ್ ನಾಮಕರಣ ಮಾಡಲಾಗಿದೆ.
ಹೊಸ ಹೆಸರಿನ ಈ ಎರಡು ವಿಭಾಗಗಳ ರಚನೆಯ ಮೂಲ ಉದ್ದೇಶ ಹಾಫೀಜ್ ಸಯೀದ್ ನನ್ನು ರಕ್ಷಿಸುವುದೇ ಆಗಿದೆ ಎಂದು ಗುಪ್ತಚರ ದಳ ತಿಳಿಸಿದೆ.
ಪಾಕಿಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರ ಸಮೂಹಗಳ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಬೇಕೆಂದು ಪಾಕ್ ಸರಕಾರದ ಮೇಲೆ ಜಾಗತಿಕ ಒತ್ತಡ ಹೆಚ್ಚುತ್ತಿರುವ ಕಾರಣ, ಐಎಸ್ಐ, ಹಾಫೀಜ್ ಮತ್ತು ಆತನ ಉಗ್ರ ಸಂಘಟನೆಯನ್ನು ರಕ್ಷಿಸುವುದಕ್ಕಾಗಿ ಈ ಹೊಸ ನಾಮಕರಣ ತಂತ್ರವನ್ನು ಅನುಸರಿಸಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಇದೇ ವೇಳೆ ಲಷ್ಕರ್ ಎ ತಯ್ಯಬ ಮತ್ತು ಜಮಾದ್ ಉದ್ ದಾವಾ ಸೇರಿದಂತೆ ಪಾಕಿಸ್ಥಾನದಲ್ಲಿ ಕ್ರಿಯಾಶೀಲವಾಗಿರುವ ಎಲ್ಲ ಉಗ್ರ ಸಂಘಟನೆಗಳಿಗೆ ಸದ್ದಿಲ್ಲದೆ ಕೆಲಸ ಮಾಡಿಕೊಂಡಿರಲು ಸರಕಾರ ಆದೇಶಿಸಿರುವುದಾಗಿ ತಿಳಿದು ಬಂದಿದೆ.
ಜೆಯುಡಿ ಗೆ ಜಮ್ಮು ಕಾಶ್ಮೀರ ಆಂದೋಲನದ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ; ಇದರ ದಾನ-ದತ್ತಿ ವಿಭಾಗವಾಗಿರುವ ಫಲಾಹ್ ಎ ಇನ್ಸಾನಿಯತ್ ಫೌಂಡೇಶನ್ ಗೆ “ರೆಸ್ಕ್ಯೂ, ರಿಲೀಫ್ ಆ್ಯಂಡ್ ಎಜುಕೇಶನ್ ಫೌಂಡೇಶನ್” ನ ಕೆಲಸ ಕಾರ್ಯಗಳ ಹೊಣೆಗಾರಿಕೆಯನ್ನು ನೋಡಿಕೊಳ್ಳುವಂತೆ ಆದೇಶಿಸಲಾಗಿದೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ